ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; ಅನ್ಯಕೋಮಿನ ಯುವತಿ ಜೊತೆ ಬಂದಿದಕ್ಕೆ ಯುವಕರ ಗುಂಪಿನಿಂದ ಹಲ್ಲೆ, 8 ಜನರ ವಿರುದ್ಧ ದೂರು

ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್​ಗಿರಿ ಪ್ರಕರಣ ಕಂಡು ಬಂದಿದೆ. ಮಧ್ಯಾಹ್ನ 2.30ಕ್ಕೆ ಅನ್ಯಕೋಮಿನ ಯುವತಿಯೊಂದಿಗೆ ಜ್ಞಾನೇಶ್ವರ ಡವರಿ ಎಂಬ ಹಿಂದೂ ಯುವಕ ಮಾರ್ಕೆಟ್​ಗೆ ಬಂದಿದ್ದ. ಈ ವೇಳೆ ಖಡೇಬಜಾರ್ ಮಾರ್ಕೆಟ್​ನ​ ಖಂಜರ್ ಗಲ್ಲಿ ದರ್ಗಾ ಬಳಿ ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; ಅನ್ಯಕೋಮಿನ ಯುವತಿ ಜೊತೆ ಬಂದಿದಕ್ಕೆ ಯುವಕರ ಗುಂಪಿನಿಂದ ಹಲ್ಲೆ, 8 ಜನರ ವಿರುದ್ಧ ದೂರು
ಘಟನೆ ನಡೆದ ಸ್ಥಳ
Follow us
| Updated By: ಆಯೇಷಾ ಬಾನು

Updated on:Aug 27, 2023 | 8:00 AM

ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್​ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. ಸದ್ಯ ಘಟನೆ ಸಂಬಂಧ ಬೆಳಗಾವಿಯ ಮಾರ್ಕೆಟ್ ಠಾಣೆಯಲ್ಲಿ 8 ಜನರ ವಿರುದ್ಧ ಕೇಸ್ ದಾಖಲಾಗಿದೆ.

ಮಧ್ಯಾಹ್ನ 2.30ಕ್ಕೆ ಅನ್ಯಕೋಮಿನ ಯುವತಿಯೊಂದಿಗೆ ಜ್ಞಾನೇಶ್ವರ ಡವರಿ ಎಂಬ ಹಿಂದೂ ಯುವಕ ಮಾರ್ಕೆಟ್​ಗೆ ಬಂದಿದ್ದ. ಈ ವೇಳೆ ಖಡೇಬಜಾರ್ ಮಾರ್ಕೆಟ್​ನ​ ಖಂಜರ್ ಗಲ್ಲಿ ದರ್ಗಾ ಬಳಿ ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಮಂಗಳೂರು: ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ; ಏಳು ಜನ ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಮೂಲದ ಜ್ಞಾನೇಶ್ವರ ಡವರಿ ಮತ್ತು ಅನ್ಯಕೋಮಿನ ಯುವತಿ ಒಟ್ಟಾಗಿ ಮಾರ್ಕೆಟ್​ಗೆ ಬಂದಿದ್ದರು. ಜ್ಞಾನೇಶ್ವರ ಊರು ಊರು ತಿರುಗಿ ಚಪ್ಪಲಿ ಮಾರಾಟ ಮಾಡುವ ವ್ಯಾಪಾರಿ. ಯುವತಿ ಘಟಪ್ರಭಾದಲ್ಲಿ ಬ್ಯೂಟಿ ಫಾರ್ಲರ್ ನಡೆಸುತ್ತಿದ್ದಾಳೆ. ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಯುವಕ-ಯುವತಿ ಇಬ್ಬರೂ ಭೇಟಿಯಾಗಿದ್ದಾರೆ. ಆಗ ಬ್ಯೂಟಿ ಪಾರ್ಲರ್ ಸಾಮಾಗ್ರಿ ತೆಗೆದುಕೊಂಡು ಬರೋಣಾ ಬಾ ಎಂದು ಯುವತಿ ಯುವಕನನ್ನು ಮಾರುಕಟ್ಟೆಗೆ ತನ್ನ ಜೊತೆ ಬರಲು ಕರೆದಿದ್ದಾಳೆ. ಒಂದೇ ಊರಿನವಳು ಪರಿಚಯಸ್ಥಳು ಆಗಿದ್ದರಿಂದ ಅವಳೊಂದಿಗೆ ಜ್ಞಾನೇಶ್ವರ‌ ಆಟೋ ಹತ್ತಿದ್ದ. ಆಟೋದಲ್ಲಿ ಖಂಜರ್ ಗಲ್ಲಿ ದರ್ಗಾ ಬಳಿ ಬಂದಾಗ ಯುವಕರ ಗುಂಪು ಹಲ್ಲೆ ಮಾಡಿದೆ. ಚಲಿಸುತ್ತಿದ್ದ ಆಟೋವನ್ನ ಅಡ್ಡಗಟ್ಟಿ ತಡೆದು ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಜ್ಞಾನೇಶ್ವರ ಡವರಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ನಾಲ್ವರು ಅಪ್ರಾಪ್ತರು ಸೇರಿ 8 ಜನ ಅಪರಿಚಿತರ ವಿರುದ್ಧ ಕೇಸ್ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:00 am, Sun, 27 August 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು