AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka constables exam 2021: ಬೆಳಗಾವಿ ಪೊಲೀಸ್ ಕಾನ್ಸ್​​​ಟೇಬಲ್​ ಅಭ್ಯರ್ಥಿಗಳ ಕಳ್ಳಾಟ ತನಿಖೆ ಸಿಐಡಿಗೆ

CID: ದಾಳಿ ವೇಳೆ 12 ಜನರನ್ನು ಬಂಧಿಸಿದ್ದ ಬೆಳಗಾವಿ ಪೊಲೀಸರು 33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್, 13 ಬ್ಲೂಟೂತ್, ಮೂರು ಟ್ಯಾಬ್, ಒಂದು ಲ್ಯಾಪ್‌ಟಾಪ್ ವಶಕ್ಕೆ ಪಡೆದಿದ್ದರು. ಇಬ್ಬರು ಪರೀಕ್ಷಾರ್ಥಿಗಳನ್ನೂ ಬಂಧಿಸಿದ್ದರು. ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕೈವಾಡ ಶಂಕೆ ವ್ಯಕ್ತವಾಗಿದೆ.

Karnataka constables exam 2021: ಬೆಳಗಾವಿ ಪೊಲೀಸ್ ಕಾನ್ಸ್​​​ಟೇಬಲ್​ ಅಭ್ಯರ್ಥಿಗಳ ಕಳ್ಳಾಟ ತನಿಖೆ ಸಿಐಡಿಗೆ
ಬೆಳಗಾವಿ ಪೊಲೀಸ್ ಕಾನ್ಸ್​​​ಟೇಬಲ್​ ಅಭ್ಯರ್ಥಿಗಳ ಕಳ್ಳಾಟ ತನಿಖೆ ಸಿಐಡಿಗೆ
TV9 Web
| Edited By: |

Updated on:Nov 04, 2021 | 10:35 AM

Share

ಬೆಳಗಾವಿ: ಅವರು ಭವಿಷ್ಯದ ಪೊಲೀಸ್ ಕಾನ್ಸ್​​​ಟೇಬಲ್​ಗಳಾಬೇಕಿತ್ತು. ಶಿಸ್ತು, ಪ್ರಮಾಣಿಕತೆಗೆ ಹೆಸರಾದ ಇಲಾಖೆಗೆ ಜಮಾ ಆಗಬೇಕಿದ್ದವರು. ಆದರೆ ಆತುರಗೇಡಿಗಳು ಕಳ್ಳಾಟದಲ್ಲಿ ತೊಡಗಿದರು. ಪರಿಣಾಮ ಈಗ ಇಡೀ ವೃತ್ತಾಂತ ಸಿಐಡಿ ಪೊಲೀಸರ ತನಿಖೆ ಒಳಪಡಲಿದೆ. ಕಳೆದ ತಿಂಗಳು ನಡೆದಿದ್ದ ಪೊಲೀಸ್ ಕಾನ್ಸ್​​​ಟೇಬಲ್​ ನೇಮಕ ಪರೀಕ್ಷೆಯಲ್ಲಿ (Karnataka constables’ exam)​ ವಿದ್ಯುನ್ಮಾನ ತಂತ್ರಜ್ಞಾನ ಬಳಸಿ ನಕಲು ಮಾಡುವುದು ಪತ್ತೆಯಾಗಿತ್ತು. ಇದೀಗ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ. ಪ್ರಕರಣದ ಸಮಗ್ರ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡುವಂತೆ ಬೆಳಗಾವಿ ನಗರ ಪೊಲೀಸರಿಗೆ ಆದೇಶಿಸಲಾಗಿದೆ.

ಬೆಳಗಾವಿಯಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಪರೀಕ್ಷೆಯ ವೇಳೆ ಸಿವಿಲ್ ಪೊಲೀಸ್ ಕಾನ್ಸ್​​​ಟೇಬಲ್​ ಪರೀಕ್ಷೆಯಲ್ಲಿ ನಕಲು ನಡೆಯುತ್ತಿರುವುದು ಪತ್ತೆಯಾಗಿತ್ತು. ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ (Bluetooth) ನಕಲಿಗೆ ಯತ್ನಿಸಲಾಗಿತ್ತು. ಈ ಸಂಬಂಧ ಪೊಲೀಸರು ರಾಮತೀರ್ಥ ನಗರದ ಕೇಂದ್ರದಲ್ಲಿ ದಾಳಿ ನಡೆಸಿದ್ದರು.

ದಾಳಿ ವೇಳೆ 12 ಜನರನ್ನು ಬಂಧಿಸಿದ್ದ ಬೆಳಗಾವಿ ಪೊಲೀಸರು 33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್, 13 ಬ್ಲೂಟೂತ್, ಮೂರು ಟ್ಯಾಬ್, ಒಂದು ಲ್ಯಾಪ್‌ಟಾಪ್ ವಶಕ್ಕೆ ಪಡೆದಿದ್ದರು. ಇಬ್ಬರು ಪರೀಕ್ಷಾರ್ಥಿಗಳನ್ನೂ ಬಂಧಿಸಿದ್ದರು. ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕೈವಾಡ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

Raichurಲ್ಲಿ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್ | FIR |Tv9 kannada

(belagavi police constables examination fraud handed over to cid bangalore)

Published On - 10:35 am, Thu, 4 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!