Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಹೃದಯ ಕನ್ನಡಿಗನಲ್ಲಿ ಮಿಡಿಯಿತು; ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಕಸಿ

ಮೆದುಳು ನಿಷ್ಕ್ರೀಯಗೊಂಡ 52 ವರ್ಷದ ವ್ಯಕ್ತಿಯ ಕುಟುಂಬದ ಜೊತೆ ಮಾತನಾಡಿ ಹೃದಯ ದಾನಕ್ಕೆ ಒಪ್ಪಿಗೆ ಪಡೆದಿದ್ದಾರೆ. ಅತ್ಯಾಧುನಿಕ ಆರ್ಥೋಟಾಪಿಕ್ ತಂತ್ರಜ್ಞಾನ ಬಳಸಿ ಹೃದಯ ಜೋಡಿಸಲಾಗಿದೆ.

ಮಹಾರಾಷ್ಟ್ರದ ಹೃದಯ ಕನ್ನಡಿಗನಲ್ಲಿ ಮಿಡಿಯಿತು; ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಕಸಿ
ಪ್ರಾತಿನಿಧಿಕ ಚಿತ್ರ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Mar 23, 2021 | 4:57 PM

ಬೆಳಗಾವಿ: 52 ವರ್ಷದ ವ್ಯಕ್ತಿಯ ಹೃದಯವನ್ನು 17 ವರ್ಷದ ಬಾಲಕನಿಗೆ ಕಸಿ ಮಾಡುವಲ್ಲಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆ ಯಶಸ್ವಿಯಾಗಿದೆ. ಪಾರ್ಶ್ವವಾಯುವಿನಿಂದ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಹೃದಯವನ್ನು ಬಾಲಕನಿಗೆ ಕಸಿ ಮಾಡಲಾಗಿದೆ. ಸತತ 6 ಗಂಟೆಗಳ ಕಾಲ 19 ಸಿಬ್ಬಂದಿಯಿಂದ ಫೆಬ್ರವರಿ 26, 2021ರಂದು ಬಾಲಕನಿಗೆ ಹೃದಯ ಕಸಿ ಮಾಡಲಾಗಿತ್ತು. ಆರೋಗ್ಯ ಕರ್ನಾಟಕ, ಆಯುಷ್ಯಮಾನ್ ಭಾರತ್ ಅಡಿಯಲ್ಲಿ ಉಚಿತ ಚಿಕಿತ್ಸೆ ಮಾಡಿದ್ದು, ಕಸಿ ಮಾಡಿ 21 ದಿನ ಕಳೆದಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಎನ್ನುವುದು ಎಲ್ಲರಿಗೂ ಖುಷಿ ತಂದುಕೊಟ್ಟಿದೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಹಾರಾಷ್ಟ್ರದ ಮೃತ ವ್ಯಕ್ತಿಯ ಕುಟುಂಬಸ್ಥರ ಮನವೊಲಿಸಿ ಈ ಹೃದಯ ಕಸಿ ಮಾಡಲಾಗಿದೆ. ಬಾಲಕ ಡಯಲೇಟೆಡ್ ಕಾರ್ಡಿಯೋಮಯೊಪತಿ ಎಂಬ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ, ಇದರಿಂದಾಗಿ ಹೃದಯ ಕಸಿ ಮಾಡಲಾಗಿದೆ. ಒಟ್ಟಾರೆಯಾಗಿ ಈ ಹೃದಯ ಜೋಡಣೆಯಿಂದ ಒಂದು ಬಾಲಕನಿಗೆ ಜೀವದಾನ ಮಾಡಿದಂತಾಗಿದೆ.

ಕೆಎಲ್‌ಇ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ 2018ರ ಫೆಬ್ರವರಿಯಲ್ಲಿ ಹೃದಯ ಮರು ಜೊಡಣೆ ನಡೆದಿತ್ತು. ಬಳಿಕ ಈಗ ಮತ್ತೊಂದು ಹೃದಯ ಕಸಿ ಯಶಸ್ವಿಯಾಗಿದೆ. ಬಾಲಕ ಡಯಲೇಟೆಡ್ ಕಾರ್ಡಿಯೋಮಯೊಪತಿ ಎಂಬ ಹೃದಯ ಕಾಯಿಲೆಗೆ ಒಳಗಾಗಿದ್ದರು, ಇದರಿಂದ ಹೃದಯ ಅಶಕ್ತವಾಗಿ ರಕ್ತ ಪಂಪ್ ಮಾಡುತ್ತಿರಲಿಲ್ಲ. ಪರಿಣಾಮ ಬಾಲಕನಲ್ಲಿ ಉಸಿರಾಟದ ತೊಂದರೆ ಉಂಟಾಗಿತ್ತು. ಹೀಗಾಗಿ ಕೃತಕ ಆಮ್ಲಜನಕದ ಸಹಾಯ ಪಡೆಯುತ್ತಿದ್ದರು.

ಮರು ಜೋಡಣೆಯೊಂದೆ ಇದಕ್ಕೆ ಪರಿಹಾರ ಎಂದು ಮನಗಂಡ ವೈದ್ಯರ ತಂಡ. ರಾಜ್ಯ ಸರ್ಕಾರದ ಅಂಗಾಂಗ ಕಸಿ ಪ್ರಾಧಿಕಾರದ ಜೀವನ ಸಾರ್ಥಕತೆ ಕಾರ್ಯಕ್ರಮದಲ್ಲಿ ರೋಗಿಯ ಹೆಸರನ್ನು ನೋಂದಾಯಿಸಿದ್ದಾರೆ. ಬಳಿಕ ಮೆದುಳು ನಿಷ್ಕ್ರಿಯಗೊಂಡ 52 ವರ್ಷದ ವ್ಯಕ್ತಿಯ ಕುಟುಂಬದ ಜೊತೆ ಮಾತನಾಡಿ ಹೃದಯ ದಾನಕ್ಕೆ ಒಪ್ಪಿಗೆ ಪಡೆದಿದ್ದಾರೆ. ಅತ್ಯಾಧುನಿಕ ಆರ್ಥೋಟಾಪಿಕ್ ತಂತ್ರಜ್ಞಾನ ಬಳಸಿ ಹೃದಯ ಜೋಡಿಸಲಾಗಿದೆ. ಈ ಹಿಂದೆ ಬಾಲಕನಿಗೆ ಊಟ ಮಾಡಲಾಗುತ್ತಿರಲಿಲ್ಲ ಆದರೆ ಈಗ ಊಟ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಉತ್ತಮ ಆರೋಗ್ಯಕ್ಕೆ ವೈದ್ಯರ ಸಲಹೆ: ಬ್ರೈನ್​ ಟ್ರಾಮಾ ಮತ್ತು ಹೆಡ್​ ಇಂಜ್ಯುರಿಗೆ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು