AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂದ್​ಸಾಗರ್ ಬಳಿ ಮೇಲೆ ಗುಡ್ಡ ಕುಸಿತ: ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರವಾಸಿಗರಿಗೆ ನಿಷೇಧ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರವ ಹಿನ್ನೆಲೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್​ಸಾಗರ್ ಜಲಪಾತ ಬಳಿಯ ರೈಲು ಹಳಿ ಮೇಲೆ ಗುಡ್ಡಕುಸಿತವಾಗಿದೆ. ಈ ಹಿನ್ನೆಲೆ ದೂಧ್ ಸಾಗರ್‌ಗೆ ತೆರಳದಂತೆ ಗೋವಾ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ.

ದೂದ್​ಸಾಗರ್ ಬಳಿ ಮೇಲೆ ಗುಡ್ಡ ಕುಸಿತ: ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರವಾಸಿಗರಿಗೆ ನಿಷೇಧ
ಗುಡ್ಡ ಕುಸಿತ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 17, 2023 | 1:47 PM

Share

ಬೆಳಗಾವಿ: ಪಶ್ಚಿಮ ಘಟ್ಟಗಳ (Western Ghats) ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರವ ಹಿನ್ನೆಲೆ ಕರ್ನಾಟಕ-ಗೋವಾ (Karnataka-Goa) ಗಡಿಭಾಗದಲ್ಲಿರುವ ದೂದ್​ಸಾಗರ್ (Dudhsagar) ಜಲಪಾತ ಬಳಿ ಗುಡ್ಡ ಕುಸಿತವಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ನಿನ್ನೆ (ಜು.16) ಸಂಜೆ 6 ಗಂಟೆಗೆ ರೈಲು ಹಳಿಗಳ ಮೇಲೆ ಮಣ್ಣು, ಬಂಡೆ ಕುಸಿದ ಪರಿಣಾಮ 4 ಗಂಟೆಗಳ ಕಾಲ ಬೆಳಗಾವಿ-ಗೋವಾ ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಟ್ರ್ಯಾಕ್ ಮೇಲೆ ಬಿದ್ದ ಮಣ್ಣು, ಬಂಡೆ ತೆರವು ಮಾಡಿದರು. ಬಳಿಕ ರೈಲುಗಳ ಸಂಚಾರ ಪುನಾರಂಭವಾಯಿತು.

ಇದನ್ನೂ ಓದಿ: ದೂಧ್​ ಸಾಗರ್‌ಗೆ ಟ್ರೆಕ್ಕಿಂಗ್ ತೆರಳಿದ ಯುವಕರಿಗೆ ಬಸ್ಕಿ ಹೊಡೆಸಿದ ಪೊಲೀಸ್; ವಿಡಿಯೋ ವೈರಲ್​

ಸುಂದರವಾದ ದೂಧಸಾಗರ್ ಜಲಪಾತವನ್ನು ನೋಡಲು ವಾರಾಂತ್ಯ ನಿನ್ನೆ (ಜು.16) ಬೆಳಗಾವಿ, ಬಾಗಲಕೋಟೆ ಹಾಗೂ ರಾಜ್ಯದ ವಿವಿಧೆಡೆಯಿಂದ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ತೆರಳಿದ್ದರು. ಅಲ್ಲದೇ ಟ್ರೆಕ್ಕಿಂಗ್​​ಗೆ ಅಂತ ತೆರಳಿದ್ದ ಯುವಕರಿಗೆ ರೈಲ್ವೇ ಪೊಲೀಸ್​ ಹಾಗೂ ಗೋವಾ ಪೊಲೀಸರು ಹೊಡೆಸಿ, ವಾಪಾಸ್ ಕಳುಹಿಸಿದ್ದರು.

ದೂಧ್ ಸಾಗರ್‌ಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ

ದೂಧ್ ಸಾಗರ್‌ಗೆ ತೆರಳದಂತೆ ಗೋವಾ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ. ಮಳೆಗಾಲ ಹಿನ್ನೆಲೆ‌ ಸುರಕ್ಷತೆ ಕಾರಣ ನೀಡಿ ಪ್ರವಾಸಿಗರಿಗೆ ಬ್ಯಾನ್ ಮಾಡಲಾಗಿದ್ದು, 50ಕ್ಕೂ ಹೆಚ್ಚು ಪೊಲೀಸರು, ಅರಣ್ಯ ಸಿಬ್ಬಂದಿ ಹಾಗೂ ರೈಲ್ವೇ ಸಿಬ್ಬಂದಿಯನ್ನು ಗೋವಾ ಸರಕಾರ ಸ್ಥಳದಲ್ಲಿ ನಿಯೋಜನೆ ಮಾಡಿದೆ. ಗೋವಾದಿಂದ ಅನುಮತಿ ನೀಡಿದಲ್ಲಿ ಮಾತ್ರ ದೂದ್ ಸಾಗರ್‌ಗೆ ಟ್ರೆಕ್ಕಿಂಗ್ ತೆರಳಲು ಅನುಮತಿ ದೊರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?