AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸುವಂತೆ ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ

ಒಂದು ತಿಂಗಳ ಒಳಗಾಗಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಕೊಲೆಗಳು ನಡೆದವು. ಈ ಎರಡು ಕೊಲೆಗಳು ಪ್ರೀತಿ ವಿಚಾರಕ್ಕೆ ನಡೆದಿವೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಎರಡು ಪ್ರಕರಣಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಕೇಸ್​ ಬೆಳಕಿಗೆ ಬಂದಿದೆ.

ಪ್ರೀತಿಸುವಂತೆ ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ
ಆರೋಪಿ ತಿಪ್ಪಣ್ಣ, ಯುವತಿ ಮನೆ ಮೇಲೆ ಕಲ್ಲು
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: May 25, 2024 | 7:52 AM

Share

ಬೆಳಗಾವಿ, ಮೇ 25: ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremth), ಅಂಜಲಿ ಅಂಬಿಗೇರ (Anjali Ambiger) ಕೊಲೆ ಪ್ರಕರಣಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ (Belagavi) ಮತ್ತೊಂದು ಕೇಸ್​ ಬೆಳಕಿಗೆ ಬಂದಿದ್ದು, ಪಾಗಲ್ ಪ್ರೇಮಿಯ ಕಾಟಕ್ಕೆ ಯುವತಿ ಮತ್ತು ಆಕೆಯ ಪೋಷಕರು ನಲುಗಿ ಹೋಗಿದ್ದಾರೆ. ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ಪಾಗಲ್​ಪ್ರೇಮಿ ತಿಪ್ಪಣ್ಣ ಡೋಕರೆ (27) ಇದೇ ಗ್ರಾಮದ ಓರ್ವ ಯುವತಿ ಮತ್ತು ಯುವತಿ ತಾಯಿಗೆ ಕೊಲೆ ಬೆದರಿಕೆ ಹಾಕಿದ್ದಾನೆ.

ಪ್ರೀತಿಸು, ಮದುವೆ ಆಗುವಂತೆ ‌ತಿಪ್ಪಣ್ಣ ಡೋಕರೆ ಮೂರು ವರ್ಷಗಳಿಂದ ಪೀಡಿಸುತ್ತಿದ್ದನು. ಬಿಕಾಂ ಓದುತ್ತಿರುವ ಯುವತಿ ನಿತ್ಯ ಕಾಲೇಜಿಗೆ ಹೋಗುವಾಗ ಫಾಲೋ ಮಾಡಿ ರೇಗಿಸುತ್ತಿದ್ದನು. ಇನ್ನು ಯುವತಿ ಕಿಣೈ ಗ್ರಾಮದಲ್ಲಿ ತಾಯಿಯ ಜೊತೆಗೆ ವಾಸವಾಗಿದ್ದು, ತಿಪ್ಪಣ್ಣ ಡೋಕರೆ ಕಾಟಕ್ಕೆ ಓದು ನಿಲ್ಲಿಸಿದ್ದಳು. “ನಿನ್ನ ಮಗಳನ್ನು ನನಗೆ ಮದುವೆ ಮಾಡಿಕೊಡು” ಎಂದು ಯುವತಿ ತಾಯಿಗೂ ಧಮ್ಕಿ ಹಾಕಿದ್ದನು. ಮದುವೆ ಮಾಡಿಕೊಡದಿದ್ದರೆ ಇಬ್ಬರನ್ನೂ ಕೊಲೆ ಮಾಡುವುದಾಗಿ ತಿಪ್ಪಣ್ಣ ಬೆದರಿಕೆ ಹಾಕಿದ್ದನು. ತಿಪ್ಪಣ್ಣ ಡೋಕರೆ ಯಾವುದೇ ಕೆಲಸ ಮಾಡದೆ ಕುಡಿದು ಊರಲ್ಲಿ ಸುತ್ತಾಡುತ್ತಿದ್ದನು.

ಇದನ್ನೂ ಓದಿ: ಬೆಳಗಾವಿ ಗುಂಪು ಘರ್ಷಣೆಯಲ್ಲಿ ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​, 10 ಮಂದಿಯ ಬಂಧನ

ಅಲ್ಲದೆ ಇದೇ ವಿಚಾರಕ್ಕೆ ತಿಪ್ಪಣ್ಣ ಕೆಲ ತಿಂಗಳ ಹಿಂದೆ ಯುವತಿ ಮನೆ ಹಿಂಬಾಗಿಲಿಗೆ ಬೆಂಕಿ ಹಚ್ಚಿದ್ದನು. ತಿಪ್ಪಣ್ಣನ ಕಿರಿಕಿರಿಗೆ ಬೇಸತ್ತು 3 ವರ್ಷಗಳ ಹಿಂದೆಯೇ ಯುವತಿ ಪೊಲೀಸರಿಗೆ ದೂರು ಕೊಟ್ಟಿದ್ದಳು. ಆಗ ತಿಪ್ಪಣ್ಣ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತಿಪ್ಪಣ್ಣನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆಗ ತಿಪ್ಪಣ್ಣ ಯುವತಿ ತಂಟೆಗೆ ಹೋಗದೆ ಸುಮ್ಮನಿದ್ದನು.

ಈಗ ತಿಪ್ಪಣ್ಣ ಹಳೆ ಚಾಳಿ ಮತ್ತೆ ಆರಂಭಿಸಿದ್ದು, ಯುವತಿ ಮನೆ ಮೇಲೆ ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾನೆ. ಇದಕ್ಕೆ ಯುವತಿ ಮತ್ತು ಆಕೆಯ ತಾಯಿ ರಕ್ಷಣೆ ಕೋರಿ ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಆಯುಕ್ತರ ಸೂಚನೆ ಮೇರೆಗೆ ಯುವತಿ ಮನೆಗೆ ಓರ್ವ ಪೊಲೀಸ್​ ಪೇದೆಯನ್ನು ​ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ