AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್

ಬೆಳಗಾವಿ ಪೊಲೀಸರು ಚೋರ್ಲಾ ಘಾಟ್ ಮಾರ್ಗದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪುಷ್ಪ ಸಿನೆಮಾದ ಶೈಲಿಯಲ್ಲಿ ಕಸದ ವಾಹನದ ಒಳಗೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಚಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರದ ಜಿಲ್ಲಾ ಪಂಚಾಯತ್ ಚುನಾವಣೆಗಾಗಿ ಇದನ್ನು ಸಾಗಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ. ಈ ಘಟನೆ ಚೆಕ್ ಪೋಸ್ಟ್‌ಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡಿಸಿದೆ.

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್
ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್
ಸಹದೇವ್​ ಮಾನೆ
| Edited By: |

Updated on: Feb 01, 2026 | 10:36 AM

Share

ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

800 ಬಾಕ್ಸ್ ಗೋವಾ ಮದ್ಯ!

ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿತ್ತು ಎಂಬ ಖಚಿತ ಮಾಹಿತಿಯ ಮೇರೆಗೆ, ಸಿಪಿಐ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತಲುಪಬೇಕಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದರೊಳಗೆ ಕಸ ತುಂಬಿರುವಂತೆ ಬಿಂಬಿಸಿ, ಕಸದ ರಾಶಿಯ ಒಳಭಾಗದಲ್ಲಿ 800 ಬಾಕ್ಸ್ ಅಕ್ರಮ ಗೋವಾ ಮದ್ಯವನ್ನು ಇಟ್ಟು ಸಾಗಿಸಲಾಗುಯತ್ತಿತ್ತು ಎಂಬುದನ್ನು ಪತ್ತೆಹಚ್ಚಿದ್ದಾರೆ.

ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ

ಎರಡೆರಡು ಚೆಕ್ ಪೋಸ್ಟ್ ದಾಟಿದ್ದ ಗ್ಯಾಂಗ್

ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 25 ಲಕ್ಷ ರೂ.ಗಿಂತ ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಕಣ್ಣಿಗೆ ಮಣ್ಣೆರಚುವ ಉದ್ದೇಶದಿಂದ ವಾಹನದ ಹೊರಭಾಗದಲ್ಲಿ ವೆಸ್ಟೇಜ್ ವಸ್ತುಗಳನ್ನು ತುಂಬಿ, ಒಳಭಾಗದಲ್ಲಿ ಮದ್ಯ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಗೋವಾದಿಂದ ಹೊರಡುವಾಗ ಎರಡು ಕಡೆ ಚೆಕ್ ಪೋಸ್ಟ್‌ಗಳಿದ್ದರೂ, ಅಕ್ರಮ ಮದ್ಯ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿದ್ದು ಹೇಗೆ ಎಂಬ ಗಂಭೀರ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ 400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಕಣಕುಂಬಿ ಬಳಿ ಚೆಕ್ ಪೋಸ್ಟ್ ಇದ್ದರೂ ರಾಜಾರೋಷವಾಗಿ ಮದ್ಯ ಸಾಗಾಟ ನಡೆದಿರುವುದು ಅಬಕಾರಿ ಇಲಾಖೆ ಮತ್ತು ಜಿಲ್ಲಾ ಪೊಲೀಸರ ಕಾರ್ಯವೈಖರಿಯ ಮೇಲೆ ಅನುಮಾನ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್