AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರರ ಕುರಿತು ಪಠ್ಯದಲ್ಲಿ ತಪ್ಪು ಮಾಹಿತಿ ಆರೋಪ; ದೋಷ ಸರಿಪಡಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟ ಬಸವರಾಜ ರೊಟ್ಟಿ

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಬಸವೇಶ್ವರರ ಕುರಿತು ಪಠ್ಯದಲ್ಲಿ ತಪ್ಪು ಮಾಹಿತಿ ಆರೋಪ; ದೋಷ ಸರಿಪಡಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟ ಬಸವರಾಜ ರೊಟ್ಟಿ
ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಪ್ರತಿಭಟನೆ
TV9 Web
| Edited By: |

Updated on:Jun 02, 2022 | 4:08 PM

Share

ಬೆಳಗಾವಿ: ಕುವೆಂಪು ಹಾಗೂ ಬಸವೇಶ್ವರರ ಕುರಿತಂತೆ ಪಠ್ಯದಲ್ಲಿ ಮಾಡಿರುವ ಪರಿಷ್ಕರಣೆಗೆ ವ್ಯಾಪಕ ವಿರೋಧ ಮುಂದುವರಿದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ವಿರುದ್ಧ ಲಿಂಗಾಯತ ಸಮುದಾಯ ಸಿಡಿದೆದ್ದಿದೆ. ಬಸವಣ್ಣನವರ ಬಗ್ಗೆ ಪಠ್ಯದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆ ಬೆಳಗಾವಿ ಡಿಸಿ ಕಚೇರಿ ಎದುರು ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಪ್ರತಿಭಟನೆ ನಡೆಸಿದೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. 9ನೇ ತರಗತಿ ಪಠ್ಯದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆದಿದ್ದು ತಪ್ಪು. ಪರಿಷ್ಕೃತ ಪಠ್ಯದಲ್ಲಿನ ಎಲ್ಲ ದೋಷ ಸರಿಪಡಿಸಿ ಪಠ್ಯಪುಸ್ತಕ ಮರುಮುದ್ರಿಸಿ ಹಂಚಬೇಕು. ಒಂದು ವಾರದಲ್ಲಿ ಎಲ್ಲ ದೋಷ ನಿವಾರಿಸದಿದ್ದರೆ ಸರ್ಕಾರ ವಿರುದ್ಧ ಉಗ್ರಹೋರಾಟ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಮನೀಶ್ ಸಿಸೋಡಿಯಾರನ್ನು ಬಂಧಿಸಲಿದೆ ಕೇಂದ್ರ; ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಮೋದಿಗೆ ಕೇಜ್ರಿವಾಲ್ ಮನವಿ

ಇದರ ನಡುವೆ ಬಸವೇಶ್ವರರ ಬಗ್ಗೆ ಪಠ್ಯದಲ್ಲಿ ಬರೆದಿರುವ ಅಂಶ ಸರಿಯಿಲ್ಲ ಎಂಬ ಒತ್ತಡವನ್ನು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯರು ತೀವ್ರಗೊಳಿಸಿದ್ದಾರೆ. ಸರ್ಕಾರ ಕೂಡಲೇ ಹೊಸ ಪಾಠವನ್ನು ಕೈಬಿಡಬೇಕು. ಇದರಲ್ಲಿ ಬಸವಣ್ಣರ ಆಶಯಗಳಿಗೆ ತದ್ವಿರುದ್ಧವಾಗಿ ಬರೆಯಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ. ಇದನ್ನೂ ಓದಿ; ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿ ಕಾಬೂಲ್‌ಗೆ ಅಧಿಕೃತ ಭೇಟಿ ನೀಡಿದ ಭಾರತ

Published On - 4:08 pm, Thu, 2 June 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?