AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ ಚುನಾವಣೆ: ಮತದಾರರಿಗೆ ಪ್ರಧಾನಿ ಮೋದಿ ಭಾವಚಿತ್ರದ ಚೀಟಿ; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ, ಕಿಡಿಕಿಡಿ

ವೈಭವ ನಗರದ ವಾರ್ಡ್ 45ರಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸುದ್ದಿ ತಿಳಿದು ಮತಗಟ್ಟೆಗೆ ಆಗಮಿಸಿದ ಸಿಬ್ಬಂದಿಯನ್ನೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಲಿಕೆ ಚುನಾವಣೆ: ಮತದಾರರಿಗೆ ಪ್ರಧಾನಿ ಮೋದಿ ಭಾವಚಿತ್ರದ ಚೀಟಿ; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ, ಕಿಡಿಕಿಡಿ
ಲಕ್ಷ್ಮೀ ಹೆಬ್ಬಾಳ್ಕರ್
TV9 Web
| Updated By: guruganesh bhat|

Updated on: Sep 03, 2021 | 2:51 PM

Share

ಬೆಳಗಾವಿ: ಇಂದು (ಸೆಪ್ಟೆಂಬರ್ 3) ನಡೆಯುತ್ತಿರುವ ಬೆಳಗಾವಿ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರದ ಚೀಟಿ ಕೊಟ್ಟು ಮತದಾನ ಮಾಡಲು ಪ್ರಚೋದಿಸುತ್ತಿದ್ದಾರೆಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಅಲ್ಲದೇ ಅವರು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರ ಬಳಿಯಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ. ನಂತರ ಬಿಜೆಪಿ ನಾಯಕರೇ ಮತದಾರರಿಗೆ ಚೀಟಿ ಕೊಟ್ಟು ಕಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿಯಿಂದ ಮಾಜಿ ಮೇಯರ್ ಬಸಪ್ಪ ಅವರ ಪತ್ನಿ ಸ್ಪರ್ಧೆ ಮಾಡಿದ್ದು, ಬಸಪ್ಪ ಅವರೇ ಈ ಗುರುತಿನ ಚೀಟಿ ಕೊಟ್ಟುಕಳುಹಿಸಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಈ ಬೆನ್ನಲ್ಲೇ, ವೈಭವ ನಗರದ ವಾರ್ಡ್ 45ರಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸುದ್ದಿ ತಿಳಿದು ಮತಗಟ್ಟೆಗೆ ಆಗಮಿಸಿದ ಸಿಬ್ಬಂದಿಯನ್ನೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಗೊಂದಲದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ವಾರ್ಡ್ ನಂ 32 ರ ಕಾಂಗ್ರೆಸ್ ಅಭ್ಯರ್ಥಿ ಅನಂತಕುಮಾರ ಬ್ಯಾಕೋಡ, ಬಿಜೆಪಿಗೆ ಹಾಗೂ ಎಂಇಎಎಸ್​ಗೆ ಸೋಲುವ ಮುನ್ಸೂಚನೆ ಸಿಕ್ಕಿದೆ. ಅದಕ್ಕೆ ಮರು ಚುನಾವಣೆ ಮಾತನಾಡುತ್ತಿದ್ದಾರೆ. ಒಂದು ವಾರ್ಡ್​ನಲ್ಲಿ ಹೆಸರು ಇರದಿದ್ದರೂ ಪಕ್ಕದ ವಾರ್ಡ್​ನಲ್ಲಿ ಹೆಸರು ಇರುತ್ತದೆ‌. ದಯವಿಟ್ಟು ಎಲ್ಲ ಮತದಾರರು ಮತ ಹಾಕಬೇಕು ಎಂದು ಹೇಳಿದರು.

ಇದನ್ನೂ ಓದಿ: 

ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಶುರು

ಪೌರ ಕಾರ್ಮಿಕರಿಗೆ ಸದ್ಯದಲ್ಲೇ ಕೈಮಗ್ಗದ ಸಮವಸ್ತ್ರ; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಹೊಸ ಪ್ರಯೋಗ

(Belagavi Local Body Election MLA Laxmi Hebbalkar accused BJP leaders give PM Modi picture for voting)

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​