AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಆಸ್ತಿ ವಿವಾದ: ಚಾಕು ಇರಿದು ಚಿಕ್ಕಪ್ಪನ ಮಗನ ಹತ್ಯೆ, ಆರೋಪಿ ಬಂಧನ

ಕುಟುಂಬಗಳ ಮಧ್ಯೆ ಇದ್ದ ಆಸ್ತಿ ವಿವಾದ ಭಾನುವಾರ ಮಧ್ಯಾಹ್ನ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ನಗರದ ಹೊಸೂರು ಬಸವಣ ಗಲ್ಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Belagavi News: ಆಸ್ತಿ ವಿವಾದ: ಚಾಕು ಇರಿದು ಚಿಕ್ಕಪ್ಪನ ಮಗನ ಹತ್ಯೆ, ಆರೋಪಿ ಬಂಧನ
ಮಿಲಿಂದ್ ಜಾಧವ್​​ ಹತ್ಯೆಗೊಳಗಾದ ವ್ಯಕ್ತಿ
ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 5:15 PM

Share

ಬೆಳಗಾವಿ: ಕುಟುಂಬಗಳ ಮಧ್ಯೆ ಇದ್ದ ಆಸ್ತಿ ವಿವಾದ (Property dispute) ಭಾನುವಾರ ಮಧ್ಯಾಹ್ನ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ನಗರದ ಹೊಸೂರು ಬಸವಣ ಗಲ್ಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಸ್ತಿ ವಿಚಾರವಾಗಿ ಚಿಕ್ಕಪ್ಪನ ಮಗನನ್ನೇ ಹತ್ಯೆಗೈಯಲಾಗಿದೆ. ಮಿಲಿಂದ್ ಜಾಧವ್(31) ಮೃತ ವ್ಯಕ್ತಿ. ಕೊಲೆಯಾದ ಮಿಲಿಂದ್ ದೊಡ್ಡಪ್ಪನ ಮಗ ಅಭಿಜಿತ್ ಜಾಧವ್‌ನಿಂದ ಕೃತ್ಯವೆಸಗಲಾಗಿದೆ. ಸದ್ಯ ಆರೋಪಿ ಅಭಿಜಿತ್ ಜಾಧವ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಿಲಿಂದ್​ ಮತ್ತು ಅಭಿಜಿತ್ ಕುಟುಂಬ ಮಧ್ಯೆ ಆಸ್ತಿ ವಿವಾದವಿತ್ತು.

ಕುಟುಂಬದ ಆಸ್ತಿಯಲ್ಲಿ ಒಂದು ಮಳಿಗೆಯನ್ನು ಸ್ವೀಟ್ ಮಾರ್ಟ್ ನಡೆಸಲು ಬಾಡಿಗೆ ನೀಡಲಾಗಿತ್ತು. ಬಾಡಿಗೆ ಪಡೆಯುವ ವಿಚಾರಕ್ಕೆ ಮಿಲಿಂದ್, ಅಭಿಜಿತ್ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಮನೆಯಲ್ಲಿದ್ದ ಮಿಲಿಂದ್‌ ತೊಡೆಗೆ ಅಭಿಜಿತ್ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮಿಲಿಂದ್ ಮೃತಪಟ್ಟಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್: ಸಿಕ್ಕಿಬಿದ್ದ 6 ಆರೋಪಿಗಳು

ಹಣಕಾಸು ವಿಚಾರದಲ್ಲಿ ಕಿರಿಕ್, ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ರಾಮನಗರ: ಹಣಕಾಸು ವಿಚಾರದಲ್ಲಿ ಕಿರಿಕ್​ ಆಗಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಕಿರಣ್​ ಹಲ್ಲೆಗೊಳಗಾಗಿದ್ದು, ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಬೆಂಗಳೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಮೇಶ್‌ ಹಾಗೂ ಬೆಂಬಲಿಗರು ಎಸ್ಕೇಪ್ ಆಗಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಈಜಲು ಹೋಗಿ ನಾಲ್ವರು ನೀರುಪಾಲು, ಸ್ನೇಹಿತರ ಮೃತದೇಹಗಳು ಪತ್ತೆ

ಪ್ಯಾನಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪ್ಯಾನಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಇಟ್ಟಮಡುವಿನ ಬಾಡಿಗೆ ಮನೆಯಲ್ಲಿ ನಡೆದಿದೆ. ಶಿವರುದ್ರ(40) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೆಟರಿಂಗ್ ಕೆಲಸ ಮಾಡುತ್ತಿದ್ದ ಶಿವರುದ್ರ, ಮನೆಯಲ್ಲಿ ಯಾರು ಇಲ್ಲದ ವೇಳೆ ವೇಲಿನಿಂದ ನೇಣುಬಿಗಿದುಕೊಂಡು ಸುಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​