AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ: ಹೆಸ್ಕಾಂ ವಿರುದ್ಧ ಆರೋಪ

Belagavi News: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ದಂಪತಿಗಳ ಸಾವಿಗೆ ಕಾರಣ ಎಂದು ಆರೋಪ ಕೇಳಿಬಂದಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ: ಹೆಸ್ಕಾಂ ವಿರುದ್ಧ ಆರೋಪ
ಪ್ರಾತಿನಿಧಿಕ ಚಿತ್ರ
ಸಹದೇವ್​ ಮಾನೆ
| Edited By: |

Updated on: Aug 06, 2023 | 7:22 PM

Share

ಬೆಳಗಾವಿ, ಆಗಸ್ಟ್​ 06: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ (Couple) ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಅಮಿತ್ ದೇಸಾಯಿ(32), ಲತಾ ದೇಸಾಯಿ(27) ಮೃತರು. ವಿದ್ಯುತ್ ಶಾಕ್​ನಿಂದ ಒದ್ದಾಡ್ತಿದ್ದ ಪತಿ ರಕ್ಷಿಸಲು ಹೋಗಿ ಪತ್ನಿಯೂ ಮೃತಪಟ್ಟಿದ್ದಾರೆ. ಬೆಳೆ ಕ್ರಿಮಿನಾಶಕ ಸಿಂಪಡಣೆ ವೇಳೆ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ದಂಪತಿ ಶವಗಳನ್ನ ಬೆಳಗಾವಿ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವು

ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟ ವ್ಯಕ್ತಿ

ಚಿಕ್ಕಮಗಳೂರು: ಮರದ ಕೊಂಬೆ ಕಡಿಯಲು ಹೋಗಿ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮರದ ಮೇಲೆಯೇ ಪ್ರಾಣ ಬಿಟ್ಟಿರುವಂತಹ ಘಟನೆ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪ ಗೌಡ (56) ಮೃತ ವ್ಯಕ್ತಿ. ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುದ್ದನ್ನು ಕಡಿಯಲು ಹೋಗಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಾಳೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎಲ್​ಎಲ್​ಬಿ ವಿದ್ಯಾರ್ಥಿ ನೇಣಿಗೆ ಶರಣು

ಬೆಂಗಳೂರು: ಎಲ್​ಎಲ್​ಬಿ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ನಾರಗಬಾವಿಯ ಡಿ ಗ್ರೂಪ್ ಲೇಔಟ್​ನ ಶ್ರೀಗಂಧ ಕಾವಲ್​ನಲ್ಲಿ ನಡೆದಿದೆ. ಮೂಲತಃ ಹಿಮಾಚಲ ಪ್ರದೇಶದ ಆರ್ಯನ್ ಕುಮಾರ್ ಆತ್ಮಹತ್ಯೆಗೊಳಗಾದ ವಿದ್ಯಾರ್ಥಿ. 3 ವರ್ಷಗಳಿಂದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.​ ಸ್ಥಳಕ್ಕೆ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್

ಹಾಡಗಲೇ ಹೋಟೆಲ್​​ನಲ್ಲಿದ್ದ ಇಡ್ಲಿ ಬಾಕ್ಸ್‌ ಕದ್ದು ಪರಾರಿ

ಕೋಲಾರ: ನಗರದ ಬ್ರಾಹ್ಮಣರ‌ ಬೀದಿಯಲ್ಲಿ‌ ಹಾಡಹಗಲೇ ಪುಲಿ ಹೋಟೆಲ್‌ನಲ್ಲಿದ್ದ ಇಡ್ಲಿ ಬಾಕ್ಸ್​ನ್ನು ಕಳ್ಳರು ಕದ್ದೊಯ್ದಿದ್ದಾರೆ. ಹೋಟೆಲ್ ಮಾಲೀಕ ನವೀನ್‌ ಮನೆಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಇಡ್ಲಿ ಬಾಕ್ಸ್ ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ