AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂದ್​ಸಾಗರ್ ಬಳಿ ಮೇಲೆ ಗುಡ್ಡ ಕುಸಿತ: ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರವಾಸಿಗರಿಗೆ ನಿಷೇಧ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರವ ಹಿನ್ನೆಲೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್​ಸಾಗರ್ ಜಲಪಾತ ಬಳಿಯ ರೈಲು ಹಳಿ ಮೇಲೆ ಗುಡ್ಡಕುಸಿತವಾಗಿದೆ. ಈ ಹಿನ್ನೆಲೆ ದೂಧ್ ಸಾಗರ್‌ಗೆ ತೆರಳದಂತೆ ಗೋವಾ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ.

ದೂದ್​ಸಾಗರ್ ಬಳಿ ಮೇಲೆ ಗುಡ್ಡ ಕುಸಿತ: ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರವಾಸಿಗರಿಗೆ ನಿಷೇಧ
ಗುಡ್ಡ ಕುಸಿತ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: ವಿವೇಕ ಬಿರಾದಾರ|

Updated on: Jul 17, 2023 | 1:47 PM

Share

ಬೆಳಗಾವಿ: ಪಶ್ಚಿಮ ಘಟ್ಟಗಳ (Western Ghats) ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರವ ಹಿನ್ನೆಲೆ ಕರ್ನಾಟಕ-ಗೋವಾ (Karnataka-Goa) ಗಡಿಭಾಗದಲ್ಲಿರುವ ದೂದ್​ಸಾಗರ್ (Dudhsagar) ಜಲಪಾತ ಬಳಿ ಗುಡ್ಡ ಕುಸಿತವಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ನಿನ್ನೆ (ಜು.16) ಸಂಜೆ 6 ಗಂಟೆಗೆ ರೈಲು ಹಳಿಗಳ ಮೇಲೆ ಮಣ್ಣು, ಬಂಡೆ ಕುಸಿದ ಪರಿಣಾಮ 4 ಗಂಟೆಗಳ ಕಾಲ ಬೆಳಗಾವಿ-ಗೋವಾ ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಟ್ರ್ಯಾಕ್ ಮೇಲೆ ಬಿದ್ದ ಮಣ್ಣು, ಬಂಡೆ ತೆರವು ಮಾಡಿದರು. ಬಳಿಕ ರೈಲುಗಳ ಸಂಚಾರ ಪುನಾರಂಭವಾಯಿತು.

ಇದನ್ನೂ ಓದಿ: ದೂಧ್​ ಸಾಗರ್‌ಗೆ ಟ್ರೆಕ್ಕಿಂಗ್ ತೆರಳಿದ ಯುವಕರಿಗೆ ಬಸ್ಕಿ ಹೊಡೆಸಿದ ಪೊಲೀಸ್; ವಿಡಿಯೋ ವೈರಲ್​

ಸುಂದರವಾದ ದೂಧಸಾಗರ್ ಜಲಪಾತವನ್ನು ನೋಡಲು ವಾರಾಂತ್ಯ ನಿನ್ನೆ (ಜು.16) ಬೆಳಗಾವಿ, ಬಾಗಲಕೋಟೆ ಹಾಗೂ ರಾಜ್ಯದ ವಿವಿಧೆಡೆಯಿಂದ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ತೆರಳಿದ್ದರು. ಅಲ್ಲದೇ ಟ್ರೆಕ್ಕಿಂಗ್​​ಗೆ ಅಂತ ತೆರಳಿದ್ದ ಯುವಕರಿಗೆ ರೈಲ್ವೇ ಪೊಲೀಸ್​ ಹಾಗೂ ಗೋವಾ ಪೊಲೀಸರು ಹೊಡೆಸಿ, ವಾಪಾಸ್ ಕಳುಹಿಸಿದ್ದರು.

ದೂಧ್ ಸಾಗರ್‌ಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ

ದೂಧ್ ಸಾಗರ್‌ಗೆ ತೆರಳದಂತೆ ಗೋವಾ ಸರ್ಕಾರ ಪ್ರವಾಸಿಗರಿಗೆ ಸೂಚನೆ ನೀಡಿದೆ. ಮಳೆಗಾಲ ಹಿನ್ನೆಲೆ‌ ಸುರಕ್ಷತೆ ಕಾರಣ ನೀಡಿ ಪ್ರವಾಸಿಗರಿಗೆ ಬ್ಯಾನ್ ಮಾಡಲಾಗಿದ್ದು, 50ಕ್ಕೂ ಹೆಚ್ಚು ಪೊಲೀಸರು, ಅರಣ್ಯ ಸಿಬ್ಬಂದಿ ಹಾಗೂ ರೈಲ್ವೇ ಸಿಬ್ಬಂದಿಯನ್ನು ಗೋವಾ ಸರಕಾರ ಸ್ಥಳದಲ್ಲಿ ನಿಯೋಜನೆ ಮಾಡಿದೆ. ಗೋವಾದಿಂದ ಅನುಮತಿ ನೀಡಿದಲ್ಲಿ ಮಾತ್ರ ದೂದ್ ಸಾಗರ್‌ಗೆ ಟ್ರೆಕ್ಕಿಂಗ್ ತೆರಳಲು ಅನುಮತಿ ದೊರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahantesh Kurbet
Mahantesh Kurbet
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್