ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ

ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರಲ್ಲಿ ಬೆಳಗಾವಿ ವಿಜ್ಞಾನಿ ನೀಡಿದ್ದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ
ಬೆಳಗಾವಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 6:51 PM

ಬೆಳಗಾವಿ, ಆ.23: ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಹೌದು, ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಇದೀಗ ಲ್ಯಾಂಡ್​ ಆಗಿದ್ದು, ಇಡೀ ಭಾರತೀಯರು ಹೆಮ್ಮೆಪಡುವಂತೆ ಮಾಡಿದೆ. ಜೊತೆಗೆ ಇದರಲ್ಲಿ ಕರ್ನಾಟಕದ ಬೆಳಗಾವಿ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಕ್ರಯೋಜನಿಕ್ ಸೆನ್ಸಾರ್ ಸಿದ್ದ ಪಡಿಸಿ ಚಂದ್ರಯಾನ-3ಗೆ ನೀಡಿದ್ದ ಬೆಳಗಾವಿಯ ವಿಜ್ಞಾನಿ ದೀಪಕ್ ಧಡೂತಿ

ಚಂದ್ರಯಾನ ಯಶಸ್ವಿ ಲ್ಯಾಂಡಿಗ್​ನಲ್ಲಿ ಬೆಳಗಾವಿಯ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಪ್ರಮುಖ ಪಾತ್ರ ವಹಿಸಿದೆ. ಹೌದು, ಈ ಹಿಂದೆ ಅಮೇರಿಕಾದಲ್ಲಿದ್ದ ವಿಜ್ಞಾನಿ ದೀಪಕ್ ಧಡೂತಿ ಅವರು ಅಬ್ದುಲ್ ಕಲಾಂ ಅವರ ಪ್ರೇರಣೆಯಿಂದ ಭಾರತಕ್ಕೆ ಬಂದು, ಬೆಳಗಾವಿಯಲ್ಲಿ ತಮ್ಮದೇ ಆದ ಸರ್ವೋಕಂಟ್ರೊಲ್ಸ್ ಏರೋಸ್ಪೇಸ್ ಮತ್ತು ಟೆಕ್ನಾಲಜಿ ಪ್ರಾ.ಲಿ ಎಂಬ ಹೆಸರಿನ ಸ್ವಂತ ಕಂಪನಿಯನ್ನು ಸ್ಥಾಪಿಸಿ, ಎಂಡಿ ಕೂಡ ಆಗಿದ್ದಾರೆ.

ಇದನ್ನೂ ಓದಿ:Chandrayaan-3: ಯೂಟ್ಯೂಬ್​ನಲ್ಲಿ ದಾಖಲೆ ಧೂಳೀಪಟ; ಇಲ್ಲಿದೆ ಅತಿಹೆಚ್ಚು ನೇರ ವೀಕ್ಷಣೆ ಕಂಡ ಘಟನೆಗಳ ಪಟ್ಟಿ; ಚಂದ್ರಯಾನ ಯಶಸ್ಸು ಕಂಡು ರೋಮಾಂಚಿತಗೊಂಡ ವೀಕ್ಷಕರು

ಲ್ಯಾಂಡ್ ಆಗಿರುವ ವಿಕ್ರಂ ನಲ್ಲಿದೆ ಕ್ರಯೋಜನಿಕ್ ಸೆನ್ಸಾರ್

ಕಳೆದ ಇಪ್ಪತ್ತು ವರ್ಷದಿಂದ ಬೆಳಗಾವಿಯಲ್ಲಿ ತಮ್ಮದೆ ಕಂಪನಿ ನಡೆಸುತ್ತಿರುವ ವಿಜ್ಞಾನಿ ದೀಪಕ್ ಧಡೂತಿಯವರು ಸ್ಥಾಪಿಸಿದ ಈ ಕಂಪನಿಯಲ್ಲಿ ಸೆನ್ಸಾರ್​ಗಳನ್ನು ಸಿದ್ದಪಡಿಸುತ್ತಾರೆ. ಹೌದು, ಚಂದ್ರಯಾನ-3ಗೆ ಕ್ರಯೋಜನಿಕ್ ಸೆನ್ಸಾರ್ ಸ್ಪೇಸ್‌ ಹೆಸರಿನ ಸೆನ್ಸಾರ್ ಸಿದ್ದಪಡಿಸಿ ಎರಡು ವರ್ಷದ ಹಿಂದೆ ನೀಡಿದ್ದರು. ಇದನ್ನು ಸೊಲಾರ ಪ್ಯಾನಲ್ ಎನರ್ಜಿ ಸಲುವಾಗಿ ಮತ್ತು ವಿಕ್ರಮ್​ನ ಮೊಮೆಂಟ್ ಕಂಟ್ರೋಲ್ಸೆನ್​ನಲ್ಲಿ ಇದನ್ನು ಬಳಕೆ ಮಾಡುತ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ