AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?

ಕೊಟ್ಟ ಸಾಲ ವಾಪಸ್ ಕೊಡಲಿಲ್ಲ ಎಂದು ಮನನೊಂದು ಬೆಳಗಾವಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಡೆತ್​​ ನೋಟ್ ಬರೆದಿಟ್ಟಿದ್ದು, ಹಲವ ಹೆಸರಗಳನ್ನು ಉಲ್ಲೇಖಿಸಿದ್ದಾನೆ. ಅದರಲ್ಲೂ ಮುಖ್ಯವಾಗಿ ಡೆತ್​ ನೋಟ್​​ನಲ್ಲಿ DySP, ಪಿಎಸ್​ಐ ಹೆಸರುಗಳನ್ನ ಉಲ್ಲೇಖಿಸಿ ಗಂಭೀರ ಆರೋಪ ಮಾಡಿದ್ದಾನೆ. ಈ ಬಗ್ಗೆ ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?
ರವೀಂದ್ರ ದಾನವ್ವಗೋಳ
ಸಹದೇವ್​ ಮಾನೆ
| Edited By: |

Updated on:Jun 02, 2026 | 4:18 PM

Share

ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, ಈ ಪ್ರಕರಣ ಸಂಚಲನ ಮೂಡಿಸಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
  • ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ನೇಣಿಗೆ ಶರಣು
  • ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಘಟನೆ
  • ನನಗೆ ಜೀವ ಬೆದರಿಕೆ ಇರುವುದರಿಂದ ಆತ್ಮಹತ್ಯೆ ಎಂದು ಉಲ್ಲೇಖ
  • ಡೆತ್​ನೋಟ್​ನಲ್ಲಿ ಹಲವರ ಹೆಸರು ಉಲ್ಲೇಖಿಸಿರುವ ಮೃತ ರವೀಂದ್ರ

ಆತ್ಮಹತ್ಯೆ ಮಾಡಿಕೊಂಡಿರುವ ರವೀಂದ್ರ, ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ಎಂಬುವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದ್ರೆ, ಈ ಹಣವನ್ನು ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ವಾಪಸ್ ಕೊಟ್ಟಿಲ್ಲ. ಬದಲಾಗಿ ಹಣ ಕೇಳಿದ್ದಕ್ಕೆ ರವೀಂದ್ರಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನ್ಯಾಯ ಕೊಡಿಸಿ ಎಂದು ರವೀಂದ್ರ, ಪಿಎಸ್‌ಐ ಆನಂದ, ಹಿಂದಿನ ಡಿವೈಎಸ್​​ಪಿ ಮುಲ್ಲಾಗೆ ಮನವಿ ಮಾಡಿದ್ದು, ಪೊಲೀಸರು ಸಹ ಇದಕ್ಕೆ ಕ್ಯಾರೇ ಎಂದಿಲ್ಲ. ಅಲ್ಲದೇ ಪೊಲೀಸ ಸಹ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ಆತ್ಮಹತ್ಯೆಗೆ ಮುನ್ನ ಡೆತ್​ ನೋಟ್​​ನಲ್ಲಿ ಬರೆದಿಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಮೂಡಲಗಿ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಇನ್ನು ಮೃತ ರವೀಂದ್ರ ದಾನವ್ವಗೋಳ ಪತ್ನಿ ದೂರಿನ ಮೇರೆಗೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಡೆತ್​​ನೋಟ್​​ನಲ್ಲಿ ಡಿವೈಎಸ್ಪಿ ಹಾಗೂ ಪಿಎಸ್​​ಐ ಹೆಸರು ಉಲ್ಲೇಖಿಸಿ ಗಂಭೀರ ಆರೋಪ ಮಾಡಿದ್ದು, ಸಂಚಲ ಮೂಡಿಸಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಇದರ ಸತ್ಯಾಸತ್ಯೆಯನ್ನು ಪತ್ತೆ ಮಾಡಬೇಕಿದೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Tue, 2 June 26

Follow Us
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ