AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ

ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರಲ್ಲಿ ಬೆಳಗಾವಿ ವಿಜ್ಞಾನಿ ನೀಡಿದ್ದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ
ಬೆಳಗಾವಿ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 6:51 PM

ಬೆಳಗಾವಿ, ಆ.23: ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಹೌದು, ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಇದೀಗ ಲ್ಯಾಂಡ್​ ಆಗಿದ್ದು, ಇಡೀ ಭಾರತೀಯರು ಹೆಮ್ಮೆಪಡುವಂತೆ ಮಾಡಿದೆ. ಜೊತೆಗೆ ಇದರಲ್ಲಿ ಕರ್ನಾಟಕದ ಬೆಳಗಾವಿ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಕ್ರಯೋಜನಿಕ್ ಸೆನ್ಸಾರ್ ಸಿದ್ದ ಪಡಿಸಿ ಚಂದ್ರಯಾನ-3ಗೆ ನೀಡಿದ್ದ ಬೆಳಗಾವಿಯ ವಿಜ್ಞಾನಿ ದೀಪಕ್ ಧಡೂತಿ

ಚಂದ್ರಯಾನ ಯಶಸ್ವಿ ಲ್ಯಾಂಡಿಗ್​ನಲ್ಲಿ ಬೆಳಗಾವಿಯ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಪ್ರಮುಖ ಪಾತ್ರ ವಹಿಸಿದೆ. ಹೌದು, ಈ ಹಿಂದೆ ಅಮೇರಿಕಾದಲ್ಲಿದ್ದ ವಿಜ್ಞಾನಿ ದೀಪಕ್ ಧಡೂತಿ ಅವರು ಅಬ್ದುಲ್ ಕಲಾಂ ಅವರ ಪ್ರೇರಣೆಯಿಂದ ಭಾರತಕ್ಕೆ ಬಂದು, ಬೆಳಗಾವಿಯಲ್ಲಿ ತಮ್ಮದೇ ಆದ ಸರ್ವೋಕಂಟ್ರೊಲ್ಸ್ ಏರೋಸ್ಪೇಸ್ ಮತ್ತು ಟೆಕ್ನಾಲಜಿ ಪ್ರಾ.ಲಿ ಎಂಬ ಹೆಸರಿನ ಸ್ವಂತ ಕಂಪನಿಯನ್ನು ಸ್ಥಾಪಿಸಿ, ಎಂಡಿ ಕೂಡ ಆಗಿದ್ದಾರೆ.

ಇದನ್ನೂ ಓದಿ:Chandrayaan-3: ಯೂಟ್ಯೂಬ್​ನಲ್ಲಿ ದಾಖಲೆ ಧೂಳೀಪಟ; ಇಲ್ಲಿದೆ ಅತಿಹೆಚ್ಚು ನೇರ ವೀಕ್ಷಣೆ ಕಂಡ ಘಟನೆಗಳ ಪಟ್ಟಿ; ಚಂದ್ರಯಾನ ಯಶಸ್ಸು ಕಂಡು ರೋಮಾಂಚಿತಗೊಂಡ ವೀಕ್ಷಕರು

ಲ್ಯಾಂಡ್ ಆಗಿರುವ ವಿಕ್ರಂ ನಲ್ಲಿದೆ ಕ್ರಯೋಜನಿಕ್ ಸೆನ್ಸಾರ್

ಕಳೆದ ಇಪ್ಪತ್ತು ವರ್ಷದಿಂದ ಬೆಳಗಾವಿಯಲ್ಲಿ ತಮ್ಮದೆ ಕಂಪನಿ ನಡೆಸುತ್ತಿರುವ ವಿಜ್ಞಾನಿ ದೀಪಕ್ ಧಡೂತಿಯವರು ಸ್ಥಾಪಿಸಿದ ಈ ಕಂಪನಿಯಲ್ಲಿ ಸೆನ್ಸಾರ್​ಗಳನ್ನು ಸಿದ್ದಪಡಿಸುತ್ತಾರೆ. ಹೌದು, ಚಂದ್ರಯಾನ-3ಗೆ ಕ್ರಯೋಜನಿಕ್ ಸೆನ್ಸಾರ್ ಸ್ಪೇಸ್‌ ಹೆಸರಿನ ಸೆನ್ಸಾರ್ ಸಿದ್ದಪಡಿಸಿ ಎರಡು ವರ್ಷದ ಹಿಂದೆ ನೀಡಿದ್ದರು. ಇದನ್ನು ಸೊಲಾರ ಪ್ಯಾನಲ್ ಎನರ್ಜಿ ಸಲುವಾಗಿ ಮತ್ತು ವಿಕ್ರಮ್​ನ ಮೊಮೆಂಟ್ ಕಂಟ್ರೋಲ್ಸೆನ್​ನಲ್ಲಿ ಇದನ್ನು ಬಳಕೆ ಮಾಡುತ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್