AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ: ಇನ್ನೂ ದೂರು ದಾಖಲಿಸಿಕೊಳ್ಳದ ಪೊಲೀಸರು, ಪ್ರಾಂಶುಪಾಲ ಸಚಿವರ ಆಪ್ತ ಎಂದ ಮಾಜಿ ಶಾಸಕ

ಬೆಳಗಾವಿಯ ಬೆಳಗುಂದಿ ಗ್ರಾಮದ ಶಾಲಾ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಪೋಷಕರು ಧರ್ಮದೇಟು ನೀಡಿದ್ದಾರೆ. ಅಶ್ಲೀಲ ಚಾಟ್ ಸಾಕ್ಷ್ಯಗಳ ನಡುವೆಯೂ ಪೊಲೀಸರು ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ರಾಜಕೀಯ ತಿರುವು ಪಡೆದಿರುವ ಈ ಪ್ರಕರಣದಲ್ಲಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿ, ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ: ಇನ್ನೂ ದೂರು ದಾಖಲಿಸಿಕೊಳ್ಳದ ಪೊಲೀಸರು, ಪ್ರಾಂಶುಪಾಲ ಸಚಿವರ ಆಪ್ತ ಎಂದ ಮಾಜಿ ಶಾಸಕ
ವೈರಲ್​​​ ಪೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on: Dec 13, 2025 | 6:16 PM

Share

ಬೆಳಗಾವಿ, ಡಿ.13: ಬೆಳಗಾವಿ (Belagavi) ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನೆನ್ನೆ (ಡಿ.12) ಗರ್ಲ್ಸ್​ ಹೈಸ್ಕೂಲ್‌ನ ಪ್ರಾಂಶುಪಾಲ ವಿದ್ಯಾರ್ಥಿನಿ ಜತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ ಎಂದು ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಕೆಲವು ದಿನಗಳಿಂದ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಗಳ ಜತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾನೆ ಎಂಬ ದೂರು ಕೇಳಿ ಬರುತ್ತಿತ್ತು. ಈ ಬಗ್ಗೆ ಪೋಷಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಸ್ಥಳೀಯ ನಾಯಕರಿಗೆ ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡು ವಿದ್ಯಾರ್ಥಿನಿಯರ ಪೋಷಕರು ಶಾಲೆಗೆ ಧಾವಿಸಿ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್​​​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಬಂದು ಪ್ರಾಂಶುಪಾಲನ್ನು ಕೊಠಡಿಯಿಂದ ಹೊರಗೆ ಎಳೆದುಕೊಂಡು ಬಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಕೆಲವರು ಕಲ್ಲಪ್ಪ ಬೆಳಗಾಂವಕರ್​ಗೆ ಧರ್ಮದೇಟು ನೀಡಿದ್ದಾರೆ. ಜತೆಗೆ ವಿದ್ಯಾರ್ಥಿನಿಗಳು ಕೂಡ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಆವರಣದಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಶಾಲೆ ಬಂದು ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್​​​ನ್ನು ರಕ್ಷಿಸಿದ್ದಾರೆ.

ಇನ್ನು ಈ ಘಟನೆ ನಡೆದು ಒಂದು ದಿನ ಕಳೆದರು ಪೊಲೀಸರು ಪ್ರಾಂಶುಪಾಲನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೀಗ ಈ ಪ್ರಕರಣಕ್ಕೆ ಸಾಕ್ಷಿಯಾಗಿ ವಿದ್ಯಾರ್ಥಿನಿ ಜೊತೆಗೆ ಅಶ್ಲೀಲ ಮೆಸೇಜ್ ಮಾಡಿದ ಚಾಟೀಂಗ್ ಕೂಡ ಸಿಕ್ಕಿದೆ. ಇನ್ನು ಈ ಬಗ್ಗೆ ಖುದ್ದು ವಿದ್ಯಾರ್ಥಿನಿಯೇ ಪೊಲೀಸ್​​ ಠಾಣೆಗೆ ಹೋಗಿ ದೂರು ನೀಡಿದ್ದಾಳೆ.ಅದರೂ ಪೊಲೀಸರು ಕ್ರಮ ಕೈಗೊಂಡಿಲ್ಲ.  ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಪೊಲೀಸರ ನಡೆಯ ಬಗ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಿನ್ಸಿಪಲ್ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಸಚಿವರ ಆಪ್ತ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಎಂದು ಶಾಸಕ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ

ಸಚಿವರ ಆಪ್ತ ಎಂಬ ಕಾರಣಕ್ಕೆ ಒತ್ತಡ ಹಾಕಿ ದೂರು ದಾಖಲಿಸಿಕೊಂಡಿಲ್ಲ, ವಿಚಾರಣೆ ಮಾಡಿ ಬಿಟ್ಟು ಕಳಿಸಿದ್ದಾರೆ. ಹೆಣ್ಣು ಮಗುವಿನ ಭವಿಷ್ಯದ ದೃಷ್ಟಿಯಿಂದ ರಾಜಕಾರಣ ಮಾಡಲ್ಲ. ಆದ್ರೇ ತಪ್ಪು ಮಾಡಿದ ಪ್ರಿನ್ಸಿಪಲ್ ಗೆ ಶಿಕ್ಷೆಯಾಗಬೇಕು. ಅಂದು ಸ್ಥಳೀಯ ಶಾಸಕಿ ಸಾರಾಯಿ ಕುಡಿತಾರೆ ಅಂದಿದ್ದಕ್ಕೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈಗ ಎಲ್ಲಿಗೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಎಂದು ರಾಜಕಾರಣ ಮಾಡೋದು ಬೇಡ, ಸಚಿವರ ಬಳಿಯೂ ಮನವಿ ಮಾಡುವೆ. ವಿದ್ಯಾರ್ಥಿನಿಗೆ ನ್ಯಾಯ ಸಿಗಲಿ ಪ್ರಿನ್ಸಿಪಲ್ ಗೆ ಶಿಕ್ಷೆ ಕೊಡಿಸಿ. ನೀವು ನ್ಯಾಯ ಕೊಡಿಸದಿದ್ದರೆ ನಿಮ್ಮ ತಂಗಿಗೆ ಮಗಳಿಗೆ ಅನ್ಯಾಯ ಮಾಡಿದಂತೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?