AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು, ದತ್ತ ಮಂದಿರಕ್ಕೆ ಜಲದಿಗ್ಬಂಧನ

ಕುಂದಾನಗರಿ ಜನರನ್ನ ಕಳೆದ ಮೂರು ವರ್ಷದಿಂದಲೂ ಪ್ರವಾಹ ಕಾಡ್ತಿದೆ. ಮೊನ್ನೆಯಷ್ಟೇ ಭೀಕರ ಪ್ರವಾಹ ಎದುರಿಸಿದ್ದ ಜಿಲ್ಲೆ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ದೇಗುಲಗಳನ್ನ ನದಿ ನೀರು ಸುತ್ತುವರೆದಿದ್ದು, ಬೆಳೆಗಳೆಲ್ಲ ಮಾಯವಾಗಿವೆ.

ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು, ದತ್ತ ಮಂದಿರಕ್ಕೆ ಜಲದಿಗ್ಬಂಧನ
ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು, ದತ್ತ ಮಂದಿರಕ್ಕೆ ಜಲದಿಗ್ಬಂಧನ
TV9 Web
| Edited By: ಆಯೇಷಾ ಬಾನು|

Updated on: Sep 16, 2021 | 7:59 AM

Share

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆಯಾಗ್ತಿದ್ದು, ಕೃಷ್ಣಾ, ವೇದಗಂಗಾ, ದೂದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಕೃಷ್ಣಾ ನದಿಗೆ 50 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿದ್ದಾರೆ. ಇದ್ರ ಜೊತೆಗೆ ಮಳೆ ನೀರು ಕೂಡ ಸೇರಿದ್ದು, ಕೃಷ್ಣಾ ನದಿಯಲ್ಲಿ ಒಂದೂವರೆ ಲಕ್ಷ ಕ್ಯೂಸೆಕ್ ನಷ್ಟು ನೀರು ಹೊರ ಹೋಗ್ತಿದೆ. ಈ ಭಾರಿ ಪ್ರಮಾಣದ ನೀರಿನಿಂದಾಗಿ, ಬೆಳಗಾವಿ ಜಿಲ್ಲೆಯಲ್ಲಿ ಎಂಟಕ್ಕೂ ಅಧಿಕ ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ.

ವೇದಗಂಗಾ ನದಿ ನೀರಿನಿಂದಾಗಿ, ನಿಪ್ಪಾಣಿಯ ಬಾರವಾಡ‌ ಮತ್ತು ಕುಣ್ಣೂರ ಗ್ರಾಮದ ಮಧ್ಯೆ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ದೂದಗಂಗಾ ನದಿ ನೀರಿನಿಂದಾಗಿ ಬೋಜ ಮತ್ತು ಕಾರದಗಾ ಗ್ರಾಮಕ್ಕೆ ಸೇತುವೆ ಮುಳುಗಿದೆ. ಚಿಕ್ಕೋಡಿಯ ಮಲ್ಲಿಕವಾಡ ದತ್ತವಾಡ ಸೇತುವೆ ನೀರಿನಲ್ಲಿ ಮರೆಯಾಗಿದ್ದು, ಗ್ರಾಮಗಳು ಸಂಪರ್ಕ ಕಡಿತುಗೊಂಡಿವೆ. ಇನ್ನು, ಕೃಷ್ಣಾ ನದಿ ನೀರಿನಿಂದಾಗಿ, ಕಲ್ಲೋಳ ಹೊರ ವಲಯದ ದತ್ತ ಮಂದಿರಕ್ಕೆ ಜಲದಿಗ್ಬಂಧನ ಬಿದ್ದಿದೆ. ಜನರಲ್ಲೂ ಕೂಡ ಭೀತಿ ಹೆಚ್ಚಾಗಿದೆ.

ಪ್ರವಾಹದ ಪರಿಸ್ಥಿತಿ ಒಂದು ಕಡೆ ಆದ್ರೆ, 2019ರ ನೆರೆ ಸಂತ್ರಸ್ತರು ಪರಿಹಾರಕ್ಕಾಗಿ ಬೀದಿಗಿಳಿದಿದ್ದಾರೆ. ಮೂಡಲಗಿ ತಾಲೂಕಿನ ಇಪ್ಪತ್ತಕ್ಕೂ ಅಧಿಕ ಗ್ರಾಮಸ್ಥರು ನಿನ್ನೆ ಪ್ರತಿಭಟನೆ ನಡೆಸಿದ್ರು. ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ತನಕ ಪಾದಯಾತ್ರೆ ನಡೆಸಿದ್ರು. ವಾರದೊಳಗೆ ಪರಿಹಾರ ನೀಡದಿದ್ರೆ, ಮಕ್ಕಳು ಮರಿ, ಜಾನುವಾರುಗಳೊಂದಿಗೆ ಡಿಸಿ ಕಚೇರಿಗೆ ಆಗಮಿಸಿ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಒಟ್ನಲ್ಲಿ, 2 ತಿಂಗಳ ಅವಧಿಯಲ್ಲಿ ಎರಡನೇ ಸಲ ಬೆಳಗಾವಿ ಜಿಲ್ಲೆಗೆ ಪ್ರವಾಹದ ಭೀತಿ ಕಾಡುತ್ತಿದೆ. ಗ್ರಾಮದ ಹತ್ತಿರಕ್ಕೆ ಬರುತ್ತಿರುವ ನದಿ ನೀರು ಕಂಡು ಜನರೆಲ್ಲ ಬೆಚ್ಚಿ ಬಿದಿದ್ದಾರೆ.

belagavi flood

ಬೆಳಗಾವಿಗೆ ಮತ್ತೆ ಕಂಟಕ; ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು

ಇದನ್ನೂ ಓದಿ: ಬೆಳಗಾವಿಯಲ್ಲಿ ಶುರುವಾಯ್ತು ಪ್ರವಾಹ ಭೀತಿ! ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ