AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂದ್​ಸಾಗರ್ ಬಳಿ ಮೇಲೆ ಗುಡ್ಡ ಕುಸಿತ: ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರವಾಸಿಗರಿಗೆ ನಿಷೇಧ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರವ ಹಿನ್ನೆಲೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್​ಸಾಗರ್ ಜಲಪಾತ ಬಳಿಯ ರೈಲು ಹಳಿ ಮೇಲೆ ಗುಡ್ಡಕುಸಿತವಾಗಿದೆ. ಈ ಹಿನ್ನೆಲೆ ದೂಧ್ ಸಾಗರ್‌ಗೆ ತೆರಳದಂತೆ ಗೋವಾ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ.

ದೂದ್​ಸಾಗರ್ ಬಳಿ ಮೇಲೆ ಗುಡ್ಡ ಕುಸಿತ: ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರವಾಸಿಗರಿಗೆ ನಿಷೇಧ
ಗುಡ್ಡ ಕುಸಿತ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 17, 2023 | 1:47 PM

Share

ಬೆಳಗಾವಿ: ಪಶ್ಚಿಮ ಘಟ್ಟಗಳ (Western Ghats) ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರವ ಹಿನ್ನೆಲೆ ಕರ್ನಾಟಕ-ಗೋವಾ (Karnataka-Goa) ಗಡಿಭಾಗದಲ್ಲಿರುವ ದೂದ್​ಸಾಗರ್ (Dudhsagar) ಜಲಪಾತ ಬಳಿ ಗುಡ್ಡ ಕುಸಿತವಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ನಿನ್ನೆ (ಜು.16) ಸಂಜೆ 6 ಗಂಟೆಗೆ ರೈಲು ಹಳಿಗಳ ಮೇಲೆ ಮಣ್ಣು, ಬಂಡೆ ಕುಸಿದ ಪರಿಣಾಮ 4 ಗಂಟೆಗಳ ಕಾಲ ಬೆಳಗಾವಿ-ಗೋವಾ ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಟ್ರ್ಯಾಕ್ ಮೇಲೆ ಬಿದ್ದ ಮಣ್ಣು, ಬಂಡೆ ತೆರವು ಮಾಡಿದರು. ಬಳಿಕ ರೈಲುಗಳ ಸಂಚಾರ ಪುನಾರಂಭವಾಯಿತು.

ಇದನ್ನೂ ಓದಿ: ದೂಧ್​ ಸಾಗರ್‌ಗೆ ಟ್ರೆಕ್ಕಿಂಗ್ ತೆರಳಿದ ಯುವಕರಿಗೆ ಬಸ್ಕಿ ಹೊಡೆಸಿದ ಪೊಲೀಸ್; ವಿಡಿಯೋ ವೈರಲ್​

ಸುಂದರವಾದ ದೂಧಸಾಗರ್ ಜಲಪಾತವನ್ನು ನೋಡಲು ವಾರಾಂತ್ಯ ನಿನ್ನೆ (ಜು.16) ಬೆಳಗಾವಿ, ಬಾಗಲಕೋಟೆ ಹಾಗೂ ರಾಜ್ಯದ ವಿವಿಧೆಡೆಯಿಂದ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ತೆರಳಿದ್ದರು. ಅಲ್ಲದೇ ಟ್ರೆಕ್ಕಿಂಗ್​​ಗೆ ಅಂತ ತೆರಳಿದ್ದ ಯುವಕರಿಗೆ ರೈಲ್ವೇ ಪೊಲೀಸ್​ ಹಾಗೂ ಗೋವಾ ಪೊಲೀಸರು ಹೊಡೆಸಿ, ವಾಪಾಸ್ ಕಳುಹಿಸಿದ್ದರು.

ದೂಧ್ ಸಾಗರ್‌ಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ

ದೂಧ್ ಸಾಗರ್‌ಗೆ ತೆರಳದಂತೆ ಗೋವಾ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ. ಮಳೆಗಾಲ ಹಿನ್ನೆಲೆ‌ ಸುರಕ್ಷತೆ ಕಾರಣ ನೀಡಿ ಪ್ರವಾಸಿಗರಿಗೆ ಬ್ಯಾನ್ ಮಾಡಲಾಗಿದ್ದು, 50ಕ್ಕೂ ಹೆಚ್ಚು ಪೊಲೀಸರು, ಅರಣ್ಯ ಸಿಬ್ಬಂದಿ ಹಾಗೂ ರೈಲ್ವೇ ಸಿಬ್ಬಂದಿಯನ್ನು ಗೋವಾ ಸರಕಾರ ಸ್ಥಳದಲ್ಲಿ ನಿಯೋಜನೆ ಮಾಡಿದೆ. ಗೋವಾದಿಂದ ಅನುಮತಿ ನೀಡಿದಲ್ಲಿ ಮಾತ್ರ ದೂದ್ ಸಾಗರ್‌ಗೆ ಟ್ರೆಕ್ಕಿಂಗ್ ತೆರಳಲು ಅನುಮತಿ ದೊರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ