AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಎಲ್ಲಾ ವಾರ್ಡ್​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧೆ: ಸತೀಶ್ ಜಾರಕಿಹೊಳಿ

Belagavi: ಎಲ್ಲಾ ವಾರ್ಡ್​​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಹೇಳಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಎಲ್ಲಾ ವಾರ್ಡ್​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧೆ: ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
TV9 Web
| Edited By: |

Updated on:Aug 21, 2021 | 9:59 PM

Share

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಚುನಾವಣೆಯ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಎಲ್ಲಾ ವಾರ್ಡ್​​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಹೇಳಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಸಪ್ಟೆಂಬರ್ 3 ಎಂದು ಘೋಷಣೆ ಆಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಜತೆ ಟಿಕೆಟ್ ಆಕಾಂಕ್ಷಿಗಳು ಆಗಸ್ಟ್ 14ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಬೆಳಗಾವಿಯ ಜಾಧವ್​ನಗರದಲ್ಲಿರುವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭೇಟಿಯಾಗಿದ್ದರು. ಸಪ್ಟೆಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ವಿಚಾರವಾಗಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಪಕ್ಷದ ಚಿಹ್ನೆ ಮೇಲೆ ಸ್ಪರ್ಧೆ ಕುರಿತು ಅಭಿಪ್ರಾಯ ಸಂಗ್ರಹಿಸಿ‌ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಬಳಿಕ, ಕಾಂಗ್ರೆಸ್ ಕಮಿಟಿ ಸಭೆಯಿದೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ಮೂವರು ನಾಯಕರೊಂದಿಗೆ ಮಾತುಕತೆ ನಡೆಸಲಾಗುವುದು. ಆಗ ಯಾವ ರೀತಿ ಚುನಾವಣೆ ಮಾಡಬೇಕೆಂದು ತೀರ್ಮಾನ ಆಗಲಿದೆ. ಕಾರ್ಯಕರ್ತರ ಅಭಿಪ್ರಾಯದ ಬಳಿಕ ಕಾಂಗ್ರೆಸ್ ಪಕ್ಷ ಚಿಹ್ನೆ ಮೇಲೆ ಸ್ಪರ್ಧೆ ಮಾಡಬೇಕಾ ಬೇಡವಾ ಅನ್ನೋದು ತೀರ್ಮಾನ ಆಗಲಿದೆ ಎಂದು ಹೇಳಿದ್ದರು. ನನ್ನ ವೈಯಕ್ತಿಕ ನಿರ್ಧಾರದ ಮೇಲೆ ತೀರ್ಮಾನ ಮಾಡಲು ಆಗಲ್ಲ. ಸ್ಥಳೀಯ ಮುಖಂಡರ ಅಭಿಪ್ರಾಯದ ಮೇಲೆ ಕಮಿಟಿ ಅಂತಿಮ ತೀರ್ಮಾನ ಮಾಡಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದರು. ಇದೀಗ, ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಲಾಗುವುದು ಎಂದು ತಿಳಿಸಲಾಗಿದೆ.

ಕಳೆದ ಅವಧಿಯಲ್ಲೂ ಕಾಂಗ್ರೆಸ್​ಗೆ ಪಾಲಿಕೆಯಲ್ಲಿ ಹಿಡಿತವಿತ್ತು. ಈಗಲೂ ಹೆಚ್ಚಿನ ಸ್ಥಾನ ಗೆಲ್ಲಲು ಪ್ರಯತ್ನ ಮಾಡ್ತೀವಿ. ಕೊರೊನಾ ಮೂರನೇ ಅಲೆ ಇದೆ. ಡಿಸೆಂಬರ್ ವರೆಗೂ ಚುನಾವಣೆ ಬೇಡ ಎಂದು ಸರ್ಕಾರವೇ ಹೇಳಿತ್ತು. ಆದ್ರೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಏನೂ ಮಾಡಲು ಆಗಲ್ಲ. ಈ ಬಗ್ಗೆ ಚುನಾವಣಾ ಆಯೋಗ ಯೋಚನೆ ಮಾಡಬೇಕಿತ್ತು. ಈಗ ನಮಗೆ ಯಾವುದೇ ಆಯ್ಕೆಯಿಲ್ಲ ಎಂದು ಸತೀಶ್ ಜಾರಕಿಹೊಳಿ‌ ಹೇಳಿದ್ದರು.

ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಗಿಯದೇ ಬಿಜೆಪಿ ಶಾಸಕರು ಬೆಂಗಳೂರಿಗೆ ಬರುವಂತಿಲ್ಲ: ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ

ಡಿಸೆಂಬರ್​ ಅಧಿವೇಶನ ಸುವರ್ಣಸೌಧದಲ್ಲಿ ನಡೆಸುವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published On - 9:56 pm, Sat, 21 August 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!