AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 400 ಕೋಟಿ ರೂ ರಾಬರಿ; ಚೋರ್ಲಾ ಘಾಟ್​ನಲ್ಲೇ ದರೋಡೆ ನಡೆದಿದ್ದೇಕೆ? ಎಸ್​​ಪಿ ಹೇಳಿದ್ದಿಷ್ಟು

ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ರೂ ಬೃಹತ್ ದರೋಡೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತ ಕರ್ನಾಟಕ ಪೊಲೀಸರಿಂದಲೂ ದರೋಡೆ ತನಿಖೆ ಚುರುಕುಗೊಂಡಿದ್ದು, ನಾಸಿಕ್​​​ನಲ್ಲಿ ಡಿವೈಎಸ್​​ಪಿ ನೇತೃತ್ವದಲ್ಲಿ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​​ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಳಗಾವಿ: 400 ಕೋಟಿ ರೂ ರಾಬರಿ; ಚೋರ್ಲಾ ಘಾಟ್​ನಲ್ಲೇ ದರೋಡೆ ನಡೆದಿದ್ದೇಕೆ? ಎಸ್​​ಪಿ ಹೇಳಿದ್ದಿಷ್ಟು
ಎಸ್ಪಿ ಕೆ.ರಾಮರಾಜನ್, ಚೋರ್ಲಾ ಘಾಟ್
Sahadev Mane
| Edited By: |

Updated on:Jan 25, 2026 | 1:49 PM

Share

ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (robbery) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಹೇಳಿದ್ದಿಷ್ಟು

ನಗದರಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​, ಜನವರಿ 6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್​ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ ಆಗಿರಬಹುದು ಅಂತಾ ಪತ್ರದಲ್ಲಿತ್ತು ಎಂದು ಮಾಹಿತಿ ನೀಡಿದರು.

ವಿಶಾಲ್ ನಾಯ್ಡು ಎಂಬಾತ ನಾಸಿಕ್​ನಲ್ಲಿ ಅಕ್ಟೋಬರ್ 22ರಂದು ಸಂದೀಪ್ ಪಾಟೀಲ್ ಎಂಬಾತನ ಕಿಡ್ನ್ಯಾಪ್ ಮಾಡಿರುತ್ತಾರೆ. ಅಕ್ಟೋಬರ್ 16ರಂದು 400 ಕೋಟಿ ರೂ ಅಪಹರಣವಾಗಿದೆ. ಆ ಹಣ ಎಲ್ಲಿಗೆ ಹೋಗಿದೆ ಅಂತಾ ಪ್ರಶ್ನೆ ಮಾಡುತ್ತಾರೆ. ಈ ರಾಬರಿ ಆಗಿದ್ದು ಚೋರ್ಲಾ ಘಾಟ್​ನಲ್ಲಿ ಅಂತಾ ಪತ್ರದಲ್ಲಿ ಉಲ್ಲೇಖವಿದೆ. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್-ಇನ್ಸ್‌ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ ಎಂದರು.

ಇದನ್ನೂ ಓದಿ: ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

ಎಸ್ಐಟಿ ತಂಡ ಕೂಡ ರಚನೆ ಆಗಿದೆ. ಸಂದೀಪ್ ಪಾಟೀಲ್ ಬಳಿ ನಮ್ಮವರು ಮಾತಾಡಿದ್ದಾರೆ. ಆತ ಹೇಳಿರುವ ಪ್ರಕಾರ ಕಿಡ್ನ್ಯಾಪ್ ಮಾಡಿದವರು ಆತನಿಗೆ ದರೋಡೆ ಬಗ್ಗೆ ಹೇಳಿದ್ದಾರೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ. ಚೋರ್ಲಾ ಘಾಟ್​ನಲ್ಲಿ ಹೊಸದಾಗಿ ಸಿಸಿಟಿವಿ ಅಳವಡಿಕೆ ಮಾಡುತ್ತೇವೆ ಎಂದು ಎಸ್​​ಪಿ ಕೆ.ರಾಮರಾಜನ್ ಹೇಳಿದ್ದಾರೆ.

ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡಿದ್ದೇಕೆ?

ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಇರುವ ಚೋರ್ಲಾ ಘಾಟ್ ಪ್ರದೇಶದಲ್ಲಿ ನೆಟ್ವರ್ಕ್​ ಬರುವುದಿಲ್ಲ. ಗೋವಾದ ಕೇರಿಯಿಂದ ಬೆಳಗಾವಿಯ ಜಾಂಬೋಟಿವರೆಗೂ 4 ಗಂಟೆ ಸಂಪರ್ಕ ಕಡಿತಗೊಳ್ಳುತ್ತೆ. ಗೋವಾದಿಂದ ಚೋರ್ಲಾ ಘಾಟ್​​ಗೆ ಬರಲು 3 ಗಂಟೆ ಸಮಯ ಬೇಕು. ಚೋರ್ಲಾದಿಂದ ಮಹಾರಾಷ್ಟ್ರಕ್ಕೆ ಅರಣ್ಯ ಅಂಚಿನ ದಾರಿ ಕನೆಕ್ಟ್ ಆಗುತ್ತೆ. ಚೋರ್ಲಾದಲ್ಲಿ ಸಣ್ಣಪುಟ್ಟ ವಾಹನ ಹೋಗುವಷ್ಟು ಕಾಲುದಾರಿ ಇದೆ. ಕಂಟೇನರ್​ನಿಂದ ಮಿನಿ ಗೂಡ್ಸ್​​ಗೆ ಡಂಪ್ ಮಾಡಿ ಬಳಿಕ ಹಣ ಸಾಗಿಸಿದ್ರಾ, ಈ ಪ್ರದೇಶದಲ್ಲಿ ದರೋಡೆ ಮಾಡಿದರೆ ಯಾರಿಗೂ ಸಂಪರ್ಕ ಸಿಗೋದಿಲ್ಲ, ಹೀಗಾಗಿ ಈ ಎಲ್ಲಾ ವಿಚಾರಗಳಿಂದ ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

6 ಆರೋಪಿಗಳು ಅಂದರ್

400 ಕೋಟಿ ರೂ ದರೋಡೆ ಕೇಸ್​ಗೆ ಸಂಬಂಧಿಸಿದಂತೆ, ನಿನ್ನೆ ಐವರನ್ನ ಬಂಧಿಸಿದ್ದ ಮಹಾರಾಷ್ಟ್ರ ಎಸ್​ಐಟಿ ಅಧಿಕಾರಿಗಳು, ಇಂದು ಮತ್ತೊಬ್ಬನನ್ನ ಬಂಧಿಸಿದ್ದಾರೆ. ಜನವರಿ 23 ರಂದೇ ನಾಲ್ವರನ್ನ ಬಂಧಿಸಲಾಗಿತ್ತು. ಮಚೀಂದ್ರಾ ಮಾದವಿಯನ್ನ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:48 pm, Sun, 25 January 26