AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸುವಂತೆ ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ

ಒಂದು ತಿಂಗಳ ಒಳಗಾಗಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಕೊಲೆಗಳು ನಡೆದವು. ಈ ಎರಡು ಕೊಲೆಗಳು ಪ್ರೀತಿ ವಿಚಾರಕ್ಕೆ ನಡೆದಿವೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಎರಡು ಪ್ರಕರಣಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಕೇಸ್​ ಬೆಳಕಿಗೆ ಬಂದಿದೆ.

ಪ್ರೀತಿಸುವಂತೆ ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ
ಆರೋಪಿ ತಿಪ್ಪಣ್ಣ, ಯುವತಿ ಮನೆ ಮೇಲೆ ಕಲ್ಲು
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: May 25, 2024 | 7:52 AM

Share

ಬೆಳಗಾವಿ, ಮೇ 25: ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremth), ಅಂಜಲಿ ಅಂಬಿಗೇರ (Anjali Ambiger) ಕೊಲೆ ಪ್ರಕರಣಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ (Belagavi) ಮತ್ತೊಂದು ಕೇಸ್​ ಬೆಳಕಿಗೆ ಬಂದಿದ್ದು, ಪಾಗಲ್ ಪ್ರೇಮಿಯ ಕಾಟಕ್ಕೆ ಯುವತಿ ಮತ್ತು ಆಕೆಯ ಪೋಷಕರು ನಲುಗಿ ಹೋಗಿದ್ದಾರೆ. ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ಪಾಗಲ್​ಪ್ರೇಮಿ ತಿಪ್ಪಣ್ಣ ಡೋಕರೆ (27) ಇದೇ ಗ್ರಾಮದ ಓರ್ವ ಯುವತಿ ಮತ್ತು ಯುವತಿ ತಾಯಿಗೆ ಕೊಲೆ ಬೆದರಿಕೆ ಹಾಕಿದ್ದಾನೆ.

ಪ್ರೀತಿಸು, ಮದುವೆ ಆಗುವಂತೆ ‌ತಿಪ್ಪಣ್ಣ ಡೋಕರೆ ಮೂರು ವರ್ಷಗಳಿಂದ ಪೀಡಿಸುತ್ತಿದ್ದನು. ಬಿಕಾಂ ಓದುತ್ತಿರುವ ಯುವತಿ ನಿತ್ಯ ಕಾಲೇಜಿಗೆ ಹೋಗುವಾಗ ಫಾಲೋ ಮಾಡಿ ರೇಗಿಸುತ್ತಿದ್ದನು. ಇನ್ನು ಯುವತಿ ಕಿಣೈ ಗ್ರಾಮದಲ್ಲಿ ತಾಯಿಯ ಜೊತೆಗೆ ವಾಸವಾಗಿದ್ದು, ತಿಪ್ಪಣ್ಣ ಡೋಕರೆ ಕಾಟಕ್ಕೆ ಓದು ನಿಲ್ಲಿಸಿದ್ದಳು. “ನಿನ್ನ ಮಗಳನ್ನು ನನಗೆ ಮದುವೆ ಮಾಡಿಕೊಡು” ಎಂದು ಯುವತಿ ತಾಯಿಗೂ ಧಮ್ಕಿ ಹಾಕಿದ್ದನು. ಮದುವೆ ಮಾಡಿಕೊಡದಿದ್ದರೆ ಇಬ್ಬರನ್ನೂ ಕೊಲೆ ಮಾಡುವುದಾಗಿ ತಿಪ್ಪಣ್ಣ ಬೆದರಿಕೆ ಹಾಕಿದ್ದನು. ತಿಪ್ಪಣ್ಣ ಡೋಕರೆ ಯಾವುದೇ ಕೆಲಸ ಮಾಡದೆ ಕುಡಿದು ಊರಲ್ಲಿ ಸುತ್ತಾಡುತ್ತಿದ್ದನು.

ಇದನ್ನೂ ಓದಿ: ಬೆಳಗಾವಿ ಗುಂಪು ಘರ್ಷಣೆಯಲ್ಲಿ ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​, 10 ಮಂದಿಯ ಬಂಧನ

ಅಲ್ಲದೆ ಇದೇ ವಿಚಾರಕ್ಕೆ ತಿಪ್ಪಣ್ಣ ಕೆಲ ತಿಂಗಳ ಹಿಂದೆ ಯುವತಿ ಮನೆ ಹಿಂಬಾಗಿಲಿಗೆ ಬೆಂಕಿ ಹಚ್ಚಿದ್ದನು. ತಿಪ್ಪಣ್ಣನ ಕಿರಿಕಿರಿಗೆ ಬೇಸತ್ತು 3 ವರ್ಷಗಳ ಹಿಂದೆಯೇ ಯುವತಿ ಪೊಲೀಸರಿಗೆ ದೂರು ಕೊಟ್ಟಿದ್ದಳು. ಆಗ ತಿಪ್ಪಣ್ಣ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತಿಪ್ಪಣ್ಣನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆಗ ತಿಪ್ಪಣ್ಣ ಯುವತಿ ತಂಟೆಗೆ ಹೋಗದೆ ಸುಮ್ಮನಿದ್ದನು.

ಈಗ ತಿಪ್ಪಣ್ಣ ಹಳೆ ಚಾಳಿ ಮತ್ತೆ ಆರಂಭಿಸಿದ್ದು, ಯುವತಿ ಮನೆ ಮೇಲೆ ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾನೆ. ಇದಕ್ಕೆ ಯುವತಿ ಮತ್ತು ಆಕೆಯ ತಾಯಿ ರಕ್ಷಣೆ ಕೋರಿ ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಆಯುಕ್ತರ ಸೂಚನೆ ಮೇರೆಗೆ ಯುವತಿ ಮನೆಗೆ ಓರ್ವ ಪೊಲೀಸ್​ ಪೇದೆಯನ್ನು ​ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!