AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸತೀಶ್ ಜಾರಕಿಹೊಳಿ vs ಅಭಯ ಪಾಟೀಲ್​; ಬಿಜೆಪಿ ಶಾಸಕನ ಕಾಮಗಾರಿಯಲ್ಲಿ ಅಕ್ರಮ; ತನಿಖೆಗೆ ಆದೇಶಿಸಿದ ಪಿಡಬ್ಲೂಡಿ ಸಚಿವ

ಬೆಳಗಾವಿ ಬಿಜೆಪಿ ಶಾಸಕ ನಿರ್ಮಿಸಿದ ತಿನಿಸು ಕಟ್ಟೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತನಿಖೆಗೆ ಆಗಮಿಸಿದ್ದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಹೈಡ್ರಾಮಾ ಸೃಷ್ಟಿಸಿದ್ದಾರೆ.

ಬೆಳಗಾವಿ: ಸತೀಶ್ ಜಾರಕಿಹೊಳಿ vs ಅಭಯ ಪಾಟೀಲ್​; ಬಿಜೆಪಿ ಶಾಸಕನ ಕಾಮಗಾರಿಯಲ್ಲಿ ಅಕ್ರಮ; ತನಿಖೆಗೆ ಆದೇಶಿಸಿದ ಪಿಡಬ್ಲೂಡಿ ಸಚಿವ
ಬೆಳಗಾವಿ ತಿನಿಸು ಕಟ್ಟೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Nov 20, 2023 | 1:48 PM

Share

ಬೆಳಗಾವಿ ನ.20: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಬಿಜೆಪಿ ಶಾಸಕ ಅಭಯ ಪಾಟೀಲ್ (Abhay Patil) ನಡುವೆ ಬೆಳಗಾವಿ ಮಹಾನಗರ ಪಾಲಿಕೆ (Belagavi Municipal Corporation) ವಿಚಾರವಾಗಿ ಆರಂಭವಾದ ಫೈಟ್​ ಮತ್ತೊಂದು ಹಂತಕ್ಕೆ ತಲುಪಿದೆ. ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ತಿನಿಸು ಕಟ್ಟೆಯಲ್ಲಿ ಅಕ್ರಮ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ತಮ್ಮ ಇಲಾಖೆಯಿಂದಲೇ ತನಿಖೆ ಶರುಮಾಡಿಸಿದ್ದಾರೆ.

ಬಿಜೆಪಿ ಶಾಸಕ ಅಭಯ ಪಾಟೀಲ್ 2019-2020ರ‌ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 13 ಗುಂಟೆ ಜಾಗದಲ್ಲಿ ತಿನಿಸು ಕಟ್ಟೆ ನಿರ್ಮಾಣ ಮಾಡಿಸಿದ್ದರು. ಈ ತಿನಿಸು ಕಟ್ಟೆ ಮಳಿಗೆಗಳನ್ನು ಶಾಸಕ ಅಭಯ ಪಾಟೀಲ್​ ಅಕ್ರಮವಾಗಿ ತಮ್ಮ ಬೆಂಬಲಿಗರಿಗೆ ಹಂಚಿದ್ದಾರೆ ಮತ್ತು ನಾಲಾ ಮೇಲೆ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ಸರ್ಕಾರ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಮಾಜಿ ಪಾಲಿಕೆ ಸದಸ್ಯ ದೀಪಕ ಜಮಖಂಡಿ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು.

ಅಕ್ರಮದ ತನಿಖೆಗೆ ರಾಜ್ಯ ಲೋಕೋಪಯೋಗಿ ಇಲಾಖೆಯ 6 ಜನ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿದೆ. ಬೆಂಗಳೂರಿನ ದಕ್ಷಿಣ ಲೋಕೊಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ. ಅಧಿಕಾರಿಗಳು ಎಲ್ಲಾ ಮಳಿಗೆಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಒಬ್ಬರ ಹೆಸರಿನಲ್ಲಿ ಮಳಿಗೆ ಹರಾಜಾಗಿದ್ದು, ಅವರು ಮತ್ತೊಬ್ಬರಿಗೆ ಬಾಡಿಗೆಗೆ ನೀಡಿದ್ದಾರೆ. ಮಳಿಗೆಗಳಿಂದ ಸರ್ಕಾರಿ ಮೊತ್ತಕ್ಕಿಂತ ಹೆಚ್ಚು ಬಾಡಿಗೆ ಸಂಗ್ರಹಿಸಲಾಗುತ್ತಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ತನಿಖೆಗೆ ಆಗಮಿಸಿದ ಅಧಿಕಾರಿಗಳ ಎದುರು ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಹೈಡ್ರಾಮಾ ಸೃಷ್ಟಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಉಭಯ ನಾಯಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಅಧಿಕಾರಿಗಳು ತನಿಖೆ ನಡೆಸುತ್ತಾರೆ ನೀವು ಯಾಕೆ ಇಲ್ಲಿ ಬಂದಿರಿ? ಎಂದು ಸಚಿವ ಸತೀಶ್ ಜಾರಕಿಹೊಳಿ​ ಬೆಂಬಲಿಗರಿಗೆ ಅಭಯ್ ಪಾಟೀಲ್ ಬೆಂಬಲಿಗರು ಪ್ರಶ್ನಿಸಿದ್ದಾರೆ.

ಇದರಿಂದ ಇಬ್ಬರು ನಾಯಕರ ಬೆಂಬಲಿಗರ ನಡುವೆ ಗಲಾಟೆ, ವಾಗ್ವಾದ ನಡೆಯಿತು. ಇದನ್ನು ಕಂಡ ಪೊಲೀಸರು ಇಬ್ಬರು ಬೆಂಬಲಿಗರನ್ನು ಹೊರ ಕಳುಹಿಸಿದರು. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ