AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು

ಡಕೋಟವಾಗಿರುವ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಹೀಗೆ ಹಳೇಯ ಬಸ್​ಗಳು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು
ಸಾಂದರ್ಭೀಕ ಚಿತ್ರ
TV9 Web
| Edited By: Rakesh Nayak Manchi|

Updated on:Feb 02, 2023 | 8:08 PM

Share

ಬೆಳಗಾವಿ: ಹಳೆದಾಯ್ತು ಅಂತ ಹೇಳಿ ಬೆಳಗಾವಿಗೆ ಸ್ಥಳಾಂತರಿದ ಬಿಎಂಟಿಸಿ ಬಸ್​ಗಳು (BMTC Buses) ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗೆ ಟ್ರಾಫಿಕ್ ಜಾಮ್​ನಲ್ಲಿ (Traffic Jam) ಸಿಲುಕಿದ ಆ್ಯಂಬುಲೆನ್ಸ್ ಸುಮಾರು 15 ನಿಮಿಷಗಳ ಕಾಲ ದಟ್ಟಣೆಯಿಂದ ಹೊರಬರಲು ಪರದಾಡಿದೆ. ಪೊಲೀಸರು ಹರಸಾಹಸೊಟ್ಟು ಕೊನೆಗೂ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ದಾರಿಮಾಡಿಕೊಟ್ಟರು. ಒಂದು ಗಂಟೆ ಬಳಿಕ ಪೊಲೀಸರು ಮೆಕ್ಯಾನಿಕ್​ ಕರೆಸಿ ಬಸ್​ ಸರಿ ಮಾಡಿಸಿ ರಸ್ತೆಯಿಂದ ಕಳಿಸಿದ್ದಾರೆ.

ಬೆಂಗಳೂರಿನಿಂದ ಸುಮಾರು 50 ಹಳೆಯ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ತರಲಾಗಿದೆ. ಇನ್ನು, ಜಿಲ್ಲೆಯಲ್ಲಿ ಚೆನ್ನಾಗಿದ್ದ ಬಸ್​​ಗಳನ್ನು​ ಬೇರೆ ಕಡೆಗಳಿಗೆ ಕಳುಹಿಸಿ ಹಳೆಯ ಬಿಎಂಟಿಸಿ ಬಸ್​ಗಳನ್ನು ಅಧಿಕಾರಿಗಳು ತಂದಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್​ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡಿಪೋ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ

ಅಜಾಗರೂಕತೆಯಿಂದ ಬಸ್ ಚಾಲನೆ, ನೋಟಿಸ್ ಜಾರಿ

ಬೆಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಯಾಣಿಕರು ದೂರು ನೀಡಿದ ಹಿನ್ನಲೆ ಬಿಎಂಟಿಸಿ ಡಿಪೋ-33ರ ವ್ಯವಸ್ಥಾಪಕರಿಂದ ಚಾಲಕ ವಿವೇಕಾನಂದಸ್ವಾಮಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಕಾರು ಓವರ್​ಟೇಕ್ ಮಾಡಿದ್ದ ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಯಾಣಿಕ ದೂರು ಹಿನ್ನೆಲೆ 3 ದಿನದೊಳಗೆ ಉತ್ತರ ನೀಡುವಂತೆ ಚಾಲಕ ವಿವೇಕಾನಂದಸ್ವಾಮಿಗೆ ಡಿಪೋ ಮ್ಯಾನೇಜರ್​ ನೋಟಿಸ್​ ನೀಡಿದ್ದಾರೆ. ಅಲ್ಲದೆ, ಸೂಕ್ತ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳವ ಎಚ್ಚರಿಕೆಯೂ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Thu, 2 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು