AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Firing ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್: 18 ಗಂಟೆಯೊಳಗೆ ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆ ಶ್ರೀರಾಮಸೇನೆ ಅಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 18 ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ.

Firing ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್: 18 ಗಂಟೆಯೊಳಗೆ ಆರೋಪಿಗಳ ಬಂಧನ
ಆರೋಪಿ ಅಭಿಜಿತ್ ಭಾತ್ಕಂಡೆ
TV9 Web
| Edited By: |

Updated on:Jan 08, 2023 | 2:17 PM

Share

ಬೆಳಗಾವಿ: ಬೆಳಗಾವಿ ಜಿಲ್ಲೆ ಶ್ರೀರಾಮಸೇನೆ ಅಧ್ಯಕ್ಷ ರವಿ ಮೇಲೆ ಫೈರಿಂಗ್ (Belagavi Firing)  ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 18 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಕ್ಯಾಂಪ್​ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಬಂಧಿತ ಆರೋಪಿಗಳು. ಆರೋಪಿಗಳ ಬಂಧನವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ, ರವಿ ಗದ್ದಕ್ಕೆ ತಗುಲಿ ಬಳಿಕ ಚಾಲಕನ ಕೈಗೆ ಬಿದ್ದ ಬುಲೆಟ್

ಇನ್ನು ಈ ಬಗ್ಗೆ ಇಂದು(ಜನವರಿ 08) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಫೈರಿಂಗ್ ನಡೆದು 18 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೈಕ್​ನಲ್ಲಿ ಬಂದು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಈಗ ಫೈರಿಂಗ್ ಪ್ರಕರಣದಲ್ಲಿ ಸುಫಾರಿ ನೀಡಿದ ಆರೋಪಿ ಸೇರಿ ಮೂವರ ಬಂಧನವಾಗಿದೆ. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದಾಳಿ ನಡೆಸಿದ್ದರು. ಅಭಿಜಿತ್ ಮತ್ತು ರವಿ ನಡುವೆ ಹಣಕಾಸಿನ ವ್ಯವಹಾರ, ರಿಯಲ್ ಎಸ್ಟೇಟ್ ಉದ್ಯಮ ಮಾಡುತ್ತಿದ್ದರು. 2020ರ ಜ.1ರಂದು ಅಭಿಜಿತ್ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆಯ ಪ್ರಮುಖ ಆರೋಪಿ ರವಿ ಕೋಕಿತಕರ್ ಆಗಿರುತ್ತಾರೆ. ವೈಯಕ್ತಿಕ ದ್ವೇಷ ಹಿನ್ನೆಲೆ ನಿನ್ನೆ ಈ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದರು.

ಈ ಆರೋಪಿಗಳು ನಿನ್ನೆ(ಜನವರಿ 08) ಸಂಜೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಕಾರಿನಲ್ಲಿ ಹೋಗುವಾಗ ಹಿಂಡಲಗಾ ಬಳಿ ಗುಂಡಿನ ದಾಳಿ ನಡೆಸಿದ್ದರು. ರವಿ ಕೋಕಿತಕರ್ ಕಾರಿನಲ್ಲಿ ಬೆಳಗಾವಿಯಿಂದ ಹಿಂಡಲಗಾ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್​​​​ನಲ್ಲಿ ಕಾರು ಸ್ಲೋ ಆಗಿದೆ. ಈ ವೇಳೆಯೇ ಫೈರಿಂಗ್ ಮಾಡಿದ್ದರು. ಇದರಿಂದ ಗುಂಡು ರವಿ ಗದ್ದಕ್ಕೆ ತಗುಲಿ ಬಳಿಕ ಚಾಲಕನ ಕೈಗೆ ತಗುಲಿತ್ತು.

ಇದನ್ನೂ ಓದಿ: ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರ ಮೇಲೆ ಫೈರಿಂಗ್ ಪ್ರಕರಣ; ಆರೋಪಿಗಳಿಗಾಗಿ ಗೋವಾ, ಮಹಾರಾಷ್ಟ್ರದಲ್ಲಿ ಶೋಧ

ಆರೋಪಿಗಳ ಬಂಧನಕ್ಕೆ 4 ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ನಾಲ್ಕು ಪ್ರತ್ಯೇಕ ತಂಡ ರಚನೆ ಮಾಡಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಒಂದು ತಂಡ ಗೋವಾ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿ ತೀವ್ರ ಶೋಧ ನಡೆಸಿತ್ತು.ಇನ್ನುಳಿದು ಮತ್ತೆರಡು ತಂಡಗಳು ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಿತ್ತು.

ಇನ್ನಷ್ಟು ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:05 pm, Sun, 8 January 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ