AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸತೀಶ್ ಜಾರಕಿಹೊಳಿ vs ಅಭಯ ಪಾಟೀಲ್​; ಬಿಜೆಪಿ ಶಾಸಕನ ಕಾಮಗಾರಿಯಲ್ಲಿ ಅಕ್ರಮ; ತನಿಖೆಗೆ ಆದೇಶಿಸಿದ ಪಿಡಬ್ಲೂಡಿ ಸಚಿವ

ಬೆಳಗಾವಿ ಬಿಜೆಪಿ ಶಾಸಕ ನಿರ್ಮಿಸಿದ ತಿನಿಸು ಕಟ್ಟೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತನಿಖೆಗೆ ಆಗಮಿಸಿದ್ದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಹೈಡ್ರಾಮಾ ಸೃಷ್ಟಿಸಿದ್ದಾರೆ.

ಬೆಳಗಾವಿ: ಸತೀಶ್ ಜಾರಕಿಹೊಳಿ vs ಅಭಯ ಪಾಟೀಲ್​; ಬಿಜೆಪಿ ಶಾಸಕನ ಕಾಮಗಾರಿಯಲ್ಲಿ ಅಕ್ರಮ; ತನಿಖೆಗೆ ಆದೇಶಿಸಿದ ಪಿಡಬ್ಲೂಡಿ ಸಚಿವ
ಬೆಳಗಾವಿ ತಿನಿಸು ಕಟ್ಟೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Nov 20, 2023 | 1:48 PM

ಬೆಳಗಾವಿ ನ.20: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಬಿಜೆಪಿ ಶಾಸಕ ಅಭಯ ಪಾಟೀಲ್ (Abhay Patil) ನಡುವೆ ಬೆಳಗಾವಿ ಮಹಾನಗರ ಪಾಲಿಕೆ (Belagavi Municipal Corporation) ವಿಚಾರವಾಗಿ ಆರಂಭವಾದ ಫೈಟ್​ ಮತ್ತೊಂದು ಹಂತಕ್ಕೆ ತಲುಪಿದೆ. ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ತಿನಿಸು ಕಟ್ಟೆಯಲ್ಲಿ ಅಕ್ರಮ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ತಮ್ಮ ಇಲಾಖೆಯಿಂದಲೇ ತನಿಖೆ ಶರುಮಾಡಿಸಿದ್ದಾರೆ.

ಬಿಜೆಪಿ ಶಾಸಕ ಅಭಯ ಪಾಟೀಲ್ 2019-2020ರ‌ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 13 ಗುಂಟೆ ಜಾಗದಲ್ಲಿ ತಿನಿಸು ಕಟ್ಟೆ ನಿರ್ಮಾಣ ಮಾಡಿಸಿದ್ದರು. ಈ ತಿನಿಸು ಕಟ್ಟೆ ಮಳಿಗೆಗಳನ್ನು ಶಾಸಕ ಅಭಯ ಪಾಟೀಲ್​ ಅಕ್ರಮವಾಗಿ ತಮ್ಮ ಬೆಂಬಲಿಗರಿಗೆ ಹಂಚಿದ್ದಾರೆ ಮತ್ತು ನಾಲಾ ಮೇಲೆ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ಸರ್ಕಾರ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಮಾಜಿ ಪಾಲಿಕೆ ಸದಸ್ಯ ದೀಪಕ ಜಮಖಂಡಿ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು.

ಅಕ್ರಮದ ತನಿಖೆಗೆ ರಾಜ್ಯ ಲೋಕೋಪಯೋಗಿ ಇಲಾಖೆಯ 6 ಜನ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿದೆ. ಬೆಂಗಳೂರಿನ ದಕ್ಷಿಣ ಲೋಕೊಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ. ಅಧಿಕಾರಿಗಳು ಎಲ್ಲಾ ಮಳಿಗೆಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಒಬ್ಬರ ಹೆಸರಿನಲ್ಲಿ ಮಳಿಗೆ ಹರಾಜಾಗಿದ್ದು, ಅವರು ಮತ್ತೊಬ್ಬರಿಗೆ ಬಾಡಿಗೆಗೆ ನೀಡಿದ್ದಾರೆ. ಮಳಿಗೆಗಳಿಂದ ಸರ್ಕಾರಿ ಮೊತ್ತಕ್ಕಿಂತ ಹೆಚ್ಚು ಬಾಡಿಗೆ ಸಂಗ್ರಹಿಸಲಾಗುತ್ತಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ತನಿಖೆಗೆ ಆಗಮಿಸಿದ ಅಧಿಕಾರಿಗಳ ಎದುರು ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಹೈಡ್ರಾಮಾ ಸೃಷ್ಟಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಉಭಯ ನಾಯಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಅಧಿಕಾರಿಗಳು ತನಿಖೆ ನಡೆಸುತ್ತಾರೆ ನೀವು ಯಾಕೆ ಇಲ್ಲಿ ಬಂದಿರಿ? ಎಂದು ಸಚಿವ ಸತೀಶ್ ಜಾರಕಿಹೊಳಿ​ ಬೆಂಬಲಿಗರಿಗೆ ಅಭಯ್ ಪಾಟೀಲ್ ಬೆಂಬಲಿಗರು ಪ್ರಶ್ನಿಸಿದ್ದಾರೆ.

ಇದರಿಂದ ಇಬ್ಬರು ನಾಯಕರ ಬೆಂಬಲಿಗರ ನಡುವೆ ಗಲಾಟೆ, ವಾಗ್ವಾದ ನಡೆಯಿತು. ಇದನ್ನು ಕಂಡ ಪೊಲೀಸರು ಇಬ್ಬರು ಬೆಂಬಲಿಗರನ್ನು ಹೊರ ಕಳುಹಿಸಿದರು. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!