AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು

ಡಕೋಟವಾಗಿರುವ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಹೀಗೆ ಹಳೇಯ ಬಸ್​ಗಳು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಳಗಾವಿಯಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿರುವ ಬಿಎಂಟಿಸಿ ಡಕೋಟಾ ಬಸ್​ಗಳು
ಸಾಂದರ್ಭೀಕ ಚಿತ್ರ
TV9 Web
| Edited By: Rakesh Nayak Manchi|

Updated on:Feb 02, 2023 | 8:08 PM

Share

ಬೆಳಗಾವಿ: ಹಳೆದಾಯ್ತು ಅಂತ ಹೇಳಿ ಬೆಳಗಾವಿಗೆ ಸ್ಥಳಾಂತರಿದ ಬಿಎಂಟಿಸಿ ಬಸ್​ಗಳು (BMTC Buses) ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲೆಂದರಲ್ಲಿ ಕೆಟ್ಟು ನಿಂತಿವೆ. ಇದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗೆ ಟ್ರಾಫಿಕ್ ಜಾಮ್​ನಲ್ಲಿ (Traffic Jam) ಸಿಲುಕಿದ ಆ್ಯಂಬುಲೆನ್ಸ್ ಸುಮಾರು 15 ನಿಮಿಷಗಳ ಕಾಲ ದಟ್ಟಣೆಯಿಂದ ಹೊರಬರಲು ಪರದಾಡಿದೆ. ಪೊಲೀಸರು ಹರಸಾಹಸೊಟ್ಟು ಕೊನೆಗೂ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ದಾರಿಮಾಡಿಕೊಟ್ಟರು. ಒಂದು ಗಂಟೆ ಬಳಿಕ ಪೊಲೀಸರು ಮೆಕ್ಯಾನಿಕ್​ ಕರೆಸಿ ಬಸ್​ ಸರಿ ಮಾಡಿಸಿ ರಸ್ತೆಯಿಂದ ಕಳಿಸಿದ್ದಾರೆ.

ಬೆಂಗಳೂರಿನಿಂದ ಸುಮಾರು 50 ಹಳೆಯ ಬಿಎಂಟಿಸಿ ಬಸ್​ಗಳನ್ನು ಬೆಳಗಾವಿಗೆ ತರಲಾಗಿದೆ. ಇನ್ನು, ಜಿಲ್ಲೆಯಲ್ಲಿ ಚೆನ್ನಾಗಿದ್ದ ಬಸ್​​ಗಳನ್ನು​ ಬೇರೆ ಕಡೆಗಳಿಗೆ ಕಳುಹಿಸಿ ಹಳೆಯ ಬಿಎಂಟಿಸಿ ಬಸ್​ಗಳನ್ನು ಅಧಿಕಾರಿಗಳು ತಂದಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್​ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡಿಪೋ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ

ಅಜಾಗರೂಕತೆಯಿಂದ ಬಸ್ ಚಾಲನೆ, ನೋಟಿಸ್ ಜಾರಿ

ಬೆಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಯಾಣಿಕರು ದೂರು ನೀಡಿದ ಹಿನ್ನಲೆ ಬಿಎಂಟಿಸಿ ಡಿಪೋ-33ರ ವ್ಯವಸ್ಥಾಪಕರಿಂದ ಚಾಲಕ ವಿವೇಕಾನಂದಸ್ವಾಮಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಕಾರು ಓವರ್​ಟೇಕ್ ಮಾಡಿದ್ದ ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಯಾಣಿಕ ದೂರು ಹಿನ್ನೆಲೆ 3 ದಿನದೊಳಗೆ ಉತ್ತರ ನೀಡುವಂತೆ ಚಾಲಕ ವಿವೇಕಾನಂದಸ್ವಾಮಿಗೆ ಡಿಪೋ ಮ್ಯಾನೇಜರ್​ ನೋಟಿಸ್​ ನೀಡಿದ್ದಾರೆ. ಅಲ್ಲದೆ, ಸೂಕ್ತ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳವ ಎಚ್ಚರಿಕೆಯೂ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Thu, 2 February 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!