AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ

ಅದು ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಕಿದ್ದ ಖತರ್ನಾಕ್ ಖದೀಮರ ಗ್ಯಾಂಗ್. ಇವರು ಫೀಲ್ಡಿಗಿಳಿದರು ಅಂದ್ರೆ ಸ್ಕೆಚ್​​ ಹಾಕಿದ್ದು ಮಿಸ್​​ ಆಗೋ ಮಾತೇ ಇರಲಿಲ್ಲ. ಹೀಗಿದ್ದ ಟೀಂನ ಕೊನೆಗೂ ಬೆಳಗಾವಿಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸುಳಿವೇ ಇಲ್ಲದ ರೀತಿ ಕಳ್ಳತನ ಮಾಡ್ತಿದ್ದ ಇವರು ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ? ಎಂಬ ಮಾಹಿತಿ ಇಲ್ಲಿದೆ.

ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ
ಜಪ್ತಿ ಮಾಡಲಾದ ವಾಹನಗಳುImage Credit source: Google
ಸಹದೇವ್​ ಮಾನೆ
| Edited By: |

Updated on:Mar 09, 2026 | 5:41 PM

Share

ಬೆಳಗಾವಿ, ಮಾರ್ಚ್​​ 09: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಖತರ್ನಾಕ್​​ ಅಂತಾರಾಜ್ಯ ಕಳ್ಳರ ಗ್ಯಾಂಗ್​​ನ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ಸು ಕಂಡಿದ್ದಾರೆ. ವಾಹನವೊಂದರ ಕಳ್ಳತನ ಪ್ರಕರಣದ ಬೆನ್ನು ಬಿದ್ದ ಖಾಕಿ ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನ ಜಪ್ತಿ ಮಾಡಿದೆ. ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ಆರೋಪಿಗಳಿಗಾಗಿಯೂ ಬಲೆ ಬೀಸಿದೆ.

ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್ ಅಹಮ್ಮದ್ ಬಂಧಿತ ಆರೋಪಿಗಳು. ಇವರು ಕರ್ನಾಟಕ ಮತ್ತು ನೆರೆಯ ಆಂಧ್ರ ಪ್ರದೇಶ, ಮಹಾರಾಷ್ಟ್ರ ಮೂಲದವರು ಎಂಬುದು ಗೊತ್ತಾಗಿದೆ. ಆರೋಪಿಗಳಿಂದ 8 ಮಿನಿ ಗೂಡ್ಸ್​​ ವಾಹನ, ರಾಯಲ್​​ ಎನ್​​ಫೀಲ್ಡ್ ಮತ್ತು ಹೋಂಡಾ ಸೇರಿ ಒಟ್ಟು 8​​ ಬೈಕ್​ಗಳು, 5 ಸ್ಕೂಟರ್​​ಗಳನ್ನು ಜಪ್ತಿ ಮಾಡಲಾಗಿದೆ. ಒಂದು ವಾಹನ ಕಳ್ಳತನವಾಗಿದೆ ಅಂತಾ ಹುಡುಕಾಟ ಶುರು ಮಾಡಿದ್ದ ಪೊಲೀಸರ ಬಲೆಗೆ ದೊಡ್ಡ ತಿಮಿಂಗಲವೇ ಬಿದ್ದಿದೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ಮೂರು ತಿಂಗಳ ಹಿಂದೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಒಂದು ಮಿನಿ ಗೂಡ್ಸ್ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಮಾರಿಹಾಳ ಠಾಣೆ ಪೊಲೀಸರು ತನಿಖೆ ಶುರು ಮಾಡಿದ್ದರು. ಈ ವೇಳೆ ಬೈಕ್ ಮೇಲೆ ಬಂದಿದ್ದ ನಾಲ್ಕು ಜನ ಮಿನಿ ಗೂಡ್ಸ್ ವಾಹನ ಕದ್ದು ಪರಾರಿಯಾಗಿರೋದು ಗೊತ್ತಾಗಿತ್ತು. ಆರೋಪಿಗಳು ಬಂದಿದ್ದ ಬೈಕ್ ನಂಬರ್​​ನ ಮಾಹಿತಿಗಾಗಿ ಪೊಲೀಸರು ಬೆನ್ನುಬಿದ್ದಾಗ ಆ ಬೈಕ್ ಕೂಡ ಕಳ್ಳತನ ಆಗಿರೋದು ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆರೋಪಿಗಳು ಕದ್ದ ವಾಹನಗಳನ್ನೇ ಬಳಸಿಕೊಂಡು ಮತ್ತೊಂದು ವಾಹನ ಕಳ್ಳತನ ಮಾಡುತ್ತಿರುವ ವಿಚಾರ ತಿಳಿದ ಪೊಲೀಸರು, ಸಿಸಿಟಿವಿ ಹಾಗೂ ಟೆಕ್ನಿಕಲ್ ಎವಿಡನ್ಸ್ ಆಧಾರದ ಮೇಲೆ ಕೊನೆಗೂ ಐದು ಜನ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳುವಾಗಿದ್ದ ತಮ್ಮ ವಾಹನಗಳು ಮರಳಿ ಸಿಕ್ಕ ಹಿನ್ನೆಲೆ ಅವುಗಳ ಮಾಲೀಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:38 pm, Mon, 9 March 26

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್