Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರ ವತಿಯಿಂದ ಕಣಬರಗಿ ಗ್ರಾಮದಲ್ಲಿ ಹೊಸದೊಂದು ಲೇಯೌಟ್ ಮಾಡಲಾಗುತ್ತಿದೆ. ಇದರ ಅಭಿವೃದ್ದಿಗಾಗಿ ನಗರಾಭಿವೃದ್ದಿ ಇಲಾಖೆ ನೂರು ಕೋಟಿ ವೆಚ್ಚದ ಟೆಂಡರ್ ಕರೆದಿದ್ದು ಇದೇ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಭೈರತಿ ಸುರೇಶ್ ನಡುವೆ ಫೈಟ್ ಶುರುವಾಗಿದೆ.

ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ & ಭೈರತಿ ಸುರೇಶ್
Follow us
Sahadev Mane
| Updated By: Ganapathi Sharma

Updated on: Nov 06, 2023 | 4:33 PM

ಬೆಳಗಾವಿ, ನವೆಂಬರ್ 6: ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ (Belagavi Politics) ಹೊರಗಿನವರು ಮೂಗು ತೂರಿಸುತ್ತಿರುವುದಕ್ಕೆ ಈಗಾಗಲೇ ಕೆಲವರ ಮೇಲೆ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ರಾಜಕೀಯ ವಿರೋಧಿಗಳಿಗೆ ಶಾಸಕರ ಪ್ರವಾಸದ ಹೆಸರಿನಲ್ಲಿ ಸಂದೇಶವನ್ನು ರವಾನಿಸುವ ಕೆಲಸ ಮಾಡಿದ್ದರು. ಈ ಮಧ್ಯೆ, ಇಬ್ಬರು ಪವರ್​​ಫುಲ್ ಸಚಿವರ ನಡುವೆ ಮತ್ತೊಂದು ಸುತ್ತಿನ ಕದನ ಶುರುವಾಗಿದೆ. ಬೆಳಗಾವಿ ಅಭಿವೃದ್ದಿ ಪ್ರಾಧಿಕಾರದಲ್ಲಿ ನೂರು ಕೋಟಿ ಪ್ರೊಜೆಕ್ಟ್ ಟೆಂಡರ್ ವಿಚಾರಕ್ಕೆ ಸತೀಶ್ ಮತ್ತು ಭೈರತಿ ಸುರೇಶ್ ನಡುವೆ ಮುಸುಕಿನ ಗುದ್ದಟ ಶುರುವಾಗಿದೆ.

ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರ ವತಿಯಿಂದ ಕಣಬರಗಿ ಗ್ರಾಮದಲ್ಲಿ ಹೊಸದೊಂದು ಲೇಯೌಟ್ ಮಾಡಲಾಗುತ್ತಿದೆ. ಇದರ ಅಭಿವೃದ್ದಿಗಾಗಿ ನಗರಾಭಿವೃದ್ದಿ ಇಲಾಖೆ ನೂರು ಕೋಟಿ ವೆಚ್ಚದ ಟೆಂಡರ್ ಕರೆದಿದ್ದು ಇದೇ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಭೈರತಿ ಸುರೇಶ್ ನಡುವೆ ಫೈಟ್ ಶುರುವಾಗಿದೆ. ಲೇಯೌಟ್​​ನಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಎಲ್ಲ ರೀತಿಯ ಅಭಿವೃದ್ದಿ ಮಾಡಲು ಈ ಟೆಂಡರ್ ಕರೆದಿದ್ದಾರೆ. ಇಲ್ಲಿ ಟೆಂಡರ್​ನ ನಗರಾಭಿವೃದ್ದಿ ಸಚಿವರು ಹೊರಗಿನ ರಾಜ್ಯದವರಿಗೆ ನೀಡ್ತಿದ್ದಾರಂತೆ. ಬೆಳಗಾವಿ ಜಿಲ್ಲೆಯ ಗುತ್ತಿಗೆದಾರರಿಗೆ ಟೆಂಡರ್ ನೀಡುವ ವಿಚಾರವಾಗಿ ಈಗಾಗಲೇ ಸತೀಶ್ ಜಾರಕಿಹೊಳಿ ಸಚಿವ ಭೈರತಿ ಸುರೇಶ್ ಜತೆ ಮಾತನಾಡಿದ್ದರು. ಅದಾಗಿಯೂ ಬೇರೆಯವರಿಗೆ ಟೆಂಡರ್ ಕೊಡ್ತಿರುವುದು ಸತೀಶ್ ಮುನಿಸಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಈ ಮಧ್ಯೆ, ಬೆಳಗಾವಿ ಜಿಲ್ಲೆಯ ಕೆಲ ಗುತ್ತಿಗೆದಾರರು ಸಚಿವ ಭೈರತಿ ಸುರೇಶ್ ಅವರನ್ನ ಭೇಟಿಯಾಗಿ ಸ್ಥಳೀಯರಿಗೆ ಟೆಂಡರ್ ನೀಡುವಂತೆ ಮನವಿ ಮಾಡಿದ್ರೂ ಸ್ಪಂದಿಸಿಲ್ಲವಂತೆ. ಇದರಿಂದ ಆಕ್ರೋಶಗೊಂಡ ಬೆಳಗಾವಿ ಜಿಲ್ಲಾ ಕಾರ್ಯನಿರತ ಗುತ್ತಿಗೆದಾರ ಸಂಘ ಮತ್ತು ಬೆಳಗಾವಿ ಮಹಾನಗರ ಪಾಲಿಕೆ ಗುತ್ತಿಗೆದಾರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಸಚಿವ ಭೈರತಿ ಸುರೇಶ್ ವಿರುದ್ದ ಧಿಕ್ಕಾರ ಕೂಗ್ತಾ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ಬಂದು ಡಿಸಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಭೈರತಿ ಸುರೇಶ್ ವಿರುದ್ಧ ಕಮಿಷನ್ ಆರೋಪ

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಗಮನಕ್ಕೆ ತಂದು ಇಂದು ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಹೊರಗಿನವರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡುವುದಿಲ್ಲ ಅಂತಾ ಹೇಳಿದ್ದಾರೆ. ಜತೆಗೆ ಭೈರತಿ ಸುರೇಶ್ ಅವರು ಪರ್ಸಂಟೇಜ್ ಪಡೆದುಕೊಂಡು ಹೊರಗಿನವರಿಗೆ ಈ ಟೆಂಡೆರ್ ಕೊಡ್ತಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಹೇಳಿದ ಮೇಲೆಯೂ ಈ ಟೆಂಡರ್ ಬೇರೆಯವರಿಗೆ ಕೊಡ್ತಿರುವುದು ಪರ್ಸಂಟೇಜ್​​ಗಾಗಿ ಅಂತಾ ಗಂಭೀರ ಆರೋಪವನ್ನ ಮಾಡಿದ್ದಾರೆ.

ಗುತ್ತಿಗೆದಾರ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಭೈರತಿ ಸುರೇಶ್, ಇನ್ನೂ ಒಂದು ಟೆಂಡರ್ ಕರೆದಿಲ್ಲಾ. ಈ ವರೆಗೂ ಯಾರಿಗೂ ಟೆಂಡರ್ ಕೊಟ್ಟಿಲ್ಲ. ಪಾರದರ್ಶಕವಾಗಿ ಟೆಂಡರ್ ನಡೆಯುತ್ತೆ, ಸಾಮರ್ಥ್ಯ ಇದ್ದವರು ತಗೊಳ್ತಾರೆ. ನನ್ನ ವಿರುದ್ಧ ಸುಮ್ಮನೇ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಬಗ್ಗೆ ಅನುಮಾನ ವ್ತಕ್ತಪಡಿಸಿದ ಮೋದಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ಸರ್ಕಾರದಲ್ಲಿ ತಮ್ಮ ಕೆಲಸಗಳು ಆಗ್ತಿಲ್ಲಾ, ಅನುದಾನ ಬರ್ತಿಲ್ಲ ಅಂತಾ ಕೆಲ ಶಾಸಕರು ಹೇಳಿಕೊಳ್ಳುವ ಹೊತ್ತಿನಲ್ಲೇ ಟೆಂಡರ್ ವಿಚಾರದಲ್ಲಿ ಸತೀಶ್ ಮತ್ತು ಭೈರತಿ ಸುರೇಶ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವುದು ಹೊರ ಬಂದಿದೆ. ಇತ್ತ ಗುತ್ತಿಗೆದಾರರು ಕೂಡ ಸಚಿವರ ವಿರುದ್ದ ಬೀದಿಗಿಳಿದಿದ್ದು ಹೊರಗಿನವರಿಗೆ ಇಲ್ಲಿ ಕೆಲಸ ಮಾಡಲು ಅವಕಾಶ ಕೊಡಲ್ಲಾ ಅಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್