AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕೌಟುಂಬಿಕ ಕಲಹ: ಭಾವನನ್ನೇ ಹತ್ಯೆಗೈದ ಬಾಮೈದ

ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಬಾಮೈದ ಹತ್ಯೆಗೈದಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿಯ ವಿದ್ಯಾನಗರದಲ್ಲಿ ಮನೆಯಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಕೌಟುಂಬಿಕ ಕಲಹ: ಭಾವನನ್ನೇ ಹತ್ಯೆಗೈದ ಬಾಮೈದ
ಈರಗೌಡ ಟೋಪಗೋಳ, ಸಂಜಯ್ ಭಾಕರೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Sep 02, 2023 | 9:16 PM

Share

ಬೆಳಗಾವಿ, ಸೆಪ್ಟೆಂಬರ್​ 2: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಬಾಮೈದ ಹತ್ಯೆ (death) ಗೈದಿರುವಂತಹ ಘಟನೆ  ಜಿಲ್ಲೆಯ ಚಿಕ್ಕೋಡಿಯ ವಿದ್ಯಾನಗರದಲ್ಲಿ ಮನೆಯಲ್ಲಿ ನಡೆದಿದೆ. ನಿವೃತ್ತ ಯೋಧ ಈರಗೌಡ ಟೋಪಗೋಳ(45) ಮೃತ ಭಾವ. ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆಯಿಂದ ಕೃತ್ಯವೆಸಗಲಾಗಿದೆ. ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ, ಸೇನೆಯಿಂದ ನಿವೃತ್ತಿ ಬಳಿಕ ಕ್ರಷರ್ ನಡೆಸುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈರಗೌಡ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಈರಗೌಡ ಶವ ಸ್ಥಳಾಂತರ ಮಾಡಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಓರ್ವ ಮಹಿಳೆ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ

ಕಲಬುರಗಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ಸಿದನೂರ ಗ್ರಾಮದ ನಿವಾಸಿ ಕಲಾವತಿ (35) ಮೃತ ಮಹಿಳೆ. ಸವಿತಾ ಎನ್ನುವವರಿಗೆ ಗಂಭೀರ ಗಾಯವಾಗಿದ್ದು, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ: ಕೌಟುಂಬಿಕ ಕಲಹ, ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು

ಇಂದು ‌ಸಂಜೆ ಆರು ಗಂಟೆ ಸಮಯಕ್ಕೆ ಘಟನೆ ನಡೆದಿದ್ದು, ಸ್ಥಳಕ್ಕೆ ಅಫಜಲಪುರ ತಹಶಿಲ್ದಾರ ಸಂಜೀವ್​ ಕುಮಾರ್ ದಾಸರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜನನಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ

ಚಾಮರಾಜನಗರ: ಅಪೆಂಡೆಕ್ಸ್ ಹಿನ್ನಲೆ, ಆಪರೇಷನ್​ಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪ ಕೇಳಿಬಂದಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಜನನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ವಿಜಯ್ (10) ಮೃತ ಬಾಲಕ. ಆಪರೇಷನ್ ಯಶಸ್ವಿಯಾಗಿ ಎಂದು ವೈದ್ಯರು ತಿಳಿಸಿದ್ದು, ನಂತರ ಉಸಿರಾಟದ ತೊಂದರೆಯಿಂದ ಮಗು ಸಾವನ್ನಪ್ಪಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮನೆಯಲ್ಲಿದ್ದವರ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್

ವೈದ್ಯರು ಶಸ್ತ್ರ ಚಿಕಿತ್ಸೆಗೆ ಮೊದಲು ಸರಿಯಾದ ಅರವಳಿಕೆ ಚುಚ್ಚುಮದ್ದು ಕೊಟ್ಟಿಲ್ಲ, ವೈದ್ಯರ ನಿರ್ಲಕ್ಷ್ಯದಿಂದ ಬಾಲಕನ ಸಾವಾಗಿದೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಕೂಡಲೇ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದು, ಸ್ಥಳಕ್ಕೆ ಕೊಳ್ಳೆಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahantesh Kurbet
Mahantesh Kurbet
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು