AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!

ಬೆಳಗಾವಿಯ ಹಿಡಕಲ್​ನಲ್ಲಿ ಒಬ್ಬ ವ್ಯಕ್ತಿ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡ ಘಟನೆ ನಡೆದಿದೆ. ಈ ವ್ಯಕ್ತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ವರದಿಯಾಗಿದೆ. ಕುಟುಂಬಸ್ಥರು ಅವರನ್ನು ಕಟ್ಟಿ ಹಾಕಿದ್ದರಿಂದ ಅವರು ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ: ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಂಪಣ್ಣ
Sahadev Mane
| Edited By: |

Updated on: Mar 28, 2025 | 2:13 PM

Share

ಬೆಳಗಾವಿ, ಮಾರ್ಚ್ 28: ‘ಕೋಪದಲ್ಲಿ ಕೊಯ್ದ ಮೂಗು ಮತ್ತೆ ಬಂದೀತೇ’ ಎಂಬ ಗಾದೆಯನ್ನು ಕೇಳಿರುತ್ತೇವೆ. ಕೋಪದಲ್ಲಿ ನಮಗೆ ನಾವೇ ಏನಾದರೂ ಸಮಸ್ಯೆ ಮಾಡಿಕೊಂಡರೆ ಮತ್ತೆ ಕೋಪ ತಿಳಿಯಾದರೂ ಸಮಸ್ಯೆ ಸರಿಯಾಗದು ಎಂಬರ್ಥದಲ್ಲಿ ಈ ಗಾದೆಯನ್ನು ಆಗಾಗ್ಗೆ ಬಳಸುತ್ತಿರುವುದನ್ನು ಕೇಳಿರುತ್ತೇವೆ. ಆದರೆ, ಬೆಳಗಾವಿಯ (Belagavi) ಹಿಡಕಲ್​ನಲ್ಲಿ (Hidakal) ವ್ಯಕ್ತಿಯೊಬ್ಬರು, ಮನೆಯಲ್ಲಿ ಕೂಡಿ ಹಾಕಿದ್ದ ಕೋಪಕ್ಕೆ ತಮ್ಮದೇ ಮರ್ಮಾಂಗವನ್ನು (Male Genitals) ಕತ್ತರಿಸಿಕೊಂಡಿದ್ದಾರೆ. ಆದರೆ, ಆ ವ್ಯಕ್ತಿ ಕೇವಲ ಸಿಟ್ಟಿನಿಂದಷ್ಟೇ ಈ ಕೃತ್ಯ ಎಸಗಿಲ್ಲ. ಬದಲಿಗೆ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್​ನಲ್ಲಿ ಕೆಲ ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿದ್ದ ಕೆಂಪಣ್ಣ ಎಂಬವರನ್ನು ಮನೆಯಲ್ಲಿ ಕೂಡಿಹಾಕಲಾಗಿತ್ತು. ಕುಟುಂಬಸ್ಥರು ಅವರನ್ನು ಎಲ್ಲಿಗೂ ಹೋಗದಂತೆ ಸರಪಳಿಯಿಂದ ಕಟ್ಟಿ ಹಾಕಿದ್ದರು. ಇದರಿಂದ ಕೋಪಗೊಂಡ ಕೆಂಪಣ್ಣ ತನ್ನ ಮರ್ಮಾಂಗ ಕಟ್ ಮಾಡಿಕೊಂಡಿದ್ದಾರೆ.

ಕೆಂಪಣ್ಣ ಮಾನಸಿಕ ಅಸ್ವಸ್ಥನಾಗಿದ್ದಕ್ಕೆ ಕಟ್ಟಿ ಹಾಕಿದ್ದಾಗಿ ಕುಟುಂಬಸ್ಥರು ಹೇಳಿದ್ದಾರೆ. ಸದ್ಯ ಕೆಂಪಣ್ಣರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿದ್ಯಮಾನ ನಡೆದಿದೆ.

ಇದನ್ನೂ ಓದಿ
Image
ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿಟ್ಟ ಆರೋಪಿ ಸಿಕ್ಕಿಬಿದ್ದಿದ್ಹೇಗೆ?
Image
ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ!
Image
ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಶಾಕ್: ಸಿಬ್ಬಂದಿಗೆ ಕೊಕ್
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ

ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿ

ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿಯಾದ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಡಿಯಾಂಗೋ ನಜರತ್ (83) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಪತ್ನಿ ಪ್ಲೇವಿಯಾನಾ ನಜರತ್ (79) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿಟ್ಟ ಪ್ರಕರಣ: ಆರೋಪಿ ಸಿಕ್ಕಿಬಿದ್ದಿದ್ಹೇಗೆ? ಬೆಂಗಳೂರು ಪೊಲೀಸರು ಹೇಳಿದ್ದಿಷ್ಟು

ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ್ಯಾಂಚ್​ನಿಂದ ಕರೆ ಮಾಡುತ್ತಿದ್ದೇವೆ, ನೀವು ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದೀರಿ ಎಂದು ವಿಡಿಯೋ ಕರೆ ಮಾಡಿ ದಂಪತಿಗೆ ಬೆದರಿಕೆ ಹಾಕಲಾಗಿತ್ತು. ಬಳಿಕ ಸೈಬರ್ ವಂಚಕರು ದಂಪತಿ ವಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಟ್ಟ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಧಮ್ಕಿ ಹಾಕಿದ್ದರು. ಹಣ ಕೊಡದಿದ್ದರೆ ಅರೆಸ್ಟ್​ ಮಾಡುವುದಾಗಿ ಹೆದರಿಸಿದ್ದರು. ಇದರಿಂದ ಮನನೊಂದ ದಂಪತಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ