AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಶಿವಾಜಿ ಮಹಾರಾಜರ ಚಿತ್ರದ ಅಶ್ಲೀಲ ಎಡಿಟ್; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಅಭಯ್ ಪಾಟೀಲ್ ಆಗ್ರಹ

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ರೀತಿಯಲ್ಲಿ ಫೋಟೋ ಎಡಿಟ್ ಮಾಡಿದ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಹಾನಗರ ಪಾಲಿಕೆ ಸದಸ್ಯರೊಟ್ಟಿಗೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರನ್ನು ಶಾಸಕ ಅಭಯ್ ಪಾಟೀಲ್ ಭೇಟಿ ಮಾಡಿದ್ದು ಕೂಡಲೇ ಕೇಸ್ ದಾಖಲಿಸಿ ಯಾವುದೇ ಮೂಲೆಯಲ್ಲಿದ್ರೂ ಬಂಧಿಸುವಂತೆ ಒತ್ತಾಯಿಸಿದ್ದಾರೆ.

Belagavi News: ಶಿವಾಜಿ ಮಹಾರಾಜರ ಚಿತ್ರದ ಅಶ್ಲೀಲ ಎಡಿಟ್; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಅಭಯ್ ಪಾಟೀಲ್ ಆಗ್ರಹ
ಪೊಲೀಸ್ ಆಯುಕ್ತರನ್ನ ಭೇಟಿ ಮಾಡಿದ ಅಭಯ್ ಪಾಟೀಲ್
TV9 Web
| Edited By: |

Updated on:Jan 25, 2023 | 11:09 AM

Share

ಬೆಳಗಾವಿ: ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ(Chhatrapati Shivaji Maharaj) ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಶಿವಾಜಿ ಮಹಾರಾಜರ ಹಾಗೂ ರಾಮ ಸೀತಾರ ಫೋಟೋಗಳನ್ನ ಎಡಿಟ್ ಮಾಡಿ ಅಪ್ಲೋಡ್‌ ಮಾಡಲಾಗಿದೆ. ಶಿವಾಜಿ ಮಹಾರಾಜರ ಅಶ್ಲೀಲ ಫೋಟೋ ಪೋಸ್ಟ್ ಹಿನ್ನೆಲೆ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್(MLA Abhay Patil) ನಗರ ಪೊಲೀಸ್ ಆಯುಕ್ತರನ್ನ ಭೇಟಿಯಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ರೀತಿಯಲ್ಲಿ ಫೋಟೋ ಎಡಿಟ್ ಮಾಡಿದ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಹಾನಗರ ಪಾಲಿಕೆ ಸದಸ್ಯರೊಟ್ಟಿಗೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರನ್ನು ಶಾಸಕ ಅಭಯ್ ಪಾಟೀಲ್ ಭೇಟಿ ಮಾಡಿದ್ದು ಕೂಡಲೇ ಕೇಸ್ ದಾಖಲಿಸಿ ಯಾವುದೇ ಮೂಲೆಯಲ್ಲಿದ್ರೂ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಶಿವಾಜಿ ಮಹಾರಾಜರ ಅಶ್ಲೀಲ ಎಡಿಟ್ ಫೋಟೋ ವೈರಲ್ ಆಗ್ತಿದೆ. RX ಇಮ್ರಾನ್, ಕಿಂಗ್ ಕೀ ಜಾನ್, ಇಸ್ಲಾಂ ಜಿಂದಾಬಾದ್ ಹೆಸರಿನ ಐಡಿಯಿಂದ ಫೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: Anganwadi Workers Protest: ಬೆಂಗಳೂರಿನ ಥರಗುಟ್ಟುವ ಚಳಿಯಲ್ಲಿ ಕಾರ್ಯಕರ್ತೆಯರು ನಿದ್ರೆ ಮಾಡುವುದು ಸಾಧ್ಯವಿರಲಿಲ್ಲ!

ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಶಾಸಕ ಅಭಯ್ ಪಾಟೀಲ್, ಇಸ್ಲಾಂ ಧರ್ಮದ ಮತಾಂಧ ಫೇಕ್ ಹೆಸರಿನ ಖಾತೆಯಿಂದ ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದಾನೆ. ಬೇರೆ ಬೇರೆ ಅಕೌಂಟ್​ಗಳ ಮೂಲಕ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಬೇರೆ ಬೇರೆ ರೀತಿ ಅಶ್ಲೀಲವಾಗಿ ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ. ಸಮಾಜದಲ್ಲಿ ಬೇರೆ ವಾತಾವರಣ ನಿರ್ಮಾಣ ಆಗ್ತಿದ್ದು ಬೇಗ ಆರೋಪಿ ಬಂಧಿಸುವಂತೆ ಒತ್ತಾಯಿಸಿದ್ದೇನೆ. ಇದೇ ರೀತಿ ಅವರ ಧರ್ಮದ ಬಗ್ಗೆ ಮಾತಾಡಿದ್ರೇ ಇಷ್ಟೊತ್ತಿಗೆ ಬೆಳಗಾವಿ ಅಲ್ಲಾ ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತಿದ್ರೂ ಮತಾಂಧರು. ಇದರ ಹಿಂದೆ ಯಾರಿದ್ದಾರೆ ಕ್ರಮ ಕೈಗೊಳ್ಳುವ ಕೆಲಸ ಪೊಲೀಸರು ಮಾಡಬೇಕು.ಇಂತವರ ವಿರುದ್ಧ ಯುಪಿ ಸಿಎಂ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು. ಇವರ ಆಸ್ತಿ ಮುಟ್ಟುಗೋಲು ಹಾಕಬೇಕು, ಬುಲ್ಡೋಜರ್‌ದಿಂದ ಒಡೆಯಬೇಕು. ವಾತಾವರಣ ಕೆಡಿಸುವ ಕೆಲಸ ಮತಾಂಧರರು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇವರ ವಿರುದ್ಧ ಕಠಿಣ ಕ್ರಮ ಆಗಬೇಕು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು. ಸುಮ್ಮನೆ ಎರಡು ಕೇಸ್ ಹಾಕುವ ಕೆಲಸ ಪೊಲೀಸರು ಮಾಡಬಾರದು. ಆತ ಬೆಳಗಾವಿ ಇದ್ದಾನೋ ಅಥವಾ ಎಲ್ಲಿ ಇದ್ದಾನೋ ಗೊತ್ತಿಲ್ಲ. ಇಸ್ಲಾಮಿಕ್ ಮತಾಂಧರರದ್ದು ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದಿದೆ. ಅದರಲ್ಲಿ ಇದು ಒಂದು ಭಾಗವಾಗಿದ್ದು ಹೊಸ ಕ್ರಮ ಆರಂಭಿಸಿದ್ದಾರೆ. ಇದರಿಂದ ಅವರಿಗೆ ನಷ್ಟ ಆಗುತ್ತೆ ವಿನಃ ಸಮಾಜಕ್ಕೆ ಅನುಕೂಲ ಆಗುದಿಲ್ಲ. ಪೊಲೀಸರು ಬರೀ ಬಂಧನ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:09 am, Wed, 25 January 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ