AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ

ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರಲ್ಲಿ ಬೆಳಗಾವಿ ವಿಜ್ಞಾನಿ ನೀಡಿದ್ದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ
ಬೆಳಗಾವಿ
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2023 | 6:51 PM

Share

ಬೆಳಗಾವಿ, ಆ.23: ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಹೌದು, ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಇದೀಗ ಲ್ಯಾಂಡ್​ ಆಗಿದ್ದು, ಇಡೀ ಭಾರತೀಯರು ಹೆಮ್ಮೆಪಡುವಂತೆ ಮಾಡಿದೆ. ಜೊತೆಗೆ ಇದರಲ್ಲಿ ಕರ್ನಾಟಕದ ಬೆಳಗಾವಿ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಕ್ರಯೋಜನಿಕ್ ಸೆನ್ಸಾರ್ ಸಿದ್ದ ಪಡಿಸಿ ಚಂದ್ರಯಾನ-3ಗೆ ನೀಡಿದ್ದ ಬೆಳಗಾವಿಯ ವಿಜ್ಞಾನಿ ದೀಪಕ್ ಧಡೂತಿ

ಚಂದ್ರಯಾನ ಯಶಸ್ವಿ ಲ್ಯಾಂಡಿಗ್​ನಲ್ಲಿ ಬೆಳಗಾವಿಯ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಪ್ರಮುಖ ಪಾತ್ರ ವಹಿಸಿದೆ. ಹೌದು, ಈ ಹಿಂದೆ ಅಮೇರಿಕಾದಲ್ಲಿದ್ದ ವಿಜ್ಞಾನಿ ದೀಪಕ್ ಧಡೂತಿ ಅವರು ಅಬ್ದುಲ್ ಕಲಾಂ ಅವರ ಪ್ರೇರಣೆಯಿಂದ ಭಾರತಕ್ಕೆ ಬಂದು, ಬೆಳಗಾವಿಯಲ್ಲಿ ತಮ್ಮದೇ ಆದ ಸರ್ವೋಕಂಟ್ರೊಲ್ಸ್ ಏರೋಸ್ಪೇಸ್ ಮತ್ತು ಟೆಕ್ನಾಲಜಿ ಪ್ರಾ.ಲಿ ಎಂಬ ಹೆಸರಿನ ಸ್ವಂತ ಕಂಪನಿಯನ್ನು ಸ್ಥಾಪಿಸಿ, ಎಂಡಿ ಕೂಡ ಆಗಿದ್ದಾರೆ.

ಇದನ್ನೂ ಓದಿ:Chandrayaan-3: ಯೂಟ್ಯೂಬ್​ನಲ್ಲಿ ದಾಖಲೆ ಧೂಳೀಪಟ; ಇಲ್ಲಿದೆ ಅತಿಹೆಚ್ಚು ನೇರ ವೀಕ್ಷಣೆ ಕಂಡ ಘಟನೆಗಳ ಪಟ್ಟಿ; ಚಂದ್ರಯಾನ ಯಶಸ್ಸು ಕಂಡು ರೋಮಾಂಚಿತಗೊಂಡ ವೀಕ್ಷಕರು

ಲ್ಯಾಂಡ್ ಆಗಿರುವ ವಿಕ್ರಂ ನಲ್ಲಿದೆ ಕ್ರಯೋಜನಿಕ್ ಸೆನ್ಸಾರ್

ಕಳೆದ ಇಪ್ಪತ್ತು ವರ್ಷದಿಂದ ಬೆಳಗಾವಿಯಲ್ಲಿ ತಮ್ಮದೆ ಕಂಪನಿ ನಡೆಸುತ್ತಿರುವ ವಿಜ್ಞಾನಿ ದೀಪಕ್ ಧಡೂತಿಯವರು ಸ್ಥಾಪಿಸಿದ ಈ ಕಂಪನಿಯಲ್ಲಿ ಸೆನ್ಸಾರ್​ಗಳನ್ನು ಸಿದ್ದಪಡಿಸುತ್ತಾರೆ. ಹೌದು, ಚಂದ್ರಯಾನ-3ಗೆ ಕ್ರಯೋಜನಿಕ್ ಸೆನ್ಸಾರ್ ಸ್ಪೇಸ್‌ ಹೆಸರಿನ ಸೆನ್ಸಾರ್ ಸಿದ್ದಪಡಿಸಿ ಎರಡು ವರ್ಷದ ಹಿಂದೆ ನೀಡಿದ್ದರು. ಇದನ್ನು ಸೊಲಾರ ಪ್ಯಾನಲ್ ಎನರ್ಜಿ ಸಲುವಾಗಿ ಮತ್ತು ವಿಕ್ರಮ್​ನ ಮೊಮೆಂಟ್ ಕಂಟ್ರೋಲ್ಸೆನ್​ನಲ್ಲಿ ಇದನ್ನು ಬಳಕೆ ಮಾಡುತ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!