AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ 7 ಜನರು ಮೃತ, 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ದುರ್ಘಟನೆ ನಡೆದ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಸ್ಥಳೀಯರ ಜತೆಗೂಡಿ ಬಿದ್ದ ಮನೆಯ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ 7 ಜನರು ಮೃತ, 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 06, 2021 | 10:30 PM

Share

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ ಐವರು ಮೃತಪಟ್ಟ ವಿಷಾದಕರ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿದೆ. 7 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗಂಗವ್ವ ಭೀಮಪ್ಪ(80), ಸತ್ಯವ್ವ ಅರ್ಜುನ್‌(45), ಕಾಶವ್ವ(8), ಪೂಜಾ ಅರ್ಜುನ್‌(8), ಸವಿತಾ ಭೀಮಪ್ಪ(28) ಮೃತರು. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಸ್ಥಳದಲ್ಲೇ ಐವರು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆ ನಡೆದ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಸ್ಥಳೀಯರ ಜತೆಗೂಡಿ ಬಿದ್ದ ಮನೆಯ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಸಚಿವ ಗೋವಿಂದ ಕಾರಜೋಳ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಗ್ರಾಮಕ್ಕೆ ಭೇಟಿ ನೀಡುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ.

ಅರ್ಜುನ್‌ ಖನಗಾವಿ ಅವರು 9 ವರ್ಷಗಳ ಹಿಂದೆ ಮಣ್ಣಿನ ಮನೆ ಕಟ್ಟಿದ್ದರು. ಅದು ಮಣ್ನಿನ ಮನೆಯಾಗಿದ್ದ ಕಾರಣ ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಹೊಸ ಮನೆ ನಿರ್ಮಾಣ ಹಿನ್ನೆಲೆ ಪಕ್ಕದ ಮನೆಗೆ ಶಿಫ್ಟ್ ಆಗಿದ್ದರು. ಮಳೆ ನಿಂತ ನಂತರ ಮಣ್ಣಿನ ಮನೆ ನೋಡಲು ಕುಟುಂಬ ಸಮೇತ ಆಗಮಿಸಿದ್ದರು. ಈ ವೇಳೆ ಏಕಾಏಕಿ ಮಣ್ಣಿನ ಮನೆ ಕುಸಿದು ಬಿದ್ದು ದುರ್ಘಟನೆ ಸಂಭವಿಸಿದೆ. ಗೆಳತಿ ಜತೆ ಹೋಗಿದ್ದ ಪಕ್ಕದ ಮನೆಯ ಬಾಲಕಿ ಕಾಶವ್ವ ಸಹ ಸಾವನ್ನಪ್ಪಿದ್ದಾರೆ.

ಮಂಗಳೂರು: ಅಣಬೆ ಸೇವಿಸಿ 12 ಮಂದಿ ಅಸ್ವಸ್ಥ ಮಂಗಳೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಊಟದ ಜತೆಗೆ ಅಣಬೆ ಪದಾರ್ಥವನ್ನು ಸೇವಿಸಿದ್ದರು. ರಾಘವ (42), ಲತಾ (35), ತ್ರಿಶಾ (10), ಕೇಶವ (45), ಅರ್ಚನಾ (10), ಹೊನ್ನಮ್ಮ (60), ಬೇಬಿ (35) ಸೇರಿ ಇತರರು ಅಸ್ವಸ್ಥ. 12 ಮಂದಿಯೂ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: 

ಸಿಎಂ ಚಾಮರಾಜನಗರ ಭೇಟಿ; ಅಧಿಕಾರ ಕಳೆದುಕೊಳ್ಳುವ ಮೌಢ್ಯ ಅಳಿಸಲು ಮುಂದಾದ ಬೊಮ್ಮಾಯಿ: ಇಲ್ಲಿದೆ ಇತಿಹಾಸ

ಕಟೀಲು ದುರ್ಗಾ ಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ? ಗೊಂದಲಕ್ಕೆ ಇಲ್ಲಿದೆ ಉತ್ತರ

Published On - 9:10 pm, Wed, 6 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ