AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪ್ರಿಯಕರನ ಜೊತೆ ಓಡಿಹೋಗಲು ಪತಿಯ ಮನೆಯಲ್ಲೇ 21 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ. ಮದುವೆಯಾದ ಎರಡೇ ತಿಂಗಳಿಗೆ ಈ ಕೃತ್ಯ ನಡೆದಿದ್ದು, ದೂರು ದಾಖಲಾದ 48 ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಜೈಲಿಗಟ್ಟಲಾಗಿದೆ.

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ
ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ!
Sahadev Mane
| Edited By: |

Updated on:May 09, 2026 | 12:09 PM

Share

ಬೆಳಗಾವಿ, ಮೇ 09: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ (Lover) ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಿಯಕರನ ಜೊತೆ ಸೇರಿ ಪತಿ ಮನೆಗೆ ಕನ್ನ ಹಾಕಿದ ನವವಧು ಹಸೀನಾ ನದಾಫ್ ಬಂಧನ
  • 21 ಲಕ್ಷ ರೂಪಾಯಿ ಮೌಲ್ಯದ 154 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಿಲಾಡಿ ಜೋಡಿ
  • ದೂರು ದಾಖಲಾದ 48 ಗಂಟೆಗಳಲ್ಲಿ ಆರೋಪಿಗಳನ್ನು ಜೈಲಿಗಟ್ಟಿದ ಕಟಕೋಳ ಪೊಲೀಸರು

ನಡೆದಿದ್ದೇನು?

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ವಿಚಿತ್ರ ಕಳ್ಳತನ ನಡೆದಿದೆ. ಮೂಲತಃ ಮೂಡಲಗಿ ತಾಲೂಕಿನವಳಾದ ಹಸೀನಾ ನದಾಫ್ ಎಂಬಾಕೆಗೆ ಎರಡು ತಿಂಗಳ ಹಿಂದೆಯಷ್ಟೇ ಹೊಸಕೋಟೆ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ, ಹಸೀನಾ ಮದುವೆಗಿಂತ ಮುಂಚೆಯೇ ಹಣಮಂತ ಮಾರಾಪೂರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಮದುವೆಯಾದ ಬಳಿಕವೂ ಆಕೆಯ ಪ್ರೇಮ ಪುರಾಣ ಮುಂದುವರಿದಿತ್ತು.

ತನ್ನ ಪ್ರಿಯಕರನ ಜೊತೆ ಶಾಶ್ವತವಾಗಿ ನೆಲೆಸಲು ನಿರ್ಧರಿಸಿದ ಹಸೀನಾ, ಅದಕ್ಕೆ ಬೇಕಾದ ಹಣಕ್ಕಾಗಿ ಪತಿಯ ಮನೆಯಲ್ಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣು ಹಾಕಿದ್ದಳು. ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ, ಸುಮಾರು 21 ಲಕ್ಷ ರೂಪಾಯಿ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಹಾಗೂ 45 ಗ್ರಾಂ ಬೆಳ್ಳಿಯ ಆಭರಣಗಳನ್ನು ದೋಚಿಕೊಂಡು ಪ್ರಿಯಕರನ ಜೊತೆ ಪರಾರಿಯಾಗಿದ್ದಳು.

48 ಘಂಟೆಗಳಲ್ಲಿ ಪರಾರಿಯಾದವರನ್ನು ಹಿಡಿದ ಪೊಲೀಸರು

ಮನೆಯಲ್ಲಿ ಚಿನ್ನಾಭರಣ ನಾಪತ್ತೆಯಾದ ಬಗ್ಗೆ ಶರೀಫ್ ಅವರ ಸಂಬಂಧಿ ದಿಲ್ಶಾನ್ ನದಾಫ್ ಅವರು ಕಟಕೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ತನಿಖೆ ಕೈಗೆತ್ತಿಕೊಂಡಾಗ ಹಸೀನಾ ಮೇಲೆ ಅನುಮಾನ ವ್ಯಕ್ತವಾಗಿದೆ. ದೂರು ದಾಖಲಾದ ಕೇವಲ 48 ಗಂಟೆಗಳ ಒಳಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹಸೀನಾ ಮತ್ತು ಆಕೆಯ ಪ್ರಿಯಕರ ಹಣಮಂತ ಮಾರಾಪೂರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ?

ಬಂಧಿತರಿಂದ ಕಳವು ಮಾಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಟಕೋಳ ಪೊಲೀಸರು ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:08 pm, Sat, 9 May 26

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ