AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚನೆ, ಮಹಾಮೇಳಾವಗೆ ಅವಕಾಶವಿಲ್ಲ; ಡಿಸಿ ನಿತೇಶ್​ ಪಾಟೀಲ್​​

ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅಧಿವೇಶನ ಮಾಡಿದ್ದೇವೆ. ಸರ್ಕಾರ ಕೊಟ್ಟ ಅನುದಾನವನ್ನು ಉಳಿತಾಯ ಮಾಡಿದ್ದೇವೆ. ನ. 7ರಂದು ಬೆಳಗಾವಿಗೆ ಸಭಾಪತಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚನೆ, ಮಹಾಮೇಳಾವಗೆ ಅವಕಾಶವಿಲ್ಲ; ಡಿಸಿ ನಿತೇಶ್​ ಪಾಟೀಲ್​​
ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​
Sahadev Mane
| Updated By: ವಿವೇಕ ಬಿರಾದಾರ|

Updated on:Oct 31, 2023 | 1:59 PM

Share

ಬೆಳಗಾವಿ ಅ.31: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Winter session) ಡಿಸೆಂಬರ್​ನಲ್ಲಿ ನಡೆಯಲಿದೆ. ಚಳಿಗಾಲದ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚಿಸಲಾಗಿದೆ. ಬೆಳಗಾವಿ (Belagavi) ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅಧಿವೇಶನ ಮಾಡಿದ್ದೇವೆ. ಸರ್ಕಾರ ಕೊಟ್ಟ ಅನುದಾನವನ್ನು ಉಳಿತಾಯ ಮಾಡಿದ್ದೇವೆ. ನ. 7ರಂದು ಬೆಳಗಾವಿಗೆ ಸಭಾಪತಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (Nitesh Patil) ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಳೆ (ನ.1) ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣದ ಸುವರ್ಣ ಸಂಭ್ರಮ ಆಚರಣೆಯನ್ನು ಭವ್ಯವಾಗಿ ಮಾಡುತ್ತಿದ್ದೇವೆ. ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಲಿದ್ದಾರೆ. ತಾಯಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿ.4ರಿಂದ ಡಿ.15ರವರೆಗೆ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ: ಸಚಿವ ಸತೀಶ್ ಜಾರಕಿಹೊಳಿ

100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಐದು ಲಕ್ಷ ಜನರು ರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.30ಕ್ಕೆ ರಾಜ್ಯೋತ್ಸವ ಮೆರವಣಿಗೆ ಚಾಲನೆ ಸಿಗಲಿದೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವ ಜಿಲ್ಲೆಯಾದ್ಯಂತ ನಡೆಯಲಿದೆ. ಇನ್ನು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಕೊಟ್ಟಿಲ್ಲ, ಕೊಡುವುದಿಲ್ಲ ಎಂದರು.

ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದೇವೆ. ಕರಾಳ‌ ದಿನಕ್ಕೂ ಅವಕಾಶವಿಲ್ಲ. ಅಧಿವೇಶನ ವೇಳೆಯೂ ಮಹಾಮೇಳಾವಗೆ ಅವಕಾಶ ಕೊಡುವುದಿಲ್ಲ. ಕಳೆದ ವರ್ಷವೂ ಅವಕಾಶ ಕೊಟ್ಟಿಲ್ಲ. ಈ ವರ್ಷವೂ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆಯ ಪ್ರವೇಶಿಸದಂತೆ ಎಸ್ಪಿ ಮತ್ತು ಪೊಲೀಸ್ ಕಮೀಷನರ್ ಕ್ರಮವಹಿಸುತ್ತಾರೆ‌ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:57 pm, Tue, 31 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ