AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ: ಇಂಗ್ಲಿಷ್ ಬ್ಯಾನರ್​ಗಳಿಗೆ ಮಸಿ ಬಳಿದ ಕರವೇ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಇದಕ್ಕಾಗಿ ಇಂಗ್ಲಿಷ್ ಅಕ್ಷರಗಳಲ್ಲಿಯೂ ಬ್ಯಾನರ್​ಗಳನ್ನು ಹಾಕಲಾಗಿದೆ. ಇದನ್ನು ನೋಡಿದ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು, ಬ್ಯಾನರ್​ಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೆ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಅಧಿವೇಶನ: ಇಂಗ್ಲಿಷ್ ಬ್ಯಾನರ್​ಗಳಿಗೆ ಮಸಿ ಬಳಿದ ಕರವೇ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ
ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರ ಹೈಡ್ರಾಮ
Follow us
Sahadev Mane
| Updated By: Rakesh Nayak Manchi

Updated on: Nov 30, 2023 | 1:05 PM

ಬೆಳಗಾವಿ, ನ.30: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Belagavi Session) ಇಂಗ್ಲಿಷ್ ಭಾಷೆಗಳಲ್ಲಿ ಹಾಕಲಾದ ಬ್ಯಾನರ್​ಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ ಕಾರ್ಯಕರ್ತರು ಬಣ್ಣ ಬಲಿದಿದ್ದಲ್ಲದೆ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಜಾಹೀರಾತು ಫಲಕಗಳಲ್ಲಿ ಕನ್ನಡ ಭಾಷೆ ಬಳಸದೇ ಇರುವ ಹಿನ್ನೆಲೆ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಬ್ಯಾನರ್​ಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೆ, ಅಂತಹ ಜಾಹೀರಾತು ಬ್ಯಾನರ್​ಗಳನ್ನು ಹರಿದು ಹಾಕಿದ್ದಾರೆ. ನಂತರ ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ 4 ಜರ್ಮನ್ ಟೆಂಟ್, ಹೇಗಿದೆ? ಏನೆಲ್ಲಾ ವ್ಯವಸ್ಥೆ? ಇಲ್ಲಿದೆ ವಿವರ

ಈ ವೇಳೆ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆಯಿತು. ಕಾರ್ಯಕರ್ತರ ಕೈಯಲ್ಲಿದ್ದ ಮಸಿ ಬಳಿಯುವ ಕಪ್ಪು ಬಾಟಲಿಯನ್ನು ಪೊಲೀಸರು ಕಸಿದುಕೊಂಡರು. ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳ ಬಟ್ಟೆ ಮೇಲೆ ಚೆಲ್ಲಿದೆ. ಪೊಲೀಸರ ನಡೆಯನ್ನು ಖಂಡಿಸಿ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ಹೊರಹಾಕಿದರು.

ಪೊಲೀಸರ ಸಮ್ಮುಖದಲ್ಲಿಯೇ ಜಾಹೀರಾತು ಫಲಕ ಹರಿದುಹಾಕಿದ ಕರವೇ ಕಾರ್ಯಕರ್ತರು, ಜಿಲ್ಲಾಡಳಿತ, ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ