ಎಂಇಎಸ್‌ ಮುಖಂಡನಿಗೆ ಮಸಿ ಬಳಿದ ಕನ್ನಡ ಹೋರಾಟಗಾರರಿಗೆ ರೌಡಿಶೀಟರ್‌ ಪಟ್ಟ; ನಾಡವಿರೋಧಿ ಸರ್ಕಾರ ಎಂದು ಎಲ್ಲೆಡೆ ಆಕ್ರೋಶ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರೌಡಿ ಚಟುವಟಿಕೆ ಮಾಡುವವರ ಮೇಲೆ ನಿಗಾ ಇಡುವುದಕ್ಕಾಗಿ ಪೊಲೀಸರು ಪಟ್ಟಿ ತಯಾರಿಸಿದ್ದು ಅದರಲ್ಲಿ ಕನ್ನಡಪರ ಹೋರಾಟಗಾರ ಸಂಪತ್‌ ಮತ್ತು ಅನಿಲ್ ಹೆಸರು ಇರುವುದು ಸಿಟ್ಟಿಗೆ ಕಾರಣವಾಗಿದೆ.

ಎಂಇಎಸ್‌ ಮುಖಂಡನಿಗೆ ಮಸಿ ಬಳಿದ ಕನ್ನಡ ಹೋರಾಟಗಾರರಿಗೆ ರೌಡಿಶೀಟರ್‌ ಪಟ್ಟ;  ನಾಡವಿರೋಧಿ ಸರ್ಕಾರ ಎಂದು ಎಲ್ಲೆಡೆ ಆಕ್ರೋಶ
ಅನಿಲ್ ದಡ್ಡಿಮನಿ, ಸಂಪತ್‌ ಕುಮಾರ್ ದೇಸಾಯಿ
Follow us
| Updated By: ಆಯೇಷಾ ಬಾನು

Updated on: Feb 11, 2023 | 11:13 AM

ಬೆಳಗಾವಿ: MES ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದ ಪ್ರಕರಣದಲ್ಲಿ ಭಾಗಿಯಾದ ಕಾರಣ ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರ ಸಂಪತ್‌ ಕುಮಾರ್ ದೇಸಾಯಿ, ಅನಿಲ್ ದಡ್ಡಿಮನಿ ವಿರುದ್ಧ ರೌಡಿಶೀಟ್​ ಓಪನ್​ ಮಾಡಲಾಗಿದೆ. ರೌಡಿಶೀಟ್ ನೋಟಿಸ್ ನೋಡಿ ಕನ್ನಡಪರ ಹೋರಾಟಗಾರರು ಶಾಕ್ ಆಗಿದ್ದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

2021ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ಗೆ ನುಗ್ಗಿದ ಕೆಲವರು ಎಂಇಎಸ್ ಮುಖಂಡ ದೀಪಕ್ ದಳವಿಗೆ ಮಸಿ ಬಳಿದಿದ್ದರು. ಆ ಘಟನೆಯಲ್ಲಿ ಭಾಗಿಯಾಗಿದಕ್ಕೆ ಸಂಪತ್‌ ಕುಮಾರ್‌ ದೇಸಾಯಿ ಮತ್ತು ಅನಿಲ್‌ ದಡ್ಡಿ ಮನಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಅವರು ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಸದ್ಯ ಈಗ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರೌಡಿ ಚಟುವಟಿಕೆ ಮಾಡುವವರ ಮೇಲೆ ನಿಗಾ ಇಡುವುದಕ್ಕಾಗಿ ಪೊಲೀಸರು ಪಟ್ಟಿ ತಯಾರಿಸಿದ್ದು ಅದರಲ್ಲಿ ಕನ್ನಡಪರ ಹೋರಾಟಗಾರ ಸಂಪತ್‌ ಮತ್ತು ಅನಿಲ್ ಹೆಸರು ಇರುವುದು ಸಿಟ್ಟಿಗೆ ಕಾರಣವಾಗಿದೆ.

ಅನಿಲ್ ದಡ್ಡಿಮನಿ ವಿರುದ್ಧ ​​ಟಿಳಕವಾಡಿ ಠಾಣೆಯಲ್ಲಿ, ಸಂಪತ್‌ ಕುಮಾರ್ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ರೌಡಿಶೀಟ್​ ಓಪನ್ ಆಗಿದೆ. ಪೊಲೀಸರು ಇಬ್ಬರಿಗೂ ನೋಟಿಸ್​ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾರಣ ಕೇಳಿ ನೋಟಿಸ್​ ಜಾರಿ ಮಾಡಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಹಿನ್ನೆಲೆ 50 ಸಾವಿರ ರೂ. ಮೊತ್ತದ ಸ್ವಯಂ ಮುಚ್ಚಳಿಕೆ ನೀಡುವಂತೆ ಹಾಗೂ ಹಾಗೂ ಇಬ್ಬರೂ ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ.

ಕನ್ನಡಪರ ಹೋರಾಟಗಾರರ ಆಕ್ರೋಶ

ಸಂಪತ್‌ಕುಮಾರ್, ಅನಿಲ್‌ ವಿರುದ್ಧದ ರೌಡಿಶೀಟ್ ಕೈಬಿಡಲು ಆಗ್ರಹಿಸಿ ಸರ್ಕಾರ, ಪೊಲೀಸರ ಕ್ರಮಕ್ಕೆ ಕನ್ನಡಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅಭಿಯಾನ ಶುರುವಾಗಿದೆ. ಹ್ಯಾಷ್​ಟ್ಯಾಗ್​​ ನಾಡವಿರೋಧಿ ಸರ್ಕಾರ ಎಂಬ ಹೆಸರಿನಲ್ಲಿ ಅಭಿಯಾನ ಮಾಡಲಾಗುತ್ತಿದ್ದು ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ