
ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, ಈ ಪ್ರಕರಣ ಸಂಚಲನ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ರವೀಂದ್ರ, ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ ಪೂಜಾರಿ ಎಂಬುವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದ್ರೆ, ಈ ಹಣವನ್ನು ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ ಪೂಜಾರಿ ವಾಪಸ್ ಕೊಟ್ಟಿಲ್ಲ. ಬದಲಾಗಿ ಹಣ ಕೇಳಿದ್ದಕ್ಕೆ ರವೀಂದ್ರಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನ್ಯಾಯ ಕೊಡಿಸಿ ಎಂದು ರವೀಂದ್ರ, ಪಿಎಸ್ಐ ಆನಂದ, ಹಿಂದಿನ ಡಿವೈಎಸ್ಪಿ ಮುಲ್ಲಾಗೆ ಮನವಿ ಮಾಡಿದ್ದು, ಪೊಲೀಸರು ಸಹ ಇದಕ್ಕೆ ಕ್ಯಾರೇ ಎಂದಿಲ್ಲ. ಅಲ್ಲದೇ ಪೊಲೀಸ ಸಹ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ನಲ್ಲಿ ಬರೆದಿಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಮೂಡಲಗಿ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಇನ್ನು ಮೃತ ರವೀಂದ್ರ ದಾನವ್ವಗೋಳ ಪತ್ನಿ ದೂರಿನ ಮೇರೆಗೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಡೆತ್ನೋಟ್ನಲ್ಲಿ ಡಿವೈಎಸ್ಪಿ ಹಾಗೂ ಪಿಎಸ್ಐ ಹೆಸರು ಉಲ್ಲೇಖಿಸಿ ಗಂಭೀರ ಆರೋಪ ಮಾಡಿದ್ದು, ಸಂಚಲ ಮೂಡಿಸಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಇದರ ಸತ್ಯಾಸತ್ಯೆಯನ್ನು ಪತ್ತೆ ಮಾಡಬೇಕಿದೆ.
Published On - 4:17 pm, Tue, 2 June 26