ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್

ಶನಿವಾರ(ಅಕ್ಟೋಬರ್ 19) ಒಂದೇ ದಿನ ದೇಶದ ವಿವಿಧ ವಿಮಾನಯಾನ ಸಂಸ್ಥೆಗೆ ಸೇರಿದ ಸುಮಾರು 30 ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಅದರಂತೆ ವಿಮಾನವೊಂದಕ್ಕೆ ಬಾಂಬ್​ ಇಟ್ಟಿರುವುದಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್​ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 20, 2024 | 1:53 PM

ಬೆಳಗಾವಿ, (ಅಕ್ಟೋಬರ್ 20): ಶಾಲೆ, ಹೋಟೆಲ್​ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಿನ್ನೆ (ಅಕ್ಟೋಬರ್ 19) ಒಂದೇ ದಿನ ವಿವಿಧ ವಿಮಾನ ಸಂಸ್ಥೆಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇದರಲ್ಲಿ ಚೆನ್ನೈ-ಬೆಳಗಾವಿ ವಿಮಾನವು ಸಹ ಸೇರಿದೆ. ಹೌದು… ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇ-ಮೇಲ್​ ಎಲ್ಲಿಂದ ಬಂದಿದೆ ಎನ್ನುವುದನ್ನು ತನಿಖೆ ನಡೆಸಿದ್ದಾರೆ.

ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್​ಪೋರ್ಟ್​ ಅಥಾರಿಟಿಗೆ ಮೇಲ್ ಬಂದಿದೆ. ಹೀಗಾಗಿ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಕಡಿತಗೊಳಸಲಾಗಿದೆ. ಇನ್ನು ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚೆಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಹೋಟೆಲ್​ಗಳಿಗೆ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಇದೀಗ ವಿಮಾನಯಾನ ಸಂಸ್ಥೆಗಳಿಗೂ ಕಾಲಿಟ್ಟಿದೆ.  ಕೇವಲ ಹುಸಿಬಾಂಬ್ ಬೆದರಿಕೆಯಾಗಿದ್ದು, ವಿಮಾನಯಾನ ಸಂಸ್ಥೆಗಳು ಹಾಗೂ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?