AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು

ಡಕೋಟವಾಗಿರುವ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಹೀಗೆ ಹಳೇಯ ಬಸ್​ಗಳು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು
ಸಾಂದರ್ಭೀಕ ಚಿತ್ರ
TV9 Web
| Edited By: |

Updated on:Feb 02, 2023 | 8:08 PM

Share

ಬೆಳಗಾವಿ: ಹಳೆದಾಯ್ತು ಅಂತ ಹೇಳಿ ಬೆಳಗಾವಿಗೆ ಸ್ಥಳಾಂತರಿದ ಬಿಎಂಟಿಸಿ ಬಸ್​ಗಳು (BMTC Buses) ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗೆ ಟ್ರಾಫಿಕ್ ಜಾಮ್​ನಲ್ಲಿ (Traffic Jam) ಸಿಲುಕಿದ ಆ್ಯಂಬುಲೆನ್ಸ್ ಸುಮಾರು 15 ನಿಮಿಷಗಳ ಕಾಲ ದಟ್ಟಣೆಯಿಂದ ಹೊರಬರಲು ಪರದಾಡಿದೆ. ಪೊಲೀಸರು ಹರಸಾಹಸೊಟ್ಟು ಕೊನೆಗೂ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ದಾರಿಮಾಡಿಕೊಟ್ಟರು. ಒಂದು ಗಂಟೆ ಬಳಿಕ ಪೊಲೀಸರು ಮೆಕ್ಯಾನಿಕ್​ ಕರೆಸಿ ಬಸ್​ ಸರಿ ಮಾಡಿಸಿ ರಸ್ತೆಯಿಂದ ಕಳಿಸಿದ್ದಾರೆ.

ಬೆಂಗಳೂರಿನಿಂದ ಸುಮಾರು 50 ಹಳೆಯ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ತರಲಾಗಿದೆ. ಇನ್ನು, ಜಿಲ್ಲೆಯಲ್ಲಿ ಚೆನ್ನಾಗಿದ್ದ ಬಸ್​​ಗಳನ್ನು​ ಬೇರೆ ಕಡೆಗಳಿಗೆ ಕಳುಹಿಸಿ ಹಳೆಯ ಬಿಎಂಟಿಸಿ ಬಸ್​ಗಳನ್ನು ಅಧಿಕಾರಿಗಳು ತಂದಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್​ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡಿಪೋ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ

ಅಜಾಗರೂಕತೆಯಿಂದ ಬಸ್ ಚಾಲನೆ, ನೋಟಿಸ್ ಜಾರಿ

ಬೆಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಯಾಣಿಕರು ದೂರು ನೀಡಿದ ಹಿನ್ನಲೆ ಬಿಎಂಟಿಸಿ ಡಿಪೋ-33ರ ವ್ಯವಸ್ಥಾಪಕರಿಂದ ಚಾಲಕ ವಿವೇಕಾನಂದಸ್ವಾಮಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಕಾರು ಓವರ್​ಟೇಕ್ ಮಾಡಿದ್ದ ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಯಾಣಿಕ ದೂರು ಹಿನ್ನೆಲೆ 3 ದಿನದೊಳಗೆ ಉತ್ತರ ನೀಡುವಂತೆ ಚಾಲಕ ವಿವೇಕಾನಂದಸ್ವಾಮಿಗೆ ಡಿಪೋ ಮ್ಯಾನೇಜರ್​ ನೋಟಿಸ್​ ನೀಡಿದ್ದಾರೆ. ಅಲ್ಲದೆ, ಸೂಕ್ತ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳವ ಎಚ್ಚರಿಕೆಯೂ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Thu, 2 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!