AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಆರೋಪಿಗಳು ಅರೆಸ್ಟ್​

ನವರಾತ್ರಿ ವೇಳೆ ದಾಂಡಿಯಾ ಆಡುವ ಸಂದರ್ಭದಲ್ಲಿ ಬಾಲಕಿಯನ್ನು ಎ1 ಬಾಲಕ ಪರಿಚಯ ಮಾಡಿಕೊಂಡಿದ್ದನು. ಬಾಲಕಿ ಜೊತೆಗೆ ಸ್ನೇಹ ಕೂಡ ಬೆಳಸಿದ್ದನು. ಬಳಿಕ ಬಾಲಕಿಗೆ ತನ್ನ ಸ್ನೇಹಿತರನ್ನೂ ಪರಿಚಯ ಮಾಡಿಕೊಟ್ಟಿದ್ದನು. ನಂತರ, ಆರೋಪಿ ಬಾಲಕಿಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ, ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ವಿಡಿಯೋ ರೇಕಾರ್ಡ್ ಮಾಡಿದ್ದರು. ಈ ವಿಡಿಯೋ ಇಟ್ಟುಕೊಂಡು ಆರೋಪಿಗಳು ಮಾಡಿದ್ದೇನು? ಆರು ತಿಂಗಳ ಬಳಿಕ ಬಾಲಕಿ ದೂರು ನೀಡಿದ್ದು ಏಕೆ? ಇಲ್ಲಿದೆ ವಿವರ

ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಆರೋಪಿಗಳು ಅರೆಸ್ಟ್​
ಎಪಿಎಂಸಿ ಪೊಲೀಸ್​ ಠಾಣೆ
Sahadev Mane
| Edited By: |

Updated on:Jun 02, 2025 | 10:22 PM

Share

ಬೆಳಗಾವಿ, ಜೂನ್​ 02: ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಇಬ್ಬರು ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು (APMC Police Station Belagavi) ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಶ್ಯಾಮ್ ನಾಯಕ್, ರಾಜು ಕಲ್ಕಿ, ಅಭಿಷೇಕ್​ನನ್ನು ಪೊಲೀಸರು ಬೆಳಗಾವಿ (Belagavi) ಫೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದ ಆರೋಪಿಗಳು

ಡಿಸೆಂಬರ್​ನಲ್ಲಿ ನವರಾತ್ರಿ ದಾಂಡಿಯಾ ಆಡುವ ಸಂದರ್ಭದಲ್ಲಿ ಬಾಲಕಿಗೆ ಎ1 ಬಾಲಕ ಪರಿಚಯವಾಗುತ್ತಾನೆ. ಬಾಲಕಿ ಜೊತೆಗೆ ಸ್ನೇಹ ಕೂಡ ಬೆಳಸಿದ್ದನು. ಬಳಿಕ ಬಾಲಕಿಗೆ ತನ್ನ ಸ್ನೇಹಿತರನ್ನೂ ಪರಿಚಯ ಮಾಡಿಕೊಟ್ಟಿದ್ದನು. ನಂತರ ಒಂದು ದಿನ ಹೊರಗೆ ಸುತ್ತಾಡಲು ಹೋಗೋಣ ಬಾ ಅಂತ ಬಾಲಕಿಯನ್ನು ನಗರದ ಹೊರ ವಲಯದ ಗುಡ್ಡದ ಮೇಲೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಹೋಗುತ್ತಿದ್ದಂತೆ ಬಾಲಕಿ ಮೇಲೆ ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ಅದನ್ನು ಮೊಬೈಲ್​ನಲ್ಲಿ ವಿಡಿಯೋ ರೇಕಾರ್ಡ್ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಈ ವಿಡಿಯೋ ಇಟ್ಟುಕೊಂಡು ಜನವರಿ ತಿಂಗಳಲ್ಲಿ ಮತ್ತೆ ಬಾಲಕಿಯನ್ನು ಹೊರಗೆ ಬರುವಂತೆ ಆರೋಪಿ ಕರೆದಿದ್ದಾರೆ. ಆರೋಪಿಯ ಬ್ಲ್ಯಾಕ್​ಮೇಲ್​ಗೆ ಭಯಗೊಂಡು ಬಾಲಕಿ ಆರೋಪಿಗಳ ಜೊತೆಗೆ ಹೋಗಿದ್ದಾಳೆ. ಈ ವೇಳೆಯೂ ಮೂರು ಜನ ಸೇರಿ ಮತ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಇದನ್ನೂ ಓದಿ
Image
ಬೆಳಗಾವಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ: 6 ಜನರಿಂದ ಕೃತ್ಯ
Image
ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ಮೇಲೆ ಅತ್ಯಾಚಾರ ಕೇಸ್ ಬೆನ್ನಲ್ಲೇ ಮಠ ಧ್ವಂಸ
Image
ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
Image
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ

ಇಷ್ಟಾದರೂ ಸಹಿಸಿಕೊಂಡಿದ್ದ ಬಾಲಕಿಗೆ ಆರೋಪಿ ಮತ್ತೆ ಕರೆ ಮಾಡಿದ್ದಾರೆ. ತಾವು ಕರೆದ ಜಾಗಕ್ಕೆ ಬರುವಂತೆ ಆರೋಪಿ ಹೇಳಿದ್ದಾರೆ. ಬರದಿದ್ದರೇ ವಿಡಿಯೋ ಲೀಕ್ ಮಾಡುತ್ತೇವೆ, ಜೊತೆಗೆ ಸಾಯಿಸುತ್ತೇವೆ ಅಂತ ಜೀವ ಬೆದರಿಕೆ ಹಾಕಿದ್ದಾನೆ. ಯಾವಾಗಾ ಬಾಲಕಿಗೆ ಮತ್ತೆ ಮತ್ತೆ ಕರೆ ಬರಲು ಆರಂಭಿಸಿತು ಅಗ ಭಯಗೊಂಡ ಬಾಲಕಿ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ.

ಆಗ, ಪೋಷಕರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಆರು ಮಂದಿಯ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ ಅಲರ್ಟ್ ಆದ ಎಪಿಎಂಸಿ ಠಾಣೆ ಪೊಲೀಸರು ಕೂಡಲೇ ಇಬ್ಬರು ಬಾಲ ಆರೋಪಿಗಳು ಸೇರಿದಂತೆ ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಮೂರು ಜನ ಆರೋಪಿಗಳಾದ ಶ್ಯಾಮ್ ನಾಯಕ್, ಅಭಿಷೇಕ್, ರಾಜು ಕಲ್ಕಿಯನ್ನು ಪೊಲೀಸರು ಫೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಮೂರು ಜನ ಹಿಂಡಲಗಾ ಜೈಲು ಸೇರಿದ್ದಾರೆ. ಇಬ್ಬರು ಬಾಲಾ ಆರೋಪಿಗಳನ್ನು ಬಾಲ ಭವನಕ್ಕೆ ಕಳುಹಿಸಲಾಗಿದೆ. ಆರೋಪಿಗಳ ಪೋನ್​ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳ ಮೊಬೈಲ್​ಗಳನ್ನು ಎಫ್ಎಸ್ಎಲ್​ಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: ರಾ.ಹೆ 4ರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್​, 3 ಸಾವು

ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದರಲ್ಲಿ ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇತ್ತ ಬಾಲಕಿಗೆ ಕೌನ್ಸಿಲ್ ಕೂಡ ಮಾಡಲು ಮುಂದಾಗಿದ್ದು ಆಕೆಗೆ ಪೊಲೀಸರು ಧೈರ್ಯ ತುಂಬುವ ಕೆಲಸ ಕೂಡ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:24 pm, Mon, 2 June 25

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ