AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಭೀಕರ ಅಗ್ನಿ ದುರಂತ; ಶಾರ್ಟ್​ಸರ್ಕ್ಯೂಟ್​ಗೆ 10ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಬೆಳಗಾವಿಯಲ್ಲಿ ಶಾರ್ಟ್​ಸರ್ಕ್ಯೂಟ್​ಗೆ 10ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿರುವ ಘಟನೆಯೊಂದು ನಡೆದಿದೆ. ಸ್ಥಳಕ್ಕೆ ಶಾಸಕ ಅನಿಲ್ ಬೆನಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಭೀಕರ ಅಗ್ನಿ ದುರಂತ; ಶಾರ್ಟ್​ಸರ್ಕ್ಯೂಟ್​ಗೆ 10ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on:Dec 25, 2022 | 8:26 AM

Share

ಬೆಳಗಾವಿ: ಶಾರ್ಟ್​ ಸರ್ಕ್ಯೂಟ್ (Short Circuit in Belagavi)​ ಆಗಿ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದಲ್ಲಿದ್ದ ಅಂಗಡಿಗಳಿಗೂ ಆವರಿಸಿದ ಪರಿಣಾಮ 10ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದ ಘಟನೆ ಮಾರ್ಕೆಟ್​ ಪೊಲೀಸ್ ಠಾಣಾ ವ್ಯಾಪ್ತಿಯ ಪೋರ್ಟ್​ ರಸ್ತೆಯಲ್ಲಿ ನಡೆದಿದೆ. 2 ಟೈರ್​ ಅಂಗಡಿಗಳು, ಬ್ಯಾಟರಿ ಅಂಗಡಿ, ಟ್ರಾನ್ಸ್​ಪೋರ್ಟ್ ಶಾಪ್​, ಟೂಲ್ಸ್ ಅಂಗಡಿ, ಸೌದೆ ಡಿಪೋ ಸೇರಿ 10ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿವೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ 12 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ಶಾಸಕ ಅನಿಲ್ ಬೆನಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಇಬ್ಬರು ಡಿಸಿಪಿ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸ್ಥಳದಲ್ಲಿ ಸೇರಿರುವ ಜನರನ್ನು ಪೊಲೀಸ್ ಸಿಬ್ಬಂದಿ ನಿಭಾಯಿಸುತ್ತಿದ್ದಾರೆ.

ನೂರಾರು ಎಕರೆ ಜಮೀನಿನಲ್ಲಿನ ಮೆಕ್ಕೆ ಜೋಳ ಭಸ್ಮ

ದಾವಣಗೆರೆ: ಆಕಸ್ಮಿಕ ಬೆಂಕಿ ತಗುಲಿ ಅರಣ್ಯ ಸೇರಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಮೆಕ್ಕೆ ಜೋಳ ನಾಶವಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಕೊಯ್ಲು ಮಾಡಿದ ಮತ್ತು ಕೊಯ್ಲು ಮಾಡಬೇಕಿದ್ದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ. ಹೊನ್ನಾಳಿ ಮತ್ತು ಶಿವಮೊಗ್ಗ ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು. ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ್ದ ಗ್ರಾಮದ ಹಲವು ರೈತರಿಗೆ ಆಕಸ್ಮಿಕ ಬೆಂಕಿ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದದ್ದಾರೆ. ಒಟ್ಟು ನಷ್ಟದ ಮಾಹಿತಿ ತನಿಖೆಯಿಂದ ತಿಳಿದುಬರಕಿದೆ.

Published On - 7:44 am, Sun, 25 December 22

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ