AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ

ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಈಗ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರು ಫೈಟ್ ಶುರುವಾಗಿದೆ. ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕೆರಳಿರುವ ಸವದಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದ್ದು, ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಹಾಗಾದರೆ ಸತೀಶ್ ಜಾರಕಿಹೊಳಿ ಹೇಳಿದ್ದೇನು? ಸವದಿ ಬೆಂಬಲಿಗರು ಸಿಟ್ಟಾಗಿದ್ದೇಕೆ? ಇಲ್ಲಿದೆ ವಿವರ.

ಹೆಚ್ಚಾಯ್ತು ಸವದಿ - ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ
ಲಕ್ಷ್ಮಣ್ ಸವದಿ & ಸತೀಶ್ ಜಾರಕಿಹೊಳಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jun 08, 2024 | 2:40 PM

Share

ಚಿಕ್ಕೋಡಿ, ಜೂನ್ 8: ಲೋಕಸಭೆ ಚುನಾವಣೆ ವಿಚಾರವಾಗಿ ಶಾಸಕ ಲಕ್ಷ್ಮಣ್ (Laxman Savadi) ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಕ್ಕೆ ಇದೀಗ ಸವದಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ಲಕ್ಷ್ಮಣ್ ಸವದಿ ಬೆಂಬಲಿಗರು ಸುದ್ದಿಗೋಷ್ಠಿ ನಡೆಸಿದ್ದು, ಸಚಿವ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದರೊಂದಿಗೆ ಉಭಯ ನಾಯಕರ ನಡುವಣ ವಾಕ್ಸಮರ ಮತ್ತಷ್ಟು ಹೆಚ್ಚಾದಂತಾಗಿದೆ.

ಅಥಣಿಯಲ್ಲಿ ಪ್ರಾಮಾಣಿಕವಾಗಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾಗಿದೆ. ಅಥಣಿ ಶಾಸಕರ ಬಗ್ಗೆ ಸಚಿವರು ತಪ್ಪು ಕಲ್ಪನೆ ಹೊಂದಿದ್ದಾರೆ. ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಹಿಂಪಡೆಯಬೇಕು ಎಂದು ಸವದಿ ಬೆಂಬಲಿಗರು ಆಗ್ರಹಿಸಿದ್ದಾರೆ.

ಅಥಣಿಯಲ್ಲಿ ಮೂಲ ಕಾಂಗ್ರೆಸ್ಸಿಗರು ವಲಸಿಗರು ಎಂಬುದು ಇಲ್ಲ. ಸಚಿವರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದಾರೆ. ಆ ತಪ್ಪು ತಿಳುಕೆಯಿಂದ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ನಾವು ಒಂದು ವೇಳೆ ಬಿಜೆಪಿಗೆ ಬೆಂಬಲ ಮಾಡಿದ್ದರೆ, ಐವತ್ತು ಸಾವಿರ ಬಿಜೆಪಿಗೆ ಹೆಚ್ಚುವರಿ ಲೀಡ್ ಆಗುತಿತ್ತು. ಸಚಿವರು ಈ ಮಾತನ್ನು ವಾಪಸ್ ಪಡೆಯಬೇಕೆಂದು ಸವದಿ ಬೆಂಬಲಿಗರು ಆಗ್ರಹಿಸಿದ್ದಾರೆ.

ಏನು ಹೇಳಿದ್ದರು ಸವದಿ?

ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಲೋಕಸಭೆ ಚುನಾವಣೆಯಲ್ಲಿ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದು ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಶುಕ್ರವಾರ ಅಸಮಾಧಾನ ಹೊರಹಾಕಿದ್ದರು. ಅಥಣಿಯಲ್ಲಿ ಮಾತನಾಡಿದ್ದ ಅವರು, ಈಗ ಕಾಂಗ್ರೆಸ್​ಗೆ ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖಂಡರು ಬದಲಾದರೂ ಕಾರ್ಯಕರ್ತರು ಬದಲಾಗಲಿಲ್ಲ. ಅಥಣಿಯಲ್ಲಿ 20-30 ಸಾವಿರ ಲೀಡ್ ಸಿಗುತ್ತೆ ಅಂದುಕೊಂಡಿದ್ದೆವು. ಆದರೆ ಏನೋ ಮಾಡಲು ಹೋಗಿ ಇನ್ನೇನೋ ಆಯಿತು ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಕೊನೆಯ ವರೆಗೂ ಸಮಸ್ಯೆ: ಸವದಿ ವಿರುದ್ಧ ಸತೀಶ್ ಜಾರಕಿಹೊಳಿ‌ ಬಹಿರಂಗ ಅಸಮಾಧಾನ

ಈ ವಿಚಾರವಾಗಿ ಇಂದೂ ಸಹ ಪತ್ರಿಕಾಗೋಷ್ಠಿ ನಡೆಸಿದ್ದ ಸತೀಶ್ ಜಾರಕಿಹೊಳಿ, ಸವದಿ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸವದಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು