ಬೆಳಗಾವಿ: ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!
ಬೆಳಗಾವಿಯ ಹಿಡಕಲ್ನಲ್ಲಿ ಒಬ್ಬ ವ್ಯಕ್ತಿ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡ ಘಟನೆ ನಡೆದಿದೆ. ಈ ವ್ಯಕ್ತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ವರದಿಯಾಗಿದೆ. ಕುಟುಂಬಸ್ಥರು ಅವರನ್ನು ಕಟ್ಟಿ ಹಾಕಿದ್ದರಿಂದ ಅವರು ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ, ಮಾರ್ಚ್ 28: ‘ಕೋಪದಲ್ಲಿ ಕೊಯ್ದ ಮೂಗು ಮತ್ತೆ ಬಂದೀತೇ’ ಎಂಬ ಗಾದೆಯನ್ನು ಕೇಳಿರುತ್ತೇವೆ. ಕೋಪದಲ್ಲಿ ನಮಗೆ ನಾವೇ ಏನಾದರೂ ಸಮಸ್ಯೆ ಮಾಡಿಕೊಂಡರೆ ಮತ್ತೆ ಕೋಪ ತಿಳಿಯಾದರೂ ಸಮಸ್ಯೆ ಸರಿಯಾಗದು ಎಂಬರ್ಥದಲ್ಲಿ ಈ ಗಾದೆಯನ್ನು ಆಗಾಗ್ಗೆ ಬಳಸುತ್ತಿರುವುದನ್ನು ಕೇಳಿರುತ್ತೇವೆ. ಆದರೆ, ಬೆಳಗಾವಿಯ (Belagavi) ಹಿಡಕಲ್ನಲ್ಲಿ (Hidakal) ವ್ಯಕ್ತಿಯೊಬ್ಬರು, ಮನೆಯಲ್ಲಿ ಕೂಡಿ ಹಾಕಿದ್ದ ಕೋಪಕ್ಕೆ ತಮ್ಮದೇ ಮರ್ಮಾಂಗವನ್ನು (Male Genitals) ಕತ್ತರಿಸಿಕೊಂಡಿದ್ದಾರೆ. ಆದರೆ, ಆ ವ್ಯಕ್ತಿ ಕೇವಲ ಸಿಟ್ಟಿನಿಂದಷ್ಟೇ ಈ ಕೃತ್ಯ ಎಸಗಿಲ್ಲ. ಬದಲಿಗೆ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ನಲ್ಲಿ ಕೆಲ ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿದ್ದ ಕೆಂಪಣ್ಣ ಎಂಬವರನ್ನು ಮನೆಯಲ್ಲಿ ಕೂಡಿಹಾಕಲಾಗಿತ್ತು. ಕುಟುಂಬಸ್ಥರು ಅವರನ್ನು ಎಲ್ಲಿಗೂ ಹೋಗದಂತೆ ಸರಪಳಿಯಿಂದ ಕಟ್ಟಿ ಹಾಕಿದ್ದರು. ಇದರಿಂದ ಕೋಪಗೊಂಡ ಕೆಂಪಣ್ಣ ತನ್ನ ಮರ್ಮಾಂಗ ಕಟ್ ಮಾಡಿಕೊಂಡಿದ್ದಾರೆ.
ಕೆಂಪಣ್ಣ ಮಾನಸಿಕ ಅಸ್ವಸ್ಥನಾಗಿದ್ದಕ್ಕೆ ಕಟ್ಟಿ ಹಾಕಿದ್ದಾಗಿ ಕುಟುಂಬಸ್ಥರು ಹೇಳಿದ್ದಾರೆ. ಸದ್ಯ ಕೆಂಪಣ್ಣರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿದ್ಯಮಾನ ನಡೆದಿದೆ.
ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿ
ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿಯಾದ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಡಿಯಾಂಗೋ ನಜರತ್ (83) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಪತ್ನಿ ಪ್ಲೇವಿಯಾನಾ ನಜರತ್ (79) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಕೊಲೆ ಮಾಡಿ ಸೂಟ್ಕೇಸ್ನಲ್ಲಿ ತುಂಬಿಟ್ಟ ಪ್ರಕರಣ: ಆರೋಪಿ ಸಿಕ್ಕಿಬಿದ್ದಿದ್ಹೇಗೆ? ಬೆಂಗಳೂರು ಪೊಲೀಸರು ಹೇಳಿದ್ದಿಷ್ಟು
ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ್ಯಾಂಚ್ನಿಂದ ಕರೆ ಮಾಡುತ್ತಿದ್ದೇವೆ, ನೀವು ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದೀರಿ ಎಂದು ವಿಡಿಯೋ ಕರೆ ಮಾಡಿ ದಂಪತಿಗೆ ಬೆದರಿಕೆ ಹಾಕಲಾಗಿತ್ತು. ಬಳಿಕ ಸೈಬರ್ ವಂಚಕರು ದಂಪತಿ ವಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಟ್ಟ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಧಮ್ಕಿ ಹಾಕಿದ್ದರು. ಹಣ ಕೊಡದಿದ್ದರೆ ಅರೆಸ್ಟ್ ಮಾಡುವುದಾಗಿ ಹೆದರಿಸಿದ್ದರು. ಇದರಿಂದ ಮನನೊಂದ ದಂಪತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.