Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ

Belagavi News; ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದ್ದು, ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ
ಇಂಡಿಗೋ ವಿಮಾನ
Follow us
Ganapathi Sharma
|

Updated on: Aug 28, 2023 | 7:17 AM

ಬೆಳಗಾವಿ, ಆಗಸ್ಟ್ 28: ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದೆ. ಬೆಳಗಾವಿಯಿಂದ ವಿಮಾನ ಸಂಚಾರಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿರುವ ಹೊರತಾಗಿಯೂ ಕೆಲವು ಕಡೆಗಳಿಗೆ ವಿಮಾನ ಹಾರಾಟ ಸ್ಥಗಿತಗೊಂಡಿತ್ತು. ಕೆಲವು ತಿಂಗಳುಗಳ ಹಿಂದೆ ಬೆಳಗಾವಿ ಮತ್ತು ದೆಹಲಿ (Belagavi Delhi Flight) ನಡುವಣ ವಿಮಾನ ಕೂಡ ಸ್ಥಗಿತಗೊಂಡಿತ್ತು. ಇದರಿಂದ ರಾಷ್ಟ್ರ ರಾಜಧಾನಿಗೆ ತೆರಳುವ ಹೆಚ್ಚಿನ ಸಂಖ್ಯೆಯ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು. ದೀರ್ಘಾವಧಿಯ ನಂತರ ಇದೀಗ, ಬೆಳಗಾವಿ ಮತ್ತು ದೆಹಲಿ ನಡುವಿನ ದೈನಂದಿನ ವಿಮಾನ ಸಂಚಾರ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿವೆ.

ಮೂಲಗಳ ಪ್ರಕಾರ, ಬೆಳಗಾವಿ-ದೆಹಲಿ ವಿಮಾನ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದ್ದು, ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್; ತುಂಬಿ ತುಳುಕುತ್ತಿವೆ ದೇವಾಲಯಗಳು, ಭಕ್ತರ ಮತ್ತಷ್ಟು ಅನುಕೂಲಕ್ಕೆ ಮುಜರಾಯಿ ಹೊಸ ಪ್ಲಾನ್

ಹಲವು ತಿಂಗಳುಗಳ ಹಿಂದೆ ಬಿಕ್ಕಟ್ಟಿನ ಪರಿಸ್ಥಿತಿಯಿಂದಾಗಿ ವಿಮಾನಯಾನ ಸಂಸ್ಥೆಗಳು ಕೆಲವು ಮಾರ್ಗಗಳ ನಡುವಣ ಸೇವೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ್ದವು. ಬೆಳಗಾವಿ ದೆಹಲಿ ನಡುವೆ ಈ ಹಿಂದೆ ಸ್ಪೈಸ್​ಜೆಟ್ ವಿಮಾನಯಾನ ಸಂಸ್ಥೆ ಸೇವೆ ಒದಗಿಸುತ್ತಿತ್ತು. ಅದು ಸ್ಥಗಿತಗೊಂಡ ನಂತರ ಹೆಚ್ಚಿನ ಸಂಖ್ಯೆಯ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ರಕ್ಷಣಾ ಅಧಿಕಾರಿಗಳು ಮತ್ತು ರಾಜಕಾರಣಿಗಳು ಬೆಳಗಾವಿ-ದೆಹಲಿ ನಡುವಣ ಪ್ರಯಾಣಕ್ಕಾಗಿ ಗೋವಾ ಅಥವಾ ಬೆಂಗಳೂರಿಗೆ ತೆರಳಬೇಕಾಗಿತ್ತು.

ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಂದ ವಿವಿಧ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಹೆಚ್ಚಿನ ವಿಮಾನಗಳಿಗೆ ಪ್ರಯಾಣಿಕರಿಂದ ಸ್ಪಂದನೆ ದೊರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ