AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚನೆ, ಮಹಾಮೇಳಾವಗೆ ಅವಕಾಶವಿಲ್ಲ; ಡಿಸಿ ನಿತೇಶ್​ ಪಾಟೀಲ್​​

ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅಧಿವೇಶನ ಮಾಡಿದ್ದೇವೆ. ಸರ್ಕಾರ ಕೊಟ್ಟ ಅನುದಾನವನ್ನು ಉಳಿತಾಯ ಮಾಡಿದ್ದೇವೆ. ನ. 7ರಂದು ಬೆಳಗಾವಿಗೆ ಸಭಾಪತಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚನೆ, ಮಹಾಮೇಳಾವಗೆ ಅವಕಾಶವಿಲ್ಲ; ಡಿಸಿ ನಿತೇಶ್​ ಪಾಟೀಲ್​​
ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​
Sahadev Mane
| Edited By: |

Updated on:Oct 31, 2023 | 1:59 PM

Share

ಬೆಳಗಾವಿ ಅ.31: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Winter session) ಡಿಸೆಂಬರ್​ನಲ್ಲಿ ನಡೆಯಲಿದೆ. ಚಳಿಗಾಲದ ಅಧಿವೇಶನಕ್ಕೆ 10 ವಿವಿಧ ಸಮಿತಿ ರಚಿಸಲಾಗಿದೆ. ಬೆಳಗಾವಿ (Belagavi) ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅಧಿವೇಶನ ಮಾಡಿದ್ದೇವೆ. ಸರ್ಕಾರ ಕೊಟ್ಟ ಅನುದಾನವನ್ನು ಉಳಿತಾಯ ಮಾಡಿದ್ದೇವೆ. ನ. 7ರಂದು ಬೆಳಗಾವಿಗೆ ಸಭಾಪತಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (Nitesh Patil) ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಳೆ (ನ.1) ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣದ ಸುವರ್ಣ ಸಂಭ್ರಮ ಆಚರಣೆಯನ್ನು ಭವ್ಯವಾಗಿ ಮಾಡುತ್ತಿದ್ದೇವೆ. ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಲಿದ್ದಾರೆ. ತಾಯಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿ.4ರಿಂದ ಡಿ.15ರವರೆಗೆ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ: ಸಚಿವ ಸತೀಶ್ ಜಾರಕಿಹೊಳಿ

100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಐದು ಲಕ್ಷ ಜನರು ರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.30ಕ್ಕೆ ರಾಜ್ಯೋತ್ಸವ ಮೆರವಣಿಗೆ ಚಾಲನೆ ಸಿಗಲಿದೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವ ಜಿಲ್ಲೆಯಾದ್ಯಂತ ನಡೆಯಲಿದೆ. ಇನ್ನು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಕೊಟ್ಟಿಲ್ಲ, ಕೊಡುವುದಿಲ್ಲ ಎಂದರು.

ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದೇವೆ. ಕರಾಳ‌ ದಿನಕ್ಕೂ ಅವಕಾಶವಿಲ್ಲ. ಅಧಿವೇಶನ ವೇಳೆಯೂ ಮಹಾಮೇಳಾವಗೆ ಅವಕಾಶ ಕೊಡುವುದಿಲ್ಲ. ಕಳೆದ ವರ್ಷವೂ ಅವಕಾಶ ಕೊಟ್ಟಿಲ್ಲ. ಈ ವರ್ಷವೂ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆಯ ಪ್ರವೇಶಿಸದಂತೆ ಎಸ್ಪಿ ಮತ್ತು ಪೊಲೀಸ್ ಕಮೀಷನರ್ ಕ್ರಮವಹಿಸುತ್ತಾರೆ‌ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:57 pm, Tue, 31 October 23

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ