AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್​​, ಸದ್ರುದ್ದಿನ್ ಜೊತೆ ಓಡಿ ಹೋಗಿದ್ದಳು ಯುವತಿ

ಬೆಳಗಾವಿಯ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ರಾಧಿಕಾ ಮುಚ್ಚಂಡಿ ಅಪಹರಣ ಪ್ರಕರಣ ತಿರುವು ಪಡೆದುಕೊಂಡಿದೆ. ರಾಧಿಕಾ ತಾನು ಸ್ವ ಇಚ್ಛೆಯಿಂದ ಸದ್ರುದ್ದಿನ್ ಜೊತೆ ಹೋಗಿದ್ದಾಗಿ ಪೊಲೀಸರ ಮುಂದೆ ಹೇಳಿದ್ದಾರೆ. ಇಬ್ಬರೂ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ. ರಾಧಿಕಾ ತಾಯಿಯ ವಿರೋಧದಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಇಬ್ಬರ ಹೇಳಿಕೆ ದಾಖಲಿಸಿಕೊಂಡು ಕಳುಹಿಸಿದ್ದಾರೆ.

ಬೆಳಗಾವಿ ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್​​, ಸದ್ರುದ್ದಿನ್ ಜೊತೆ ಓಡಿ ಹೋಗಿದ್ದಳು ಯುವತಿ
ರಾಧಿಕಾ ಮುಚ್ಚಂಡಿ, ಸದ್ರುದ್ದಿನ್ ಬೇಪಾರಿ
Sahadev Mane
| Edited By: |

Updated on: Mar 10, 2025 | 10:17 AM

Share

ಬೆಳಗಾವಿ, ಮಾರ್ಚ್​ 10: ನರ್ಸಿಂಗ್ ವಿದ್ಯಾರ್ಥಿನಿಯ (Nursing student) ಅಪಹರಣ ಪ್ರಕರಣ ತಿರುವು ಪಡೆದುಕೊಂಡಿದೆ. “ನಾನು ಸ್ವ ಇಚ್ಛೆಯಿಂದ ಹೋಗಿರುವೆ, ನನ್ನನ್ನು ಯಾರು ಅಪಹರಿಸಲಿಲ್ಲ. ಸದ್ರುದ್ದಿನ್ ಬೇಪಾರಿ ಮತ್ತು ನಾನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ. ನನ್ನ ತಾಯಿ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ನಾನು ಸದ್ರುದ್ದಿನ್ ಬೇಪಾರಿ ಜೊತೆಗೆ ಹೋಗಿದ್ದೆ ಎಂದು ರಾಧಿಕಾ ಮುಚ್ಚಂಡಿ ಬೆಳಗಾವಿ ಗ್ರಾಮಾಂತರ ಪೊಲೀಸರ (Belagavi Police) ಮುಂದೆ ಹೇಳಿದ್ದಾರೆ. ಇಬ್ಬರ ಹೇಳಿಕೆಯನ್ನು ಪಡೆದು ಪೊಲೀಸರು ವಾಪಸ್ ಕಳುಹಿಸಿದ್ದಾರೆ.

ಅಷ್ಟಕ್ಕೂ ನಡೆದಿದ್ದಾದರೂ ಏನು?

ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದ ನಿವಾಸಿಯಾಗಿರುವ 19 ವರ್ಷದ ರಾಧಿಕಾ ಮುಚ್ಚಂಡಿ ನರ್ಸಿಂಗ್ ಕೋರ್ಸ್ ಓದುತ್ತಿದ್ದಳು. ಫೆಬ್ರವರಿ 19ರಂದು ಮನೆಯಿಂದ ಹೊರ ಹೋದ ರಾಧಿಕಾ ವಾಪಸ್​ ಬಂದಿರಲಿಲ್ಲ. ಮಗಳಿಗಾಗಿ ತಾಯಿ ಎಷ್ಟೇ ಹುಡುಕಾಟ ನಡೆಸಿದರೂ ರಾಧಿಕಾ ಮಾತ್ರ ಪತ್ತೆಯಾಗಿರಲಿಲ್ಲ. ಕೊನೆಗೆ ರಾಧಿಕಾ ತಾಯಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸದ್ರುದ್ದಿನ್ ಬೇಪಾರಿ ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಕೇಸ್​ ದಾಖಲಿಸಿಕೊಂಡ ಪೊಲೀಸರು ರಾಧಿಕಾಗಾಗಿ ಹುಡುಕಾಟ ನಡೆಸಿದರು. ರಾಧಿಕಾ ಮತ್ತು ಸದ್ರುದ್ದಿನ್ ಬೇಪಾರಿ ಓಡಿ ಹೋಗಿ ಮುಂಬೈನಲ್ಲಿ ವಾಸವಾಗಿದ್ದಾರೆ ಎಂದು ಪೊಲೀಸರಿಗೆ ಗೊತ್ತಾಗುತ್ತೆ. ಬೆಳಗಾವಿ ಪೊಲೀಸರು ಮುಂಬೈಗೆ ತೆರಳಿ ಇಬ್ಬರನ್ನೂ ಠಾಣೆಗೆ ಕರೆತಂದಿದ್ದಾರೆ. ಠಾಣೆಯಲ್ಲಿ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡು ವಾಪಸ್​ ಕಳುಹಿಸಿದ್ದಾರೆ.

ಇದನ್ನೂ ಓದಿ
Image
ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೆಎಸ್​ಆರ್​ಟಿಸಿ ನೌಕರ
Image
ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ
Image
ಪ್ರೇಯಸಿಯ ಕತ್ತು ಸೀಳಿ ಬಳಿಕ ಅದೇ ಚಾಕುವಿನಿಂದ ಕತ್ತು ಕೊಯ್ದುಕೊಂಡ ಪ್ರಿಯಕರ
Image
ಕುಂಭಮೇಳಕ್ಕೆ​ ತೆರಳುತ್ತಿದ್ದ ಕ್ರೂಸರ್​ ವಾಹನ ಅಪಘಾತ: ಬೆಳಗಾವಿಯ 6 ಸಾವು

ಸದ್ರುದ್ದಿನ್ ಬೇಪಾರಿ ಮೇಲೆ ನಡೆದಿತ್ತು ದಾಳಿ

ರಾಧಿಕಾ ನಾಪತ್ತೆಯಾಗಿ 15 ದಿನ ಬಳಿಕ, ಆಕೆಯ ಸಂಬಂಧಿಕರು ಮಾರ್ಚ್​ 08 ರಂದು ಸದ್ರುದ್ದಿನ್ ಮನೆ ಮೇಲೆ ದಾಳಿ ಮಾಡಿದ್ದರು. ಯುವತಿ ನಾಪತ್ತೆಯಾಗುತ್ತಿದ್ದಂತೆ ಮನೆ ಬಿಟ್ಟಿದ್ದ ಸದ್ರುದ್ದಿನ್ ಪೋಷಕರು, ದಾಳಿಯಾದ ದಿನ ಕೂಡ ಮನೆಯಲ್ಲಿ ಇರಲಿಲ್ಲ.

ಇದನ್ನೂ ಓದಿ: ಕಸದ ತೊಟ್ಟಿಯಲ್ಲಿ ಸಿಕ್ಕ ವಿಶೇಷ ಚೇತನ ಕಂದನಿಗೆ ಇಟಲಿ ದಂಪತಿಯ ಅಪ್ಪುಗೆ

ಹತ್ತಕ್ಕೂ ಅಧಿಕ ಯುವಕರು ಗುಂಪು ಕಟ್ಟಿಕೊಂಡು ಮನೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಮನೆ ಬಾಗಿಲು ಕಿಟಕಿ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಮನೆಯ ಬಾಗಿಲು, ಕಿಟಕಿಯ ಗಾಜುಗಳನ್ನು ಪುಡಿ ಪುಡಿ ಮಾಡಿದ್ದರು. ಮನೆಯಲ್ಲಿದ್ದ ಪಾತ್ರೆ ಸಾಮಾಗ್ರಿಗಳನ್ನ ಕೂಡ ಎತ್ತಿ ಒಡೆದು ಹಾಕಿ ಪರಾರಿಯಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ