AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು, ದತ್ತ ಮಂದಿರಕ್ಕೆ ಜಲದಿಗ್ಬಂಧನ

ಕುಂದಾನಗರಿ ಜನರನ್ನ ಕಳೆದ ಮೂರು ವರ್ಷದಿಂದಲೂ ಪ್ರವಾಹ ಕಾಡ್ತಿದೆ. ಮೊನ್ನೆಯಷ್ಟೇ ಭೀಕರ ಪ್ರವಾಹ ಎದುರಿಸಿದ್ದ ಜಿಲ್ಲೆ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ದೇಗುಲಗಳನ್ನ ನದಿ ನೀರು ಸುತ್ತುವರೆದಿದ್ದು, ಬೆಳೆಗಳೆಲ್ಲ ಮಾಯವಾಗಿವೆ.

ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು, ದತ್ತ ಮಂದಿರಕ್ಕೆ ಜಲದಿಗ್ಬಂಧನ
ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು, ದತ್ತ ಮಂದಿರಕ್ಕೆ ಜಲದಿಗ್ಬಂಧನ
TV9 Web
| Edited By: |

Updated on: Sep 16, 2021 | 7:59 AM

Share

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆಯಾಗ್ತಿದ್ದು, ಕೃಷ್ಣಾ, ವೇದಗಂಗಾ, ದೂದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಕೃಷ್ಣಾ ನದಿಗೆ 50 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿದ್ದಾರೆ. ಇದ್ರ ಜೊತೆಗೆ ಮಳೆ ನೀರು ಕೂಡ ಸೇರಿದ್ದು, ಕೃಷ್ಣಾ ನದಿಯಲ್ಲಿ ಒಂದೂವರೆ ಲಕ್ಷ ಕ್ಯೂಸೆಕ್ ನಷ್ಟು ನೀರು ಹೊರ ಹೋಗ್ತಿದೆ. ಈ ಭಾರಿ ಪ್ರಮಾಣದ ನೀರಿನಿಂದಾಗಿ, ಬೆಳಗಾವಿ ಜಿಲ್ಲೆಯಲ್ಲಿ ಎಂಟಕ್ಕೂ ಅಧಿಕ ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ.

ವೇದಗಂಗಾ ನದಿ ನೀರಿನಿಂದಾಗಿ, ನಿಪ್ಪಾಣಿಯ ಬಾರವಾಡ‌ ಮತ್ತು ಕುಣ್ಣೂರ ಗ್ರಾಮದ ಮಧ್ಯೆ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ದೂದಗಂಗಾ ನದಿ ನೀರಿನಿಂದಾಗಿ ಬೋಜ ಮತ್ತು ಕಾರದಗಾ ಗ್ರಾಮಕ್ಕೆ ಸೇತುವೆ ಮುಳುಗಿದೆ. ಚಿಕ್ಕೋಡಿಯ ಮಲ್ಲಿಕವಾಡ ದತ್ತವಾಡ ಸೇತುವೆ ನೀರಿನಲ್ಲಿ ಮರೆಯಾಗಿದ್ದು, ಗ್ರಾಮಗಳು ಸಂಪರ್ಕ ಕಡಿತುಗೊಂಡಿವೆ. ಇನ್ನು, ಕೃಷ್ಣಾ ನದಿ ನೀರಿನಿಂದಾಗಿ, ಕಲ್ಲೋಳ ಹೊರ ವಲಯದ ದತ್ತ ಮಂದಿರಕ್ಕೆ ಜಲದಿಗ್ಬಂಧನ ಬಿದ್ದಿದೆ. ಜನರಲ್ಲೂ ಕೂಡ ಭೀತಿ ಹೆಚ್ಚಾಗಿದೆ.

ಪ್ರವಾಹದ ಪರಿಸ್ಥಿತಿ ಒಂದು ಕಡೆ ಆದ್ರೆ, 2019ರ ನೆರೆ ಸಂತ್ರಸ್ತರು ಪರಿಹಾರಕ್ಕಾಗಿ ಬೀದಿಗಿಳಿದಿದ್ದಾರೆ. ಮೂಡಲಗಿ ತಾಲೂಕಿನ ಇಪ್ಪತ್ತಕ್ಕೂ ಅಧಿಕ ಗ್ರಾಮಸ್ಥರು ನಿನ್ನೆ ಪ್ರತಿಭಟನೆ ನಡೆಸಿದ್ರು. ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ತನಕ ಪಾದಯಾತ್ರೆ ನಡೆಸಿದ್ರು. ವಾರದೊಳಗೆ ಪರಿಹಾರ ನೀಡದಿದ್ರೆ, ಮಕ್ಕಳು ಮರಿ, ಜಾನುವಾರುಗಳೊಂದಿಗೆ ಡಿಸಿ ಕಚೇರಿಗೆ ಆಗಮಿಸಿ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಒಟ್ನಲ್ಲಿ, 2 ತಿಂಗಳ ಅವಧಿಯಲ್ಲಿ ಎರಡನೇ ಸಲ ಬೆಳಗಾವಿ ಜಿಲ್ಲೆಗೆ ಪ್ರವಾಹದ ಭೀತಿ ಕಾಡುತ್ತಿದೆ. ಗ್ರಾಮದ ಹತ್ತಿರಕ್ಕೆ ಬರುತ್ತಿರುವ ನದಿ ನೀರು ಕಂಡು ಜನರೆಲ್ಲ ಬೆಚ್ಚಿ ಬಿದಿದ್ದಾರೆ.

belagavi flood

ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು

ಇದನ್ನೂ ಓದಿ: ಬೆಳಗಾವಿಯಲ್ಲಿ ಶುರುವಾಯ್ತು ಪ್ರವಾಹ ಭೀತಿ! ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ