AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್

ಶನಿವಾರ(ಅಕ್ಟೋಬರ್ 19) ಒಂದೇ ದಿನ ದೇಶದ ವಿವಿಧ ವಿಮಾನಯಾನ ಸಂಸ್ಥೆಗೆ ಸೇರಿದ ಸುಮಾರು 30 ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಅದರಂತೆ ವಿಮಾನವೊಂದಕ್ಕೆ ಬಾಂಬ್​ ಇಟ್ಟಿರುವುದಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್​ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ
Sahadev Mane
| Edited By: |

Updated on: Oct 20, 2024 | 1:53 PM

Share

ಬೆಳಗಾವಿ, (ಅಕ್ಟೋಬರ್ 20): ಶಾಲೆ, ಹೋಟೆಲ್​ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಿನ್ನೆ (ಅಕ್ಟೋಬರ್ 19) ಒಂದೇ ದಿನ ವಿವಿಧ ವಿಮಾನ ಸಂಸ್ಥೆಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇದರಲ್ಲಿ ಚೆನ್ನೈ-ಬೆಳಗಾವಿ ವಿಮಾನವು ಸಹ ಸೇರಿದೆ. ಹೌದು… ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇ-ಮೇಲ್​ ಎಲ್ಲಿಂದ ಬಂದಿದೆ ಎನ್ನುವುದನ್ನು ತನಿಖೆ ನಡೆಸಿದ್ದಾರೆ.

ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್​ಪೋರ್ಟ್​ ಅಥಾರಿಟಿಗೆ ಮೇಲ್ ಬಂದಿದೆ. ಹೀಗಾಗಿ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಕಡಿತಗೊಳಸಲಾಗಿದೆ. ಇನ್ನು ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚೆಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಹೋಟೆಲ್​ಗಳಿಗೆ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಇದೀಗ ವಿಮಾನಯಾನ ಸಂಸ್ಥೆಗಳಿಗೂ ಕಾಲಿಟ್ಟಿದೆ.  ಕೇವಲ ಹುಸಿಬಾಂಬ್ ಬೆದರಿಕೆಯಾಗಿದ್ದು, ವಿಮಾನಯಾನ ಸಂಸ್ಥೆಗಳು ಹಾಗೂ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!