AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತೆ ಜೊತೆ ಓಡಿಹೋದ ಯುವಕನ ಮನೆ ಮೇಲೆ 30 ಜನರ ಗ್ಯಾಂಗ್ ದಾಳಿ: ಮಕ್ಕಳೂ ಸೇರಿ 10 ಜನ ಜಸ್ಟ್ ಮಿಸ್

Belagavi News: ವಿವಾಹಿತ ಮಹಿಳೆಯ ಜೊತೆ ಯುವಕನೊಬ್ಬ ಓಡಿಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 30ಕ್ಕೂ ಹೆಚ್ಚು ಜನರ ಗುಂಪೊಂದು ಯುವಕನ ಮನೆಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಮನೆಯ ಹೆಂಚು, ಪೀಠೋಪಕರಣ ಧ್ವಂಸಗೊಳಿಸಿ, ನಗದು ಹಾಗೂ 15 ಕುರಿಗಳನ್ನು ದೋಚಿರುವ ದುಷ್ಕರ್ಮಿಗಳ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾಹಿತೆ ಜೊತೆ ಓಡಿಹೋದ ಯುವಕನ ಮನೆ ಮೇಲೆ 30 ಜನರ ಗ್ಯಾಂಗ್ ದಾಳಿ: ಮಕ್ಕಳೂ ಸೇರಿ 10 ಜನ ಜಸ್ಟ್ ಮಿಸ್
ಸಾಂದರ್ಭಿಕ ಚಿತ್ರImage Credit source: tv9
Sahadev Mane
| Edited By: |

Updated on: Jun 30, 2026 | 7:40 AM

Share

ಮುಖ್ಯಾಂಶಗಳು

  • 30ಕ್ಕೂ ಹೆಚ್ಚು ಜನರ ಗುಂಪಿನಿಂದ ದಾಳಿ
  • ಮನೆಯಲ್ಲಿದ್ದ 10 ಮಂದಿ ಜಸ್ಟ್ ಮಿಸ್
  • ನಗದು, 15 ಕುರಿ ದೋಚಿದ ಗುಂಪು

ಬೆಳಗಾವಿ, ಜೂನ್ 30: ವಿವಾಹಿತ ಮಹಿಳೆಯೊಬ್ಬಳು ಪತಿಯ ಸ್ನೇಹಿತನ ಜೊತೆ ಓಡಿಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತಿ ಹಾಗೂ ಆಕೆಯ ಪೋಷಕರ ಬೃಹತ್ ಗುಂಪೊಂದು ಯುವಕನ ಮನೆಗೆ ನುಗ್ಗಿ ಭಾರಿ ದಾಂಧಲೆ ನಡೆಸಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ಜನರಿದ್ದ ಉದ್ರಿಕ್ತರ ಗುಂಪು ತಲ್ವಾರ್, ಜಂಬೆ, ಕುಡುಗೋಲು ಹಾಗೂ ಬಡಿಗೆಗಳ ಸಮೇತ ಯುವಕನ ಮನೆಗೆ ನುಗ್ಗಿ ಅಟ್ಟಹಾಸ ಮೆರೆದಿದೆ. ಈ ವೇಳೆ ಮನೆಯಲ್ಲಿದ್ದ ಯುವಕನ ಕುಟುಂಬ ಸದಸ್ಯರ ಹತ್ಯೆಗೆ ಯತ್ನ ನಡೆದಿದ್ದು, ಆರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು 10 ಜನ ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಕಂಪನಿಯಲ್ಲಿ ಕೆಲಸ ಮಾಡುವಾಗ ಶುರುವಾದ ಸಲುಗೆ

ಗ್ರಾಮದ ಬಸಪ್ಪ ನಾಯಕ್ ಹಾಗೂ ಯಲ್ಲಪ್ಪ ನಾಯಕ್ ಆತ್ಮೀಯ ಸ್ನೇಹಿತರಾಗಿದ್ದರು. ಕಳೆದ ವರ್ಷವಷ್ಟೇ ಬಸಪ್ಪ ನಾಯಕ್ ಹಾಗೂ ನಾಗವ್ವ ಎಂಬಾಕೆಯ ವಿವಾಹ ನಡೆದಿತ್ತು. ಬೆಳಗಾವಿಯ ಖಾಸಗಿ ಕಂಪನಿಯೊಂದರಲ್ಲಿ ಬಸಪ್ಪ ದಂಪತಿ ಹಾಗೂ ಯಲ್ಲಪ್ಪ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಪತಿಯ ಸ್ನೇಹಿತ ಯಲ್ಲಪ್ಪ ಹಾಗೂ ನಾಗವ್ವ ನಡುವೆ ಸಲುಗೆ ಬೆಳೆದು ಪ್ರೇಮಾಂಕುರವಾಗಿದೆ. ಇದರ ಪರಿಣಾಮವಾಗಿ ಎರಡು ದಿನಗಳ ಹಿಂದೆ ನಾಗವ್ವ ಮತ್ತು ಯಲ್ಲಪ್ಪ ಇಬ್ಬರೂ ಗ್ರಾಮ ಬಿಟ್ಟು ಓಡಿಹೋಗಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಬಸಪ್ಪ ನಾಯಕ್, ನಾಗವ್ವಳ ಪೋಷಕರು ಹಾಗೂ ಸಂಬಂಧಿಕರು ಒಟ್ಟಾಗಿ ಯಲ್ಲಪ್ಪನ ಮನೆಗೆ ನುಗ್ಗಿ ಕಲ್ಲು ತೂರಾಟ ನಡೆಸಿ, ಹೆಂಚುಗಳನ್ನು ಪುಡಿಪುಡಿ ಮಾಡಿದ್ದಾರೆ.

ಚಿನ್ನಾಭರಣ, ತಿಜೋರಿ ಧ್ವಂಸ: ಕುರಿ ಕದ್ದು ಪಾರ್ಟಿ ಮಾಡಿದ ದುಷ್ಕರ್ಮಿಗಳು!

ದುಷ್ಕರ್ಮಿಗಳ ಗುಂಪು ಯಲ್ಲಪ್ಪನ ಮನೆಗೆ ನುಗ್ಗಿ ಟಿವಿ, ಪೀಠೋಪಕರಣ ಹಾಗೂ ತಿಜೋರಿಯನ್ನು ಧ್ವಂಸಗೊಳಿಸಿದೆ. ಅಷ್ಟಕ್ಕೇ ನಿಲ್ಲದೆ ಮನೆಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಕೊಟ್ಟಿಗೆಯಲ್ಲಿದ್ದ 15 ಕುರಿಗಳನ್ನು ಅಪಹರಿಸಿಕೊಂಡು ಪರಾರಿಯಾಗಿದೆ. ವಿಕೃತಿಯ ಪರಾಕಾಷ್ಠೆ ಎಂಬಂತೆ, ಕದ್ದು ತಂದ ಕೃಷಿ ಕುರಿಗಳನ್ನು ಕಟ್ ಮಾಡಿ ದುಷ್ಕರ್ಮಿಗಳು ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳ ಈ ಭೀಕರ ಅಟ್ಟಹಾಸದಿಂದ ಯಲ್ಲಪ್ಪನ ತಂದೆ, ತಾಯಿ, ಸಹೋದರಿಯರು ಹಾಗೂ ತಮ್ಮ ತೀವ್ರ ಭಯಭೀತರಾಗಿದ್ದಾರೆ.

ಪೊಲೀಸ್ ಕಮಿಷನರ್‌ಗೆ ರಕ್ಷಣೆಗಾಗಿ ಮನವಿ

ಘಟನೆಯ ಬಳಿಕ ತೀವ್ರ ಆತಂಕಕ್ಕೆ ಒಳಗಾಗಿರುವ ಯಲ್ಲಪ್ಪನ ಪೋಷಕರು ನಗರ ಪೊಲೀಸ್ ಕಮಿಷನರ್ ಭೂಷಣ್ ಜಿ. ಬೊರಸೆ ಅವರನ್ನು ಖುದ್ದಾಗಿ ಭೇಟಿಯಾಗಿ, ಕುಟುಂಬಕ್ಕೆ ಜೀವ ರಕ್ಷಣೆ ನೀಡಬೇಕು ಹಾಗೂ ದಾಳಿ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಸದ್ಯ ನಾಗರಾಜ್ ನಾಯಕ್, ರವಿ, ಈಶ್ವರ, ಶಿವಪ್ಪ ಸೇರಿದಂತೆ ಹಲವರ ವಿರುದ್ಧ ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ