AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಹುಕ್ಕಾ ಬಾರ್ & ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ; 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ

ಬೆಳಗಾವಿ (Belagavi) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಹುಕ್ಕಾ ಬಾರ್(Hookah Bar) ಮತ್ತು ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 5.53 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದರೆ, ಹುಕ್ಕಾ, ರೋಲ್ ಪೇಪರ್, ಚಾರ್ಕಕೋಲ್, ವಿದೇಶಿ ಸಿಗರೆಟ್, ತಂಬಾಕಿನ ಪಾಕೇಟ್​ಗಳನ್ನು ಜಪ್ತಿ ಪಡೆಯಲಾಗಿದೆ.

ಬೆಳಗಾವಿ: ಹುಕ್ಕಾ ಬಾರ್ & ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ; 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ
ಪ್ರಾತಿನಿಧಿಕ ಚಿತ್ರ
Sahadev Mane
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 13, 2024 | 2:52 PM

Share

ಬೆಳಗಾವಿ, ಮಾ.13: ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸ್​ ಇಲಾಖೆ ಪಣತೊಟ್ಟಿದೆ. ಅದರಂತೆ ಇದೀಗ ಬೆಳಗಾವಿ (Belagavi) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಹುಕ್ಕಾ ಬಾರ್(Hookah Bar) ಮತ್ತು ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ದೇಶದಲ್ಲಿ ನಿಷೇಧಿತ ಇ-ಸಿಗರೆಟ್ ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿದೆ. ಜೊತೆಗೆ ಮಂಗಳೂರು ಮೂಲದ ಅಬುಬ್ಕರ್ ಸಿದ್ದಿಕ್, ಶಬಾಬ್ ಅಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ.

ಕೇಂದ್ರ ಸರ್ಕಾರದ ನಿಷೇಧ ಇದ್ರು ಮಾದಕ ವಸ್ತುಗಳ ಮಾರಾಟ

ಟಿಳಕವಾಡಿಯ ಗ್ಯಾಲರಿ ಸ್ಮೋಕ್ & ಚಾಕಲೇಟ್ ಗಿಫ್ಟ್ & ಮೋರ್ ಮೇಲೆ ದಾಳಿ ನಡೆಸಲಾಗಿದ್ದು, ಯಾವುದೇ ಲೈಸೆನ್ಸ್ ಇಲ್ಲದೇ ಅನಧಿಕೃತವಾಗಿ ಮಳಿಗೆಯಲ್ಲಿ ಸುರಂಗ ಮಾರ್ಗ ನಿರ್ಮಿಸಿ ಹುಕ್ಕಾ ಮಾರಾಟ ಮಾಡಲಾಗುತ್ತಿತ್ತು. ಮಾದಕ ವಸ್ತುಗಳ ಮಾರಾಟಕ್ಕೆ ಕೇಂದ್ರ ಸರ್ಕಾರದ ನಿಷೇಧವಿದ್ದರೂ ಕೂಡ ಮಾರಾಟ ಮಾಡಲಾಗಿತ್ತು. ಇನ್ನು ದಾಳಿ ವೇಳೆ 5.53 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದರೆ, ಹುಕ್ಕಾ, ರೋಲ್ ಪೇಪರ್, ಚಾರ್ಕಕೋಲ್, ವಿದೇಶಿ ಸಿಗರೆಟ್, ತಂಬಾಕಿನ ಪಾಕೇಟ್​ಗಳನ್ನು ಜಪ್ತಿ ಪಡೆಯಲಾಗಿದೆ. ಇನ್ನು ಕಾಲೇಜು ವಿದ್ಯಾರ್ಥಿಗಳಿಗೆ ಈ ಹುಕ್ಕಾ, ವಿದೇಶಿ ಸಿಗರೆಟ್ ಮರಾಟವಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ:ಕೋಲಾರದಲ್ಲಿ ಪುಟಾಣಿ‌ ‌ಮಕ್ಕಳಿಂದ ಸ್ಕೇಟಿಂಗ್‌ ಮಾಡುವ ಮೂಲಕ‌ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್​ನಲ್ಲಿ ಗ್ಯಾಸ್​ ಟ್ಯಾಂಕರ್ ಪಲ್ಟಿ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್​ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ. ಈ ಹಿನ್ನಲೆ ಗ್ಯಾಸ್ ಸೋರಿಕೆಯಾಗುತ್ತಿದ್ದು, ವಾಹನಗಳ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ. ಇದರಿಂದ ಸವಾರರು ಮಾರ್ಗ ಮಧ್ಯೆಯೇ ವಾಹನಗಳನ್ನು ನಿಲ್ಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Wed, 13 March 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ